AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಮುಖ್ಯ ಶಿಕ್ಷಕಿ ಕರ್ತವ್ಯ ವಹಿಸಿಕೊಳ್ಳುವಾಗ ಬೈಬಲ್ ಬೋಧನೆ ಮಾಡಿದ ಪಾಸ್ಟರ್, ನೊಟೀಸ್ ನೀಡಿದ ಡಿಡಿಪಿಐ

ಬಳ್ಳಾರಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಮುಖ್ಯಶಿಕ್ಷಕಿಯಾಗಿ ಅಧಿಕಾರ ಸ್ವೀಕಾರ ಮಾಡುವ ವೇಳೆ ಚರ್ಚ್​ ಪಾಸ್ಟರ್ ಮೂಲಕ ಧರ್ಮಭೋಧನೆ ಮಾಡಿಸಿರುವ ಆರೋಪ ಕೇಳಿಬಂದಿದೆ.

ಬಳ್ಳಾರಿ: ಮುಖ್ಯ ಶಿಕ್ಷಕಿ ಕರ್ತವ್ಯ ವಹಿಸಿಕೊಳ್ಳುವಾಗ ಬೈಬಲ್ ಬೋಧನೆ ಮಾಡಿದ ಪಾಸ್ಟರ್, ನೊಟೀಸ್ ನೀಡಿದ ಡಿಡಿಪಿಐ
ಮುಖ್ಯ ಶಿಕ್ಷಕಿಯಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ
TV9 Web
| Edited By: |

Updated on: Nov 27, 2022 | 12:49 PM

Share

ಬಳ್ಳಾರಿ: ನಗರದ ಸರ್ಕಾರಿ ಶಾಲೆಯ ಜಾಯ್ ಡಿಬೋರಾ ಎಂಬ ಶಿಕ್ಷಕಿಯೊಬ್ಬರು ಮುಖ್ಯಶಿಕ್ಷಕಿಯಾಗಿ ಅಧಿಕಾರ ಸ್ವೀಕಾರ ಮಾಡುವ ವೇಳೆಯಲ್ಲಿ ಚರ್ಚ್​ ಪಾಸ್ಟರ್​ನನ್ನು ಕರೆಯಿಸಿ ಬೈಬಲ್ ಗ್ರಂಥವಿಟ್ಟು ಪ್ರಾರ್ಥನೆ, ಧರ್ಮಭೋಧನೆ ಮಾಡಿಸಿದ್ದಾರೆ. ಇದರ ಜೊತೆಗೆ ಮುಖ್ಯಶಿಕ್ಷಕಿ ತನ್ನ ಕುರ್ಚಿಯ ಮೇಲೆ ಪಾಸ್ಟರ್​ನನ್ನು ಕೂಡಿಸಿದ್ದಾರೆ. ಮುಖ್ಯ ಶಿಕ್ಷಕಿಯ ಅಧಿಕಾರ ಸ್ವೀಕಾರ ಸಮಾರಂಭದ ವೇಳೆ ಚರ್ಚ್​ ಪಾಸ್ಟರ್​ ಅವರಿಂದ ಧರ್ಮಭೋಧನೆ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಶಿಕ್ಷಕಿಯ ಈ ನಡೆಯ ವಿರುದ್ದ ಶಿಕ್ಷಣ ಸಚಿವರು ಸೇರಿದಂತೆ ಹಲವರಿಗೆ ದೂರು ಸಲ್ಲಿಕೆಯಾಗಿದೆ.

ಬಳ್ಳಾರಿಯ ಸರ್ಕಾರಿ ಗರ್ಲ್ಸ್ ಹೈಸ್ಕೂಲಿನ ಹಿಂದಿ ಶಿಕ್ಷಕಿ ಜಾಯ್ ಡಿಬೋರಾ ಮುಖ್ಯಶಿಕ್ಷಕಿಯಾಗಿ ಅಧಿಕಾರ ಸ್ವೀಕಾರ ಸಮಾರಂಭದ ವೇಳೆ ಚರ್ಚ್ ಪಾಸ್ಟರ್ ಕರೆಯಿಸಿ ಶಿಕ್ಷಕರಿಗೆ ಧರ್ಮ ಭೋಧನೆ ಮಾಡಿದ್ದಾರೆ ಅನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಇತ್ತೀಚಿಗೆ ಶಾಲೆಯ ಮುಖ್ಯಶಿಕ್ಷಕರಾಗಿ ಪ್ರಭಾರ ವಹಿಸಿಕೊಂಡ ಜಾಯ್ ಡಿಬೋರಾ ಎನ್ನುವವರು ಅಧಿಕಾರ ಸ್ವೀಕಾರ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಇದೇ ವೇಳೆ ನಗರದ ಚರ್ಚ್ ಪಾಸ್ಟರ್​ರೊಬ್ಬರನ್ನು ಶಾಲೆಗೆ ಕರೆಯಿಸಿ ಅಧಿಕಾರ ಸ್ವೀಕಾರದ ವೇಳೆ ಬೈಬಲ್ ಗ್ರಂಥವಿಟ್ಟು ಪ್ರಾರ್ಥನೆ ಮಾಡಿದ್ದಾರಂತೆ.

ಶಿಕ್ಷಕರಿಗೆ ಧರ್ಮಭೋಧನೆ ಮಾಡಿದ ಚರ್ಚ್​ ಪಾಸ್ಟರ್ ಶಾಲೆಯ ಹೆಡ್​ಮಾಸ್ಟರ್ ಕುರ್ಚಿಯ ಮೇಲೆ ಕುಳಿತಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಶಾಲೆಯ ಕೆಲ ಶಿಕ್ಷಕರು. ಸ್ಥಳೀಯರು ಮುಖ್ಯಶಿಕ್ಷಕಿಯ ವರ್ತನೆ ಹಾಗೂ ಅಧಿಕಾರ ದುರುಪಯೋಗದ ವಿರುದ್ದ ಶಿಕ್ಷಣ ಸಚಿವರು. ಡಿಡಿಪಿಐ, ಡಿಸಿಯವರಿಗೆ ಲಿಖಿತವಾಗಿ ದೂರು ಸಲ್ಲಿಸಿದ್ದಾರೆ. ಡಿಡಿಪಿಐ ಅವರು ಪಾಸ್ಟರ್ ಶಾಲೆಯ ಹೆಡ್​ಮಾಸ್ಟರ್ ಕುರ್ಚಿಯ ಮೇಲೆ ಕುಳಿಸಿರುವುದಕ್ಕೆ ಸೋಮವಾರ ಲಿಖಿತವಾಗಿ ಉತ್ತರ ನೀಡಬೇಕು ಎಂದು ಮುಖ್ಯ ಶಿಕ್ಷಕಿಗೆ ದೂರವಾಣಿ ಕರೆಯ ಮೂಲಕ ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಶಿಕ್ಷಕಿ, ‘ಪಾಸ್ಟರ್ ಬಂದಿದ್ದು ಸತ್ಯ. ಅವರು ನನ್ನ ಸಹೋದರ. ಅಧಿಕಾರ ಸ್ವೀಕಾರ ಮಾಡಿದಕ್ಕೆ ಶುಭಾಶಯ ಕೋರಲು ಬಂದಿದ್ದರು. ಆದರೆ ಶಾಲೆಯ ಶಿಕ್ಷಕರಿಗೆ ಧರ್ಮಭೋಧನೆ ಮಾಡಿಲ್ಲ, ಬೈಬಲ್ ಗ್ರಂಥವಿಟ್ಟು ಪ್ರಾರ್ಥನೆ ಮಾಡಿಲ್ಲ’ ಎಂದು ತಿಳಿಸಿದರು.

ವರದಿ: ವೀರೇಶ್​ ದಾನಿ ಟಿವಿ9 ಬಳ್ಳಾರಿ

ಇದನ್ನೂ ಓದಿ: ಬಳ್ಳಾರಿ: ನಕಲಿ ಹತ್ತಿ ಬೀಜ ಬಿತ್ತಿ ಮೋಸ ಹೋದ ಅನ್ನದಾತರು; ಕೈಯಿಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ರೈತರ ಪರಿಸ್ಥಿತಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?