AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿನಾಯಿಗಳ ಅಟ್ಟಹಾಸಕ್ಕೆ ನಲುಗಿದ ಬಳ್ಳಾರಿ ಜನರು, ಗಣಿನಾಡಿನ ಆಸ್ಪತ್ರೆಯಲ್ಲೂ ಸಿಗತ್ತಿಲ್ಲ ಚುಚ್ಚುಮದ್ದು!

ಬೀದಿನಾಯಿಗಳ ಅಟ್ಟಹಾಸಕ್ಕೆ ಬಳ್ಳಾರಿ ಜನರು ನಲುಗಿದ್ದು, ಗಣಿನಾಡಿನ ಆಸ್ಪತ್ರೆಯಲ್ಲೂ ಚಿಕಿತ್ಸೆ, ಚುಚ್ಚುಮದ್ದು ಸಿಗುತ್ತಿಲ್ಲ. ವಿಮ್ಸ್ ಆಸ್ಪತ್ರೆಯಲ್ಲಿ ಔಷಧಿಗಾಗಿ ರೋಗಿಗಳ ಪರದಾಡುತ್ತಿದ್ದು, ಹೊರಗಡೆಯಿಂದ ಔಷಧಿ ತರುವಂತೆ ವೈದ್ಯರು ಚೀಟಿ ನೀಡುತ್ತಿದ್ದಾರೆ.

ಬೀದಿನಾಯಿಗಳ ಅಟ್ಟಹಾಸಕ್ಕೆ ನಲುಗಿದ ಬಳ್ಳಾರಿ ಜನರು, ಗಣಿನಾಡಿನ ಆಸ್ಪತ್ರೆಯಲ್ಲೂ ಸಿಗತ್ತಿಲ್ಲ ಚುಚ್ಚುಮದ್ದು!
ಬೀದಿನಾಯಿಗಳ ಅಟ್ಟಹಾಸಕ್ಕೆ ನಲುಗಿದ ಬಳ್ಳಾರಿ ಜನರು, ಗಣಿನಾಡಿನ ಆಸ್ಪತ್ರೆಯಲ್ಲೂ ಸಿಗತ್ತಿಲ್ಲ ಚುಚ್ಚುಮದ್ದು!
TV9 Web
| Edited By: |

Updated on:Dec 04, 2022 | 4:48 PM

Share

ಬಳ್ಳಾರಿ: ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿ (street dogs attack) ಹೆಚ್ಚಾಗಿದೆ. ಬೀದಿ ನಾಯಿಗಳ ಅಟ್ಟಹಾಸದಿಂದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಹಲವು ಮಕ್ಕಳು ಪ್ರಾಣ ತೆತ್ತಿದ್ದಾರೆ. ಬೀದಿನಾಯಿಗಳ ಅಟ್ಟಹಾಸಕ್ಕೆ ಜನರು ನಲುಗುತ್ತಿದ್ದರೆ, ದಾಳಿಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆಯಲೆಂದು ಆಸ್ಪತ್ರೆಗೆ ಹೋದರೆ ಅಲ್ಲೂ ಔಷಧಿ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ವಿಮ್ಸ್ ಆಸ್ಪತ್ರೆ (VIMS Hospital)ಯಲ್ಲಿ ನಾಯಿ ಕಡಿತಕ್ಕೆ ಚುಚುಮದ್ದು ಸಹ ಸಿಗದೇ ಜನರು ಪರದಾಡುವಂತಾಗಿದೆ. ಡೆಡ್ಲಿ ಡಾಗ್ ಅಟ್ಯಾಕ್​ಗೆ ಬಳ್ಳಾರಿಯ ಮಕ್ಕಳು ಬಲಿಯಾಗಿದ್ದಾರೆ. ದಾಳಿಗೆ ಒಳಗಾದವರ ನರಳಾಟ ಹೇಳತೀರದು. ಆಸ್ಪತ್ರೆಯಲ್ಲೂಬ ಸರಿಯಾದ ಸರಿಯಾದ ಔಷಧಿ ಮತ್ತು ಚಿಕಿತ್ಸೆ ಸಿಗುತ್ತಿಲ್ಲ. ಮಕ್ಕಳನ್ನ ಮನೆಯಿಂದ ಆಚೇ ಕಳಿಸಲೂ ಪೋಷಕರು ಭಯ ಪಡುತ್ತಿದ್ದಾರೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಸೇರಿದಂತೆ ಪಕ್ಕದ ಆಂದ್ರಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ ಸದ್ಯ ವಿಮ್ಸ್ ಆಸ್ಪತ್ರೆಯಲ್ಲಿ ಬೀದಿನಾಯಿಗಳ ಕಡಿತಕ್ಕೆ ತುತ್ತಾದವರಿಗೆ ಚುಚ್ಚುಮದ್ದು ಸಹ ಸಿಗುತ್ತಿಲ್ಲ. ನಾಯಿ ಕಡಿತದ ನಂತರ ಇಂಜೇಕ್ಷನ್ ಪಡೆಯಲು ಆಸ್ಪತ್ರೆಗೆ ಬಂದರೆ ವೈದ್ಯರು ಹೊರಗಡೆಯಿಂದ ಔಷಧಿ ಖರೀದಿಸುವಂತೆ ಚೀಟಿ ನೀಡುತ್ತಿರುವುದು ರೋಗಿಗಳು ಮತ್ತು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ದಾವಣಗೆರೆ: ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದ್ದರೂ ಓಡಾಡಲು ಸರಿಯಾದ ಸೇತುವೆ ಇಲ್ಲದೇ ಪರದಾಡುತ್ತಿರುವ ಸಾರ್ವಜನಿಕರು

ನಾಯಿ ದಾಳಿಗೆ ಒಳಗಾದ ನನ್ನ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿಲ್ಲ, ಇಲ್ಲಿ ಚುಚ್ಚುಮದ್ದು ಇಲ್ಲ. ಬೆಂಗಳೂರಿಗೆ ಕರೆದುಕೊಂಡು ಹೋಗಿ, ಅಲ್ಲಿ ಚುಚ್ಚುಮದ್ದು ಸಿಗುತ್ತದೆ. ಇಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದರೆ ನನ್ನ ಮಗಳು ಬದುಕುತ್ತಿದ್ದಳು ಎಂದು ನಾಯಿ ಕಡಿತದಿಂದ ತನ್ನ ಮಗು ಕಳೆದಕೊಂಡ ತಾಯಿ ಗಾಯತ್ರಿ ಅಳಲು ತೋಡಿಕೊಂಡಿದ್ದಾರೆ.

ನಾಯಿ ಕಡಿತದ ನಂತರ ಚಿಕಿತ್ಸೆಗಾಗಿ ಚುಚ್ಚುಮದ್ದು ಪಡೆಯಲು ನಿತ್ಯ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಹತ್ತಾರು ಜನರು ಆಗಮಿಸುತ್ತಾರೆ. ಆದರೆ ವಿಮ್ಸ್ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ನೀಡುವ ರೆಬಿ-4 ಚುಚುಮದ್ದು ಸಾಕ್ಟ್ ಇಲ್ಲ ಅಂತಾ ವಿಮ್ಸ್ ಸಿಬ್ಬಂದಿ ಹೊರಗಡೆ ಚೀಟಿ ಬರೆದುಕೊಡುತ್ತಿದ್ದಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಠ ಪಕ್ಷ ಚುಚ್ಚುಮದ್ದು ಸಹ ಸಿಗದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಹಣವನ್ನ ಔಷಧಿ ಖರೀದಿಗೆ ಖರ್ಚು ಮಾಡುವ ವಿಮ್ಸ್ ಆಸ್ಪತ್ರೆ ನಾಯಿ ಕಡಿತಕ್ಕೆ ಚುಚ್ಚುಮದ್ದು ಸಹ ನೀಡಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ಔಷಧಿ ಇಲ್ಲವಲ್ಲ ಅಂತಾ ವಿಮ್ಸ್ ನಿರ್ದೇಶಕರನ್ನ ಪ್ರಶ್ನೆ ಮಾಡಿದರೆ ಅವರು ಹೇಳುವುದೇ ಬೇರೆ. ಹೊರಗಡೆ ಚೀಟಿ ಬರೆದುಕೊಟ್ಟ ಬಗ್ಗೆ ಮಾಹಿತಿ ಇಲ್ಲ. ಆದರೆ ನಮ್ಮಲ್ಲಿ ರೆಬಿ-4 ಚುಚ್ಚುಮದ್ದು ಸಾಕಷ್ಟಿದೆ ಎಂದು ಹೇಳುತ್ತಿದ್ದಾರೆ.

ಒಂದೆಡೆ ಬೀದಿನಾಯಿ, ಹುಚ್ಚು ನಾಯಿಗಳ ಅಟ್ಟಹಾಸಕ್ಕೆ ಬಳ್ಳಾರಿ ಜನರು ನಲುಗಿ ಹೋಗಿದ್ದರೆ ಇನ್ನೊಂದೆಡೆ ನಾಯಿ ಕಡಿತಕ್ಕೆ ಚಿಕಿತ್ಸೆ ಚುಚ್ಚುಮದ್ದು ನೀಡಬೇಕಾದ ಆಸ್ಪತ್ರೆಯಲ್ಲಿ ಇಂಜೇಕ್ಷನ್ ದೊರೆಯದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನಾದರೂ ಸರ್ಕಾರ ಕನಿಷ್ಟ ಪಕ್ಷ ಬೀದಿನಾಯಿಗಳ ಕಡಿತಕ್ಕೆ ಒಳಗಾದವರಿಗೆ ಚುಚ್ಚುಮದ್ದು ನೀಡಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಸರ್ಕಾರಿ ಆಸ್ಪತ್ರೆಗಳು ಇದ್ದರೂ ಇಲ್ಲದಂತಾಗುತ್ತದೆ.

ವರದಿ: ವೀರೇಶ್ ದಾನಿ, ಟಿವಿ9 ಬಳ್ಳಾರಿ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Sun, 4 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?