AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 5 ಕೋಟಿಗೂ ಅಧಿಕ ಹಣ ಜಪ್ತಿ ಪ್ರಕರಣ: ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಲೋಕಸಭಾ ಚುನಾವಣೆ(Lok Sabha Elections) ಹಿನ್ನಲೆ ಅಲರ್ಟ್​ ಆಗಿರುವ ಪೊಲೀಸರು, ಏ.7 ರಂದು ಬಳ್ಳಾರಿಯಲ್ಲಿ 5 ಕೋಟಿ 60 ಲಕ್ಷ ಹವಾಲಾ(Hawala) ಹಣ, ಸೇರಿದಂತೆ ಚಿನ್ನ, ಬೆಳ್ಳಿ ಜಪ್ತಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ನರೇಶ್ ಹವಾಲಾ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಎಸ್ಪಿ ರಂಚಿತಕುಮಾರ ಬಂಡಾರು ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ 5 ಕೋಟಿಗೂ ಅಧಿಕ ಹಣ ಜಪ್ತಿ ಪ್ರಕರಣ: ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ
ಬಳ್ಳಾರಿ ಎಸ್ಪಿ ರಂಚಿತಕುಮಾರ ಬಂಡಾರು
ವಿನಾಯಕ ಬಡಿಗೇರ್​
| Edited By: |

Updated on:Apr 11, 2024 | 5:08 PM

Share

ಬಳ್ಳಾರಿ, ಏ.11: ಲೋಕಸಭಾ ಚುನಾವಣೆ(Lok Sabha Elections) ಹಿನ್ನಲೆ ಅಲರ್ಟ್​ ಆಗಿರುವ ಪೊಲೀಸರು, ಏ.7 ರಂದು ಬಳ್ಳಾರಿಯಲ್ಲಿ 5 ಕೋಟಿ 60 ಲಕ್ಷ ಹವಾಲಾ(Hawala) ಹಣ, ಸೇರಿದಂತೆ ಚಿನ್ನ, ಬೆಳ್ಳಿ ಜಪ್ತಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ನರೇಶ್ ಹವಾಲಾ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಎಸ್ಪಿ ರಂಚಿತಕುಮಾರ ಬಂಡಾರು ಅವರು ಹೇಳಿದ್ದಾರೆ. ಇಂದು(ಏ.11) ಬಳ್ಳಾರಿ ಡಿಸಿ ಕಚೇರಿಯಲ್ಲಿ ಮಾತನಾಡಿ, ‘ಬಳ್ಳಾರಿ ನಗರ ಮತ್ತು ಸುತ್ತಮುತ್ತ ಹವಾಲಾ ದಂಧೆ ನಡೆಸುತ್ತಿದ್ದ ನರೇಶ್, ಈ ಹಿಂದೆಯೂ ಹವಾಲಾ ಮೂಲಕ ಹಣ ವರ್ಗಾಯಿಸಿದ್ದ.

ಈ ಹಿನ್ನಲೆ ಕಳೆದ 3 ತಿಂಗಳಿಂದ ನರೇಶ್​ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿತ್ತು. ನಿಖರ ಮಾಹಿತಿ ಮೇರೆಗೆ ಏ.7ರಂದು ಬಳ್ಳಾರಿಯ ಕಂಬಳಿ ಬಜಾರ್​ನ ನರೇಶ್ ಮನೆ ಮೇಲೆ ಏಕಕಾಲದಲ್ಲಿ ಐಟಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿ, ಆತನ ಮನೆಯಲ್ಲಿದ್ದ 5 ಕೋಟಿ 60 ಲಕ್ಷ ಹಣ, 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ ಮತ್ತು 103 ಕೆಜಿ ಬೆಳ್ಳಿ ಆಭರಣ ಜಪ್ತಿ ಮಾಡಿದ್ದರು. ಬಳಿಕ ವಿಚಾರಣೆಗೆ ಹಾಜರಾಗುವಂತೆ ನರೇಶ್​ಗೆ ನೋಟಿಸ್ ನೀಡಲಾಗಿತ್ತು. ನರೇಶ್ ವಿಚಾರಣೆ ವೇಳೆ ಪೊಲೀಸರು ಸ್ಫೋಟಕ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಬಳ್ಳಾರಿಯಲ್ಲಿ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ರೂ. ಸೀಜ್

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16ಲಕ್ಷ ರೂ. ಹಣವನ್ನ ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಸೀಜ್ ಮಾಡಿದ್ದಾರೆ. ಇಚಲಕರಂಜಿ ಮೂಲದ ಸಂತೋಷ ಪೂಜಾರಿ, ಜ್ಞಾನೆಶ್ವರ ಪಾಟೀಲ್ ಎಂಬಿಬ್ಬರು ​ತಡರಾತ್ರಿ ಎರಡು ಲಗೇಜ್ ಬ್ಯಾಗ್​ನಲ್ಲಿ ಹಣ ಸಾಗಿಸಲು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಳಿಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪೊಲೀಸರು ಹಣವನ್ನು ಹಸ್ತಾಂತರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Thu, 11 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?