AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಶಾಸಕ ಭರತ್ ರೆಡ್ಡಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್

ಬಳ್ಳಾರಿ ನಗರ ಶಾಸಕ ಭರತ ರೆಡ್ಡಿಗೂ ಹುಲಿ ಉಗುರು ಪರಚಿದೆ. ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಫೋಟೋ ಸಾಮಾಜಿಕ ಪೆಂಡೆಂಟ್ ವೈರಲ್ ಆಗಿದೆ. ಪೋಟೋ ವೈರಲ್ ಬಗ್ಗೆ ಶಾಸಕ ಭರತ್ ರೆಡ್ಡಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

ಹುಲಿ ಉಗುರು ವಿವಾದ: ಶಾಸಕ ಭರತ್ ರೆಡ್ಡಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್
ಶಾಸಕ ಭರತ ರೆಡ್ಡಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: ವಿವೇಕ ಬಿರಾದಾರ|

Updated on: Oct 28, 2023 | 3:15 PM

Share

ಬಳ್ಳಾರಿ ಅ.28: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಹುಲಿ ಉಗುರು (Tiger Claw) ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ (Sandalwood) ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂದಿತ್ತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜ್ಯ ಸರ್ಕಾರದ ಶಾಸಕರು, ಮಂತ್ರಿಗಳ ಕುಟುಂಬಸ್ಥರು ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲ್​ ಆಗುತ್ತಿವೆ. ಇದೀಗ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ (Bharth Reddy) ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್ ಆಗಿದೆ.

ಶಾಸಕ ಭರತ ರೆಡ್ಡಿ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಫೋಟೋ ಸಾಮಾಜಿಕ ಪೆಂಡೆಂಟ್ ವೈರಲ್ ಆಗಿದೆ. ಪೋಟೋ ವೈರಲ್ ಬಗ್ಗೆ ಶಾಸಕ ಭರತ್ ರೆಡ್ಡಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. ನಾನು ಹಾಕಿರೋದು ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಅದು ಸಿಂಥೆಟಿಕ್ ಹುಲಿ ಉಗುರಿನ ಪೆಂಡೆಂಟ್ ಎಂದಿದ್ದಾರೆ.

ಇದನ್ನೂ ಓದಿ: ಚಿನ್ನಾಭರಣ ತಯಾರಕರಿಗೆ ಹುಲಿ ಉಗುರು ಹೆಸರಿನಲ್ಲಿ ಟಾರ್ಚಾರ್ ಕೊಡುತ್ತಿದ್ದಾರೆ -ಟಿ ಎ ಶರವಣ

ಸಾಮಾನ್ಯವಾಗಿ ಅಷ್ಟು ಸುಲಭವಾಗಿ ಹುಲಿ ಉಗುರುಗಳು ಸಿಗಲ್ಲ. ಗೋಲ್ಡ್ ಶಾಪ್​ನಲ್ಲಿ ಹುಲಿ ಉಗುರಿನ ಸಿಂಥೆಟಿಕ್ ಪೆಂಡೆಂಟ್ ಸಿಗುತ್ತವೆ. ಈಗ ಸಿಕ್ಕಿರುವ ಪೆಂಡೆಂಟ್​​ಗಳು ಬಹುತೇಕ ಸಿಂಥೆಟಿಕ್ ಎನ್ನುವುದು ನನ್ನ ಅಭಿಪ್ರಾಯ. ಹುಲಿ ಉಗುರುಗಳು ಅಷ್ಟು ಸುಲಭವಾಗಿ ಸಿಗುವುದಿಲ್ಲ. ಭಾರತದಲ್ಲಿ ಹುಲಿಗಳನ್ನು ರಕ್ಷಣೆ ಮಾಡಿಕೊಂಡು ಬಂದಿದ್ದೇವೆ. ಅಭಿಯಾನದ ರೀತಿಯಲ್ಲಿ ಪೋಟೋ ವೈರಲ್ ಆಗುತ್ತಿವೆ. ಅದೇ ರೀತಿಯಲ್ಲಿ ನನ್ನ ಪೋಟೋ ಕೂಡಾ ವೈರಲ್ ಆಗಿದೆ. ಸಿಂಥೆಟಿಕ್​ ಹುಲಿ ಉಗುರು ಸಿಗುವ ವಿಳಾಸ ನಿಮಗೂ ಕೊಡುತ್ತೇನೆ, ನೀವು ಖರೀದಿ ಮಾಡಬಹುದು ಎಂದು ವ್ಯಂಗ್ಯವಾಡಿದರು.

ಏನಿದು ಹುಲಿ ಉಗುರು ವಿವಾದ

ಹುಲಿ ಉಗುರು ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆತಂದಿದ್ದರು. ವರ್ತೂರು ಸಂತೋಷ್​​​ ಅವರಿಗೆ ಜಾಮೀನು ಸಿಕ್ಕಿದೆ. ಇವರ ಬಂಧನ ಬಳಿಕ ಹುಲಿ ಉಗುರು ಪ್ರಕರಣದ ರಾಜ್ಯದಲ್ಲಿ ಒಂದು ಮಟ್ಟಿಗೆ ಕಾವು ಎದ್ದಿತ್ತು. ಆದರೆ ಯಾವಾಗ ಕನ್ನಡದ ಖ್ಯಾತ ಚಲನಚಿತ್ರ ನಟರೂ ಹುಲಿ ಉಗುರು ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು ಈ ಕಾವು ಜಾಸ್ತಿ ಆಯ್ತು. ಈ ಹುಲಿ ಉಗುರು ರಾಜಕಾರಣಿ, ಅಧಿಕಾರಿಗಳಿಗೆ ಮಾತ್ರವಲ್ಲದೆ ಸ್ವಾಮೀಜಿಗಳಿಗೂ ಪರಚಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ