AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಡೆಂಘೀ ಭೀತಿಯಲ್ಲಿ ಗಣಿನಾಡು ಬಳ್ಳಾರಿ

ಬಳ್ಳಾರಿ: ಮಹಾಮಾರಿ ಡೆಂಘೀ ಅಟ್ಟಹಾಸ ಮಿತಿ ಮೀರಿದೆ. ಅದ್ರಲ್ಲೂ ಗಣಿನಾಡು ಬಳ್ಳಾರಿಯಲ್ಲಿ ಜಿಲ್ಲೆಯಲ್ಲಂತೂ ಡೆಡ್ಲಿ ಡೆಂಗ್ಯೂ ರುದ್ರನರ್ತನ ಮಾಡುತ್ತಿದೆ. ನಿತ್ಯ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜನರು ಡೆಡ್ಲಿ ಡೆಂಗ್ಯೂನಿಂದ ಆತಂಕ ಪಡುವಂತಾಗಿದೆ.. ಕ್ಷಣ ಕ್ಷಣಕ್ಕೂ ಆತಂಕ.. ಭಯ.. ಯಾವಾಗ ಏನಾಗುತ್ತೋ ಏನೋ ಅನ್ನೋ ಭೀತಿ ಜೀವ ಹಿಂಡುತ್ತಿದೆ. ಯಾಕಂದ್ರೆ, ಅಂಥಾದ್ದೊಂದು ಮಹಾಮಾರಿ ಡೆಂಘೀ ಬೆಂಬಿಡದೇ ಕಾಡುತ್ತಿದೆ. ಅಮಾಯಕರನ್ನು ಬಲಿಪಡೆಯೋಕೆ ಹೊಂಚು ಹಾಕಿ ಕುಳಿತಿದೆ. ಗಣಿನಾಡಲ್ಲಿ ಮಹಾಮಾರಿ ಡೆಂಘೀ ಅಟ್ಟಹಾಸ! ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಡೇಂಜರ್ […]

ಮಹಾಮಾರಿ ಡೆಂಘೀ ಭೀತಿಯಲ್ಲಿ ಗಣಿನಾಡು ಬಳ್ಳಾರಿ
ಸಾಧು ಶ್ರೀನಾಥ್​
|

Updated on: Jan 02, 2020 | 6:35 AM

Share

ಬಳ್ಳಾರಿ: ಮಹಾಮಾರಿ ಡೆಂಘೀ ಅಟ್ಟಹಾಸ ಮಿತಿ ಮೀರಿದೆ. ಅದ್ರಲ್ಲೂ ಗಣಿನಾಡು ಬಳ್ಳಾರಿಯಲ್ಲಿ ಜಿಲ್ಲೆಯಲ್ಲಂತೂ ಡೆಡ್ಲಿ ಡೆಂಗ್ಯೂ ರುದ್ರನರ್ತನ ಮಾಡುತ್ತಿದೆ. ನಿತ್ಯ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜನರು ಡೆಡ್ಲಿ ಡೆಂಗ್ಯೂನಿಂದ ಆತಂಕ ಪಡುವಂತಾಗಿದೆ..

ಕ್ಷಣ ಕ್ಷಣಕ್ಕೂ ಆತಂಕ.. ಭಯ.. ಯಾವಾಗ ಏನಾಗುತ್ತೋ ಏನೋ ಅನ್ನೋ ಭೀತಿ ಜೀವ ಹಿಂಡುತ್ತಿದೆ. ಯಾಕಂದ್ರೆ, ಅಂಥಾದ್ದೊಂದು ಮಹಾಮಾರಿ ಡೆಂಘೀ ಬೆಂಬಿಡದೇ ಕಾಡುತ್ತಿದೆ. ಅಮಾಯಕರನ್ನು ಬಲಿಪಡೆಯೋಕೆ ಹೊಂಚು ಹಾಕಿ ಕುಳಿತಿದೆ.

ಗಣಿನಾಡಲ್ಲಿ ಮಹಾಮಾರಿ ಡೆಂಘೀ ಅಟ್ಟಹಾಸ! ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಡೇಂಜರ್ ಡೆಂಘೀ ಹಾವಳಿ ಮಿತಿ ಮೀರಿದೆ. ಇದ್ರ ಪರಿಣಾಮ ವಿಮ್ಸ್ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳ ತುಂಬಾ ರೋಗಿಗಳೇ ತುಂಬಿದ್ದಾರೆ. ಅದ್ರಲ್ಲೂ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ಚಿತ್ರದುರ್ಗ ಹಾಗೂ ನೆರೆಯ ಆಂಧ್ರ ಪ್ರದೇಶದಿಂದಲೂ ಡೆಂಘೀ ಕಾಣಿಸಿಕೊಂಡವರು ಚಿಕಿತ್ಸೆ ಪಡೆಯಲು ವಿಮ್ಸ್​ಗೆ ಆಗಮಿಸುತ್ತಿದ್ದಾರೆ.

ಜಿಲ್ಲೆಯ ಪೈಕಿ ಬಳ್ಳಾರಿ ನಗರ ಹಾಗೂ ಹೊಸಪೇಟೆಯಿಂದ್ಲೇ ಹೆಚ್ಚು ಡೆಂಘೀ ಪ್ರಕರಣಗಳು ಪತ್ತೆಯಾಗುತ್ತಿವೆ. 2019 ಜನವರಿಯಿಂದ ನವೆಂಬರ್ ತಿಂಗಳವರೆಗೆ ಜಿಲ್ಲೆಯಲ್ಲಿ 3,960 ಶಂಕಿತ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ರೆ, 178 ಖಚಿತ ಡೇಂಘೀ ಪ್ರಕರಣ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕಳೆದ ವರ್ಷ ಶಂಕಿತ ಡೆಂಘೀಗೆ ಮೂವರು ಸಾವನ್ನಪ್ಪಿದ್ದಾರೆ.

ಇನ್ನು, ಅದೆಷ್ಟೋ ಮಕ್ಕಳಿಗೆ ತಾಲೂಕು ಕೇಂದ್ರಗಳಲ್ಲಿ ಸಮರ್ಪಕ ಚಿಕಿತ್ಸೆ ಸಿಗದಿರುವ ಕಾರಣ ಕೆಲವರು ಸಾವಿನ ಕದ ತಟ್ಟುತ್ತಿದ್ದಾರೆ. ಮತ್ತೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಡೆಂಘೀಗಾಗಿ ಚಿಕಿತ್ಸೆಗಾಗಿ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇಷ್ಟದ್ರೂ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಪಾಲಿಕೆಯಾಗಲೀ ಗ್ರಾಮಗಳಲ್ಲಿ, ನಗರಗಳಲ್ಲಿ ಜನರಲ್ಲಿ ನೈಮರ್ಲ್ಯ ಕುರಿತು ಜಾಗೃತಿ ಮೂಡಿಸುವುದು, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಡೇಂಜರ್ ಡೆಂಘೀ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಅನ್ನೋ ಆರೋಪಗಳು ಕೇಳಿಬರುತ್ತಿವೆ.

ಒಟ್ನಲ್ಲಿ, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿದ್ರಿಂದ ಜನರು ಭಯಬೀತರಾಗಿದ್ದಾರೆ. ಡೆಂಘೀ ನಿಯಂತ್ರಣ ಮಾಡಬೇಕಿದ್ದ ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯವಹಿಸಿವೆ. ಇದು ಸ್ಥಳೀಯರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ