AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್ ಎಡವಟ್ಟು: 24 ಗಂಟೆ ಕಳೆದರೂ ಸರಿಯಾಗದ ವಿದ್ಯುತ್​ ಸಮಸ್ಯೆ, ಐಸಿಯು ವಾರ್ಡ್​ನಲ್ಲಿದ್ದ ರೋಗಿಗಳು ಬೇರೆಡೆಗೆ ಶಿಫ್ಟ್​

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು 24 ಗಂಟೆ ಕಳೆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಸದ್ಯ ಬಾಡಿಗೆ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್​ ಪೂರೈಕೆ ಮಾಡಲಾಗುತ್ತಿದೆ.

ಬಳ್ಳಾರಿ ವಿಮ್ಸ್ ಎಡವಟ್ಟು: 24 ಗಂಟೆ ಕಳೆದರೂ ಸರಿಯಾಗದ ವಿದ್ಯುತ್​ ಸಮಸ್ಯೆ, ಐಸಿಯು ವಾರ್ಡ್​ನಲ್ಲಿದ್ದ ರೋಗಿಗಳು ಬೇರೆಡೆಗೆ ಶಿಫ್ಟ್​
ಬಳ್ಳಾರಿ ವಿಮ್ಸ್
TV9 Web
| Updated By: ಆಯೇಷಾ ಬಾನು|

Updated on:Sep 15, 2022 | 2:40 PM

Share

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ(Bellary Vims Hospital) ವಿದ್ಯುತ್ ಸಂಪರ್ಕ ಕಡಿತಗೊಂಡು ಐಸಿಯು ವಾರ್ಡ್ ನಲ್ಲಿದ್ದ ಇಬ್ಬರು ರೋಗಿಗಳ ದಾರುಣ ಸಾವಾಗಿದೆ. ಈ ಘಟನೆ ಕಳೆದು 24 ಗಂಟೆ ಆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಹೀಗಾಗಿ ವಿಮ್ಸ್ ಆಡಳಿತ ಮಂಡಳಿ ವಿರುದ್ಧ ರೋಗಿಗಳು, ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ವಿವಿಧ ವಾರ್ಡ್ ಹಾಗೂ ಆಸ್ಪತ್ರೆಗೆ ವಿದ್ಯುತ್ ಸರಬರಾಜು ಮಾಡುವ ಮೇನ್ ಕೇಬಲ್ ಬ್ಲಾಸ್ಟ್ ಆದ ಪರಿಣಾಮ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ವಿಮ್ಸ್ ಆಸ್ಪತ್ರೆಯ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲಾ ಆದ್ರೂ ಇನ್ನೂ ಕೂಡ ಸಮಸ್ಯೆ ಬಗೆಹರಿದಿಲ್ಲ. 24 ಗಂಟೆ ಕಳೆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಸದ್ಯ ಬಾಡಿಗೆ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್​ ಪೂರೈಕೆ ಮಾಡಲಾಗುತ್ತಿದೆ. ಐಸಿಯುನಲ್ಲಿದ್ದ ರೋಗಿಗಳನ್ನು OT ವಾರ್ಡ್ ಹಾಗೂ ಟ್ರಾಮ್ ಕೇರ್ ಸೆಂಟರ್ ಸೇರಿದಂತೆ ಬೇರೆ ಬೇರೆ ವಾರ್ಡ್​​ಗಳಿಗೆ ಶಿಫ್ಟ್​ ಮಾಡಲಾಗುತ್ತಿದೆ. ವಿದ್ಯುತ್ ಸಮಸ್ಯೆಯಿಂದ ಎಕ್ಸರೇ, ಸ್ಕ್ಯಾನಿಂಗ್ ಎಲ್ಲವೂ ಬಂದ್ ಆಗಿದೆ.

ಬಾಡಿಗೆ ಜನರೇಟರ್ ಹಾಗೂ ವಿದ್ಯುತ್ ಕಂಬಗಳಿಂದ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಆಸ್ಪತ್ರೆಯ ಕೆಲವು ಕಡೆ ಮಾತ್ರ ವಿದ್ಯುತ್ ಪೂರೈಕೆ ಇದ್ದು ಮತ್ತಷ್ಟು ಕೊಠಡಿಗಳಲ್ಲಿ ಯತಾ ಸ್ಥಿತಿ ಇದೆ. ಇದನ್ನೂ ಓದಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ

ಇನ್ನು ಘಟನೆ ಸಂಬಂಧ ಬಳ್ಳಾರಿ ವಿಮ್ಸ್‌ ನಿರ್ದೇಶಕ ಡಾ.ಗಂಗಾಧರಗೌಡ ಸ್ಪಷ್ಟನೆ ನೀಡಿದ್ದು ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ ಎಂದಿದ್ದಾರೆ. ಓರ್ವ ವ್ಯಕ್ತಿ ವಿಷಪೂರಿತ ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಮತ್ತೋರ್ವ ಬಹು ಅಂಗಾಂಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಡಾ.ಗಂಗಾಧರ ಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ವಿದ್ಯುತ್ ಸಮಸ್ಯೆ ಸರಿಪಡಿಸಲು ಇನ್ನೂ 5 ಗಂಟೆ ಕಾಲಾವಕಾಶ ಬೇಕು. ಸದ್ಯಕ್ಕೆ ಬಾಡಿಗೆ ಜನರೇಟರ್ ನಿಂದ ಪವರ್ ಸಪ್ಲೈ ಮಾಡುತ್ತಿದ್ದೇವೆ. ರೋಗಿಗಳಿಗೆ ಎಕ್ಸರೇ, ಸ್ಕಾನಿಂಗ್ ವ್ಯವಸ್ಥೆ ಬೇಕಾದಲ್ಲಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸೌಲಭ್ಯ ಕಲ್ಪಿಸಲಾಗುವುದು. ಮೃತ ರೋಗಿಗಳು ಕೊನೆಯ ಸ್ಟೇಜ್ ನಲ್ಲಿದ್ದಾಗ ಆಸ್ಪತ್ರೆಗೆ ದಾಖಲಾಗಿದ್ರು ಎಂದು ಗಂಗಾಧರ ಗೌಡ ತಿಳಿಸಿದ್ರು.

ಹಾವು ಕಡಿತದಿಂದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಚೆಟ್ಟೆಮ್ಮ, ಸೆಪ್ಟೆಂಬರ್ 13 ರಂದು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಮೌಲಾ ಹುಸೇನ್ ಸೆಪ್ಟೆಂಬರ್ 11 ರಂದು ಕಿಡ್ನಿ ವೈಫಲ್ಯದಿಂದ ವಿಮ್ಸ್ ಗೆ ದಾಖಲಾಗಿದ್ರು. ಇಬ್ಬರು ರೋಗಿಗಳು ಕೊನೆಯ ಸ್ಟೇಂಜ್ ನಲ್ಲಿದ್ದ ಪರಿಣಾಮ ರೋಗಿಗಳ ಸಾವನ್ನಪ್ಪಿದ್ದಾರೆಂದು ವಿಮ್ಸ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಇನ್ನು ಐಸಿಯುನಲ್ಲಿದ್ದ ರೋಗಿಗಳ ಸಾವಿನ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಸೂಚಿಸಿದ್ದಾರೆ.

ಮತ್ತೊಂದು ಸಾವಿನ ವಿಡಿಯೋ ವೈರಲ್

ವಿದ್ಯುತ್ ಸಂಪರ್ಕ ಕಡಿತದಿಂದ ಇಬ್ಬರು ಸಾವನ್ನಪ್ಪಿದ ಪ್ರಕರಣದ ನಂತರ ಮತ್ತೊಂದು ಸಾವು ಬೆಳಕಿಗೆ ಬಂದಿದೆ. ಬಳ್ಳಾರಿ ತಾಲೂಕಿನ ಜೋಳದರಾಶಿಯ ಮನೋಜ್ ಮೃತ ಯುವಕ. ಮನೋಜ್ ಗೆ ಚೇಳು ಕಡಿದ ಪರಿಣಾಮ 6 ರಂದು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ನಿನ್ನೆ ಮೆಡಿಸಿನ್ ವಿಭಾಗದ ಐಸಿಯು ವಾರ್ಡ್ ನಲ್ಲಿ ಮನೋಜ್ ಮೃತಪಟ್ಟಿದ್ದಾರೆ. ಮನೋಜ್ ಸಾವಿಗೆ ವಿದ್ಯುತ್ ಸಂಪರ್ಕ ಕಡಿತವೇ ಕಾರಣ ಎಂದು ಮನೋಜ್ ಸಹೋದರರಿಂದ ವಿಮ್ಸ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಮನೋಜ್ ಸಾವಿನಪ್ಪಿದ ನಂತರವೂ ವೈದ್ಯರು ಸಾವಿನ ವಿಚಾರ ತಿಳಿಸಿಲ್ಲ. ರಾತ್ರಿ ವೇಳೆಗೆ ನಮ್ಮ ಮನೋಜ್ ಸಾವಿನ ಸುದ್ದಿ ತಿಳಿಸಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Thu, 15 September 22

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್