AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 30, 2022 | 11:42 AM

Share

ಬಳ್ಳಾರಿ: ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕೊಲೆ (Murder) ನಡೆದು 12 ವರ್ಷಗಳ ಬಳಿಕ ಕೊಲೆ ಕೇಸ್ ಮತ್ತೆ ಸುದ್ದಿಯಾಗಿದ್ದು, ಜನಾರ್ದನ ರೆಡ್ಡಿ (Janardhan Reddy) A1 ಎಂದು ಪದ್ಮಾವತಿ ಸಹೋದರ ಸುಬ್ಬರಾಯಡು ಆರೋಪ ಮಾಡುತ್ತಿದ್ದಾರೆ. ಸಿಐಡಿ ಸೂಕ್ತ ತನಿಖೆ ನಡೆಸದ ಆರೋಪ ಕೇಳಿಬಂದಿದ್ದು, ಸುಬ್ಬರಾಯಡು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಆದರೆ ಸಮಾಧಾನವಾಗುತ್ತದೆ ಎಂದು ಸುಬ್ಬರಾಯಡು ಅಭಿಪ್ರಾಯಪಟ್ಟಿದ್ದಾರೆ.

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಎಸ್​ಪಿ ಕುರಾದೆ A2 ಆರೋಪಿ ಎಂದ ಪದ್ಮಾವತಿ ಸಹೋದರ, ನನ್ನ ಹೇಳಿಕೆಯನ್ನೇ ಪೊಲೀಸರು ಸರಿಯಾಗಿ ದಾಖಲಿಸಿಲ್ಲ ಅಂತ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಮಹಾನಿರ್ದೇಶಕರಿಗೆ ಒಳಾಡಳಿತ ಇಲಾಖೆಯಿಂದ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಪತ್ರದ ಬಳಿಕ ಪದ್ಮಾವತಿ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಬಳ್ಳಾರಿಯಲ್ಲಿ ಫೆಬ್ರವರಿ 4, 2010ಕ್ಕೆ ಮಾಜಿ ಕಾರ್ಪೊರೇಟರ್ ಪದ್ಮಾವತಿ ಅವರು ಕೊಲೆಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಅಂದಿನ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ ತನಿಖೆ ವಿಳಂಬವಾಗಿತ್ತು. ಅಲ್ಲದೆ ತನಿಖೆ ಮೇಲೆ ರಾಜಕೀಯ ಪ್ರಭಾವ ಬೀರಿದೆ ಅಂರ ಆರೋಪಿಸಿದ ಪದ್ಮಾವತಿ ಸಹೋದರ ಸುಬ್ಬರಾಯುಡು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಳ್ಳಾರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. 2017ರಲ್ಲಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ

Coronavirus Cases in India: ಭಾರತದಲ್ಲಿ 2.34 ಲಕ್ಷ ಹೊಸ ಕೊವಿಡ್-19 ಪ್ರಕರಣಗಳು, 893 ಸಾವು ದಾಖಲು

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Published On - 11:41 am, Sun, 30 January 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ