AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣದಲ್ಲಿ ರಾಜಕೀಯ ನಾಯಕರ ಕಿತ್ತಾಟ; ಅರ್ಧಕ್ಕೆ ನಿಂತ ಕಾಮಗಾರಿ

ಅದು ಹಲವು ದಶಕ ವರ್ಷಗಳ ಇತಿಹಾಸ ಇರೋ ಶಾಲೆ. ಆ ಸರ್ಕಾರಿ ಶಾಲೆಯಲ್ಲಿ ಸ್ಲಂ ಪ್ರದೇಶದ ಮಕ್ಕಳೇ ಹೆಚ್ಚಾಗಿ ಓದುತ್ತಾರೆ. ಆದ್ರೆ ಆ ಶಾಲಾ ಕಟ್ಟಡದ ವಿಚಾರ ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗಿದೆ. ಸಚಿವರು ಆ ಜಾಗದಲ್ಲೆ ಶಾಲೆ ಕಟ್ಟತೇನಿ ಅಂತಿದ್ರೆ.. ಅದೆಂಗೆ ಕಟ್ಟತೀರಾ ಅಂತಾ ಮಾಜಿ ಸಚಿವರೊಬ್ಬರು ಸಚಿವರಿಗೆ ಸವಾಲೆಸೆದು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಬಳ್ಳಾರಿ: ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣದಲ್ಲಿ ರಾಜಕೀಯ ನಾಯಕರ ಕಿತ್ತಾಟ; ಅರ್ಧಕ್ಕೆ ನಿಂತ ಕಾಮಗಾರಿ
ಬಳ್ಳಾರಿ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣದಲ್ಲಿ ರಾಜಕೀಯ ನಾಯಕರ ಕಿತ್ತಾಟ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 13, 2023 | 10:46 PM

Share

ಬಳ್ಳಾರಿ: ನಗರದ ಶ್ರೀರಾಂಪುರ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಹಲವು ದಶಕಗಳ ಇತಿಹಾಸವಿದೆ. ಈ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ 373 ಹಾಗೂ ಪ್ರೌಢ ಶಾಲೆಯಲ್ಲಿ 134 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಈ ಶಾಲೆಯ ಶಿಥಿಲಗೊಂಡ ಕಟ್ಟಡವನ್ನ ಸರ್ಕಾರ ಇದೀಗ ಹೊಸದಾಗಿ ನಿರ್ಮಿಸಲು ಹೊರಟಿದೆ. ಆದ್ರೆ ಇದೇ ವಿಚಾರ ಇದೀಗ ರಾಜಕೀಯ ನಾಯಕರ ಮಧ್ಯೆ ಕಿತ್ತಾಟಕ್ಕೆ ಕಾರಣವಾಗಿದೆ. ಸ್ಲಂ ಪ್ರದೇಶದ ಮಕ್ಕಳಿಗೆ ಆಟವಾಡಲು ಇರುವ ಏಕೈಕ ಮೈದಾನದಲ್ಲಿ ಶಾಲೆ ನಿರ್ಮಾಣ ಬೇಡ ಎಂದು ಮಾಜಿ ಸಚಿವ ದಿವಾಕರಬಾಬು ಬಾಬು ತಕರಾರು ತೆಗೆದಿದ್ದಾರೆ. ಸ್ಥಳೀಯರ ಜೊತೆಗೂಡಿ ಕಾಮಗಾರಿಗೆ ತಡೆಯೊಡ್ಡಿ ಕಾಮಗಾರಿ ಸ್ಥಗಿತಗೊಳಿಸಿ ಎಂದು ಹೋರಾಟಕ್ಕೆ ಇಳಿದಿದ್ದಾರೆ.

ಹಳೇ ಕಟ್ಟಡ ಶಿಥಿಲಗೊಂಡಿದ್ದರೇ ಆ ಕಟ್ಟಡ ಕೆಡವಿ ಅದೇ ಸ್ಥಳದಲ್ಲಿ ಮರಳಿ ಶಾಲೆ ನಿರ್ಮಿಸಿ. ಅದು ಬಿಟ್ಟು ಮೈದಾನದಲ್ಲಿ ಶಾಲಾ ನಿರ್ಮಾಣ ಬೇಡವೆಂದು ಮಾಜಿ ಸಚಿವ ದಿವಾಕರಬಾಬು ಪಟ್ಟು ಹಿಡಿದಿದ್ದಾರೆ. ಆದ್ರೆ ಶಾಲಾ ಕಟ್ಟಡದ ಕಾಮಗಾರಿಗೆ ಕಳೆದ ತಿಂಗಳೇ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಹೀಗಾಗಿ ಕಾಮಗಾರಿ ನಡೆಯುವ ವೇಳೆ ಮಾಜಿ‌ ಸಚಿವರು. ಹಾಲಿ ಸಚಿವರ ಮಧ್ಯೆ ರಾಜಕೀಯ ಶುರುವಾಗಿದೆ. ಕನ್ನಡ, ತೆಲುಗು, ಇಂಗ್ಲಿಷ್ ಮೀಡಿಯಂ ವಿಭಾಗದಲ್ಲಿ 507 ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡೋ ಈ ಶಾಲೆಗೆ 2 ಕೋಟಿಗೂ ಅಧಿಕ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡುವ ವೇಳೆಯೇ ರಾಜಕೀಯ ಶುರುವಾಗಿದೆ. ಈ ಕುರಿತು ಉಸ್ತುವಾರಿ ಸಚಿವ ಶ್ರೀರಾಮುಲುರನ್ನ ಕೇಳಿದ್ರೆ. ಚುನಾವಣೆ ಹತ್ತಿರ ಬಂದಾಗ ರಾಜಕೀಯ ಮಾಡೋದು ಬೇಡ. ರಾಜಕೀಯದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತದೆ. ಹೀಗಾಗಿ ಶಾಲೆ ನಿರ್ಮಾಣ ಮಾಡಿಯೇ ಸಿದ್ದ ಅಂತಾ ಶ್ರೀರಾಮುಲು ಹೇಳ್ತಿದ್ದಾರೆ.

ಇದನ್ನೂ ಓದಿ:ಜನಾರ್ಧನ ರೆಡ್ಡಿ ಮತ್ತು ನಾನು ವಿರುದ್ಧ ದಿಕ್ಕುಗಳಲ್ಲಿ ಸಾಗುತ್ತಿದ್ದೇವೆ, ಈ ಬಾರಿ ಬಳ್ಳಾರಿ ಜಿಲ್ಲೆಯಿಂದಲೇ ಸ್ಪರ್ಧಿಸುತ್ತೇನೆ: ಬಿ ಶ್ರೀರಾಮುಲು

ಒಬ್ಬರು ಹಳೆಯ ಕಟ್ಟಡ ಇರುವ ಸ್ಥಳದಲ್ಲೇ ದುರಸ್ಥಿ‌ ಮಾಡಿ ಅಲ್ಲೇ ಕಟ್ಟಡ ಕಟ್ಟಿ ಅಂತಿದ್ದಾರೆ. ಇನ್ನೊಂದೆಡೆ ಸಚಿವರು ಮಾತ್ರ ಹೊಸ ಜಾಗದಲ್ಲಿಯೇ ಶಾಲೆ ಕಟ್ಟೋದಾಗಿ ಹೇಳ್ತಿದ್ದಾರೆ. ಮಾಜಿ – ಹಾಲಿ ಸಚಿವರ ರಾಜಕೀಯದಿಂದ ಸಧ್ಯಕ್ಕೆ ಕಾಮಗಾರಿ ಸ್ಥಗಿತಗೊಂಡಿದೆ. ಈ ಶಾಲಾ ಕಟ್ಟಡದ ರಾಜಕೀಯ ಅದ್ಯಾವ ಹಂತಕ್ಕೆ ಹೋಗಿ ತಲುಪುತ್ತೋ ಅನ್ನೋದನ್ನ ಕಾದು ನೋಡಬೇಕಿದೆ.

ವರದಿ: ವಿರೇಶ್ ದಾನಿ ಟಿವಿ9 ಬಳ್ಳಾರಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ