AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಬಳ್ಳಾರಿ ಬ್ಯಾನರ್ ಗಲಭೆ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೇ ಗಲಭೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಕೂಡ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು
ಬಳ್ಳಾರಿ ಬ್ಯಾನರ್ ಗಲಭೆ
ರಮೇಶ್​ ಎಮ್​.
| Edited By: |

Updated on:Jan 09, 2026 | 5:17 PM

Share

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.

25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು

ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್​​​ ಸಿಂಗ್​​ಗೆ ಸಂಬಂಧಿಸಿದ ಗನ್‌ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್​​ ಸಿಂಗ್ ಹೊರತು ಪಡಿಸಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​

ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು.

ಜನವರಿ 05ರಂದು ಪ್ರಮುಖ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದೇಶ ಬೆನ್ನಲ್ಲೇ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇನ್ನು ಬಳ್ಳಾರಿ ಬ್ಯಾನರ್ ಘರ್ಷಣೆ ವಿಚಾರವಾಗಿ ದಿನಕ್ಕೊಂದು ವಿಡಿಯೋ ಬಯಲಾಗುತ್ತಿವೆ. ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಬ್ಯಾನರ್ ಗಲಭೆಯ ಮತ್ತಷ್ಟು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯಕ್ರಿಯೆ ವೇಳೆ ಸ್ಮಶಾನದಲ್ಲಿನ ವ್ಯಕ್ತಿಯೊಬ್ಬ ಮೊದಲು ಮಣ್ಣು ಮಾಡಲು ಗುಂಡಿ ತೋಡಿ, ಆ ಬಳಿಕ ಮೃತದೇಹ ಸುಡಲಾಗುತ್ತೆ ಅನ್ನೋ ವಿಡಿಯೋ ರಿಲೀಸ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Fri, 9 January 26

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ