ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ

ಬಳ್ಳಾರಿ: ಆರೋಗ್ಯ ಸಚಿವ ಬಿ ಶ್ರೀರಾಮುಲು ಊರಲ್ಲೇ ಬೆಂಕಿ ಅವಘಡ ಸಂಭವಿಸಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ಒಳಗಿದ್ದ ರೋಗಿಗಳನ್ನು ಹೊರ ಕಳಿಸಿದ್ದಾರೆ. ಸುಮಾರು 100 ಹಾಸಿಗೆ ಇದ್ದ ಸರ್ಕಾರಿ ಆಸ್ಪತ್ರೆ ಒಳ ಭಾಗ ಬೆಂಕಿಗೆ ಸುಟ್ಟು ಹೋಗಿದೆ. ಬೆಂಕಿಗೆ ಆಸ್ಪತ್ರೆ ಸುತ್ತ ದಡ್ಡ ಹೊಗೆ ಅವರಿಸಿದ್ದು, ಸಿಬ್ಬಂದಿ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು […]

ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ
ಸಾಧು ಶ್ರೀನಾಥ್​

Updated on: Jan 29, 2020 | 4:55 PM

ಬಳ್ಳಾರಿ: ಆರೋಗ್ಯ ಸಚಿವ ಬಿ ಶ್ರೀರಾಮುಲು ಊರಲ್ಲೇ ಬೆಂಕಿ ಅವಘಡ ಸಂಭವಿಸಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ಒಳಗಿದ್ದ ರೋಗಿಗಳನ್ನು ಹೊರ ಕಳಿಸಿದ್ದಾರೆ.

ಸುಮಾರು 100 ಹಾಸಿಗೆ ಇದ್ದ ಸರ್ಕಾರಿ ಆಸ್ಪತ್ರೆ ಒಳ ಭಾಗ ಬೆಂಕಿಗೆ ಸುಟ್ಟು ಹೋಗಿದೆ. ಬೆಂಕಿಗೆ ಆಸ್ಪತ್ರೆ ಸುತ್ತ ದಡ್ಡ ಹೊಗೆ ಅವರಿಸಿದ್ದು, ಸಿಬ್ಬಂದಿ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುವುದು ಇನ್ನು ತಿಳಿದುಬಂದಿಲ್ಲ. ಆದರೆ ಪ್ರಾಣ ಕಾಪಾಡುವ ಆಸ್ಪತ್ರೆಯಲ್ಲಿ ಯಾರದೋ ನಿರ್ಲಕ್ಷ್ಯದಿಂದ ಆತಂಕ ಎದುರಿಸುವಂತಾಗಿದ್ದು ವಿಪರ್ಯಾಸ.

Published On - 4:39 pm, Wed, 29 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us