AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ವಿವಾದ: ಶಾಸಕ ಭರತ್ ರೆಡ್ಡಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್

ಬಳ್ಳಾರಿ ನಗರ ಶಾಸಕ ಭರತ ರೆಡ್ಡಿಗೂ ಹುಲಿ ಉಗುರು ಪರಚಿದೆ. ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಫೋಟೋ ಸಾಮಾಜಿಕ ಪೆಂಡೆಂಟ್ ವೈರಲ್ ಆಗಿದೆ. ಪೋಟೋ ವೈರಲ್ ಬಗ್ಗೆ ಶಾಸಕ ಭರತ್ ರೆಡ್ಡಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

ಹುಲಿ ಉಗುರು ವಿವಾದ: ಶಾಸಕ ಭರತ್ ರೆಡ್ಡಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್
ಶಾಸಕ ಭರತ ರೆಡ್ಡಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ| Edited By: ವಿವೇಕ ಬಿರಾದಾರ|

Updated on: Oct 28, 2023 | 3:15 PM

Share

ಬಳ್ಳಾರಿ ಅ.28: ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ಹುಲಿ ಉಗುರು (Tiger Claw) ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಧರಿಸಿರುವ ರಾಜ್ಯದ ವಿಐಪಿ ಮಂದಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ (Sandalwood) ಪ್ರಮುಖರ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಕೇಳಿಬಂದಿತ್ತು. ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜ್ಯ ಸರ್ಕಾರದ ಶಾಸಕರು, ಮಂತ್ರಿಗಳ ಕುಟುಂಬಸ್ಥರು ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲ್​ ಆಗುತ್ತಿವೆ. ಇದೀಗ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ (Bharth Reddy) ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಪೋಟೋ ವೈರಲ್ ಆಗಿದೆ.

ಶಾಸಕ ಭರತ ರೆಡ್ಡಿ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವ ಫೋಟೋ ಸಾಮಾಜಿಕ ಪೆಂಡೆಂಟ್ ವೈರಲ್ ಆಗಿದೆ. ಪೋಟೋ ವೈರಲ್ ಬಗ್ಗೆ ಶಾಸಕ ಭರತ್ ರೆಡ್ಡಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. ನಾನು ಹಾಕಿರೋದು ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಅದು ಸಿಂಥೆಟಿಕ್ ಹುಲಿ ಉಗುರಿನ ಪೆಂಡೆಂಟ್ ಎಂದಿದ್ದಾರೆ.

ಇದನ್ನೂ ಓದಿ: ಚಿನ್ನಾಭರಣ ತಯಾರಕರಿಗೆ ಹುಲಿ ಉಗುರು ಹೆಸರಿನಲ್ಲಿ ಟಾರ್ಚಾರ್ ಕೊಡುತ್ತಿದ್ದಾರೆ -ಟಿ ಎ ಶರವಣ

ಸಾಮಾನ್ಯವಾಗಿ ಅಷ್ಟು ಸುಲಭವಾಗಿ ಹುಲಿ ಉಗುರುಗಳು ಸಿಗಲ್ಲ. ಗೋಲ್ಡ್ ಶಾಪ್​ನಲ್ಲಿ ಹುಲಿ ಉಗುರಿನ ಸಿಂಥೆಟಿಕ್ ಪೆಂಡೆಂಟ್ ಸಿಗುತ್ತವೆ. ಈಗ ಸಿಕ್ಕಿರುವ ಪೆಂಡೆಂಟ್​​ಗಳು ಬಹುತೇಕ ಸಿಂಥೆಟಿಕ್ ಎನ್ನುವುದು ನನ್ನ ಅಭಿಪ್ರಾಯ. ಹುಲಿ ಉಗುರುಗಳು ಅಷ್ಟು ಸುಲಭವಾಗಿ ಸಿಗುವುದಿಲ್ಲ. ಭಾರತದಲ್ಲಿ ಹುಲಿಗಳನ್ನು ರಕ್ಷಣೆ ಮಾಡಿಕೊಂಡು ಬಂದಿದ್ದೇವೆ. ಅಭಿಯಾನದ ರೀತಿಯಲ್ಲಿ ಪೋಟೋ ವೈರಲ್ ಆಗುತ್ತಿವೆ. ಅದೇ ರೀತಿಯಲ್ಲಿ ನನ್ನ ಪೋಟೋ ಕೂಡಾ ವೈರಲ್ ಆಗಿದೆ. ಸಿಂಥೆಟಿಕ್​ ಹುಲಿ ಉಗುರು ಸಿಗುವ ವಿಳಾಸ ನಿಮಗೂ ಕೊಡುತ್ತೇನೆ, ನೀವು ಖರೀದಿ ಮಾಡಬಹುದು ಎಂದು ವ್ಯಂಗ್ಯವಾಡಿದರು.

ಏನಿದು ಹುಲಿ ಉಗುರು ವಿವಾದ

ಹುಲಿ ಉಗುರು ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆತಂದಿದ್ದರು. ವರ್ತೂರು ಸಂತೋಷ್​​​ ಅವರಿಗೆ ಜಾಮೀನು ಸಿಕ್ಕಿದೆ. ಇವರ ಬಂಧನ ಬಳಿಕ ಹುಲಿ ಉಗುರು ಪ್ರಕರಣದ ರಾಜ್ಯದಲ್ಲಿ ಒಂದು ಮಟ್ಟಿಗೆ ಕಾವು ಎದ್ದಿತ್ತು. ಆದರೆ ಯಾವಾಗ ಕನ್ನಡದ ಖ್ಯಾತ ಚಲನಚಿತ್ರ ನಟರೂ ಹುಲಿ ಉಗುರು ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು ಈ ಕಾವು ಜಾಸ್ತಿ ಆಯ್ತು. ಈ ಹುಲಿ ಉಗುರು ರಾಜಕಾರಣಿ, ಅಧಿಕಾರಿಗಳಿಗೆ ಮಾತ್ರವಲ್ಲದೆ ಸ್ವಾಮೀಜಿಗಳಿಗೂ ಪರಚಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!