AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್ ಎಡವಟ್ಟು: 24 ಗಂಟೆ ಕಳೆದರೂ ಸರಿಯಾಗದ ವಿದ್ಯುತ್​ ಸಮಸ್ಯೆ, ಐಸಿಯು ವಾರ್ಡ್​ನಲ್ಲಿದ್ದ ರೋಗಿಗಳು ಬೇರೆಡೆಗೆ ಶಿಫ್ಟ್​

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು 24 ಗಂಟೆ ಕಳೆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಸದ್ಯ ಬಾಡಿಗೆ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್​ ಪೂರೈಕೆ ಮಾಡಲಾಗುತ್ತಿದೆ.

ಬಳ್ಳಾರಿ ವಿಮ್ಸ್ ಎಡವಟ್ಟು: 24 ಗಂಟೆ ಕಳೆದರೂ ಸರಿಯಾಗದ ವಿದ್ಯುತ್​ ಸಮಸ್ಯೆ, ಐಸಿಯು ವಾರ್ಡ್​ನಲ್ಲಿದ್ದ ರೋಗಿಗಳು ಬೇರೆಡೆಗೆ ಶಿಫ್ಟ್​
ಬಳ್ಳಾರಿ ವಿಮ್ಸ್
TV9 Web
| Edited By: ಆಯೇಷಾ ಬಾನು|

Updated on:Sep 15, 2022 | 2:40 PM

Share

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ(Bellary Vims Hospital) ವಿದ್ಯುತ್ ಸಂಪರ್ಕ ಕಡಿತಗೊಂಡು ಐಸಿಯು ವಾರ್ಡ್ ನಲ್ಲಿದ್ದ ಇಬ್ಬರು ರೋಗಿಗಳ ದಾರುಣ ಸಾವಾಗಿದೆ. ಈ ಘಟನೆ ಕಳೆದು 24 ಗಂಟೆ ಆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಹೀಗಾಗಿ ವಿಮ್ಸ್ ಆಡಳಿತ ಮಂಡಳಿ ವಿರುದ್ಧ ರೋಗಿಗಳು, ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ವಿವಿಧ ವಾರ್ಡ್ ಹಾಗೂ ಆಸ್ಪತ್ರೆಗೆ ವಿದ್ಯುತ್ ಸರಬರಾಜು ಮಾಡುವ ಮೇನ್ ಕೇಬಲ್ ಬ್ಲಾಸ್ಟ್ ಆದ ಪರಿಣಾಮ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ವಿಮ್ಸ್ ಆಸ್ಪತ್ರೆಯ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲಾ ಆದ್ರೂ ಇನ್ನೂ ಕೂಡ ಸಮಸ್ಯೆ ಬಗೆಹರಿದಿಲ್ಲ. 24 ಗಂಟೆ ಕಳೆದರೂ ವಿದ್ಯುತ್ ಸಮಸ್ಯೆ ಸರಿಯಾಗಿಲ್ಲ. ಸದ್ಯ ಬಾಡಿಗೆ ಜನರೇಟರ್ ಮೂಲಕ ತಾತ್ಕಾಲಿಕ ವಿದ್ಯುತ್​ ಪೂರೈಕೆ ಮಾಡಲಾಗುತ್ತಿದೆ. ಐಸಿಯುನಲ್ಲಿದ್ದ ರೋಗಿಗಳನ್ನು OT ವಾರ್ಡ್ ಹಾಗೂ ಟ್ರಾಮ್ ಕೇರ್ ಸೆಂಟರ್ ಸೇರಿದಂತೆ ಬೇರೆ ಬೇರೆ ವಾರ್ಡ್​​ಗಳಿಗೆ ಶಿಫ್ಟ್​ ಮಾಡಲಾಗುತ್ತಿದೆ. ವಿದ್ಯುತ್ ಸಮಸ್ಯೆಯಿಂದ ಎಕ್ಸರೇ, ಸ್ಕ್ಯಾನಿಂಗ್ ಎಲ್ಲವೂ ಬಂದ್ ಆಗಿದೆ.

ಬಾಡಿಗೆ ಜನರೇಟರ್ ಹಾಗೂ ವಿದ್ಯುತ್ ಕಂಬಗಳಿಂದ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಆಸ್ಪತ್ರೆಯ ಕೆಲವು ಕಡೆ ಮಾತ್ರ ವಿದ್ಯುತ್ ಪೂರೈಕೆ ಇದ್ದು ಮತ್ತಷ್ಟು ಕೊಠಡಿಗಳಲ್ಲಿ ಯತಾ ಸ್ಥಿತಿ ಇದೆ. ಇದನ್ನೂ ಓದಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ

ಇನ್ನು ಘಟನೆ ಸಂಬಂಧ ಬಳ್ಳಾರಿ ವಿಮ್ಸ್‌ ನಿರ್ದೇಶಕ ಡಾ.ಗಂಗಾಧರಗೌಡ ಸ್ಪಷ್ಟನೆ ನೀಡಿದ್ದು ವಿಮ್ಸ್‌ನಲ್ಲಿ ವಿದ್ಯುತ್ ಅವಘಡದಿಂದ ಸಾವು ಸಂಭವಿಸಿಲ್ಲ ಎಂದಿದ್ದಾರೆ. ಓರ್ವ ವ್ಯಕ್ತಿ ವಿಷಪೂರಿತ ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಮತ್ತೋರ್ವ ಬಹು ಅಂಗಾಂಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಡಾ.ಗಂಗಾಧರ ಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ವಿದ್ಯುತ್ ಸಮಸ್ಯೆ ಸರಿಪಡಿಸಲು ಇನ್ನೂ 5 ಗಂಟೆ ಕಾಲಾವಕಾಶ ಬೇಕು. ಸದ್ಯಕ್ಕೆ ಬಾಡಿಗೆ ಜನರೇಟರ್ ನಿಂದ ಪವರ್ ಸಪ್ಲೈ ಮಾಡುತ್ತಿದ್ದೇವೆ. ರೋಗಿಗಳಿಗೆ ಎಕ್ಸರೇ, ಸ್ಕಾನಿಂಗ್ ವ್ಯವಸ್ಥೆ ಬೇಕಾದಲ್ಲಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸೌಲಭ್ಯ ಕಲ್ಪಿಸಲಾಗುವುದು. ಮೃತ ರೋಗಿಗಳು ಕೊನೆಯ ಸ್ಟೇಜ್ ನಲ್ಲಿದ್ದಾಗ ಆಸ್ಪತ್ರೆಗೆ ದಾಖಲಾಗಿದ್ರು ಎಂದು ಗಂಗಾಧರ ಗೌಡ ತಿಳಿಸಿದ್ರು.

ಹಾವು ಕಡಿತದಿಂದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಚೆಟ್ಟೆಮ್ಮ, ಸೆಪ್ಟೆಂಬರ್ 13 ರಂದು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಮೌಲಾ ಹುಸೇನ್ ಸೆಪ್ಟೆಂಬರ್ 11 ರಂದು ಕಿಡ್ನಿ ವೈಫಲ್ಯದಿಂದ ವಿಮ್ಸ್ ಗೆ ದಾಖಲಾಗಿದ್ರು. ಇಬ್ಬರು ರೋಗಿಗಳು ಕೊನೆಯ ಸ್ಟೇಂಜ್ ನಲ್ಲಿದ್ದ ಪರಿಣಾಮ ರೋಗಿಗಳ ಸಾವನ್ನಪ್ಪಿದ್ದಾರೆಂದು ವಿಮ್ಸ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಇನ್ನು ಐಸಿಯುನಲ್ಲಿದ್ದ ರೋಗಿಗಳ ಸಾವಿನ ಬಗ್ಗೆ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಸೂಚಿಸಿದ್ದಾರೆ.

ಮತ್ತೊಂದು ಸಾವಿನ ವಿಡಿಯೋ ವೈರಲ್

ವಿದ್ಯುತ್ ಸಂಪರ್ಕ ಕಡಿತದಿಂದ ಇಬ್ಬರು ಸಾವನ್ನಪ್ಪಿದ ಪ್ರಕರಣದ ನಂತರ ಮತ್ತೊಂದು ಸಾವು ಬೆಳಕಿಗೆ ಬಂದಿದೆ. ಬಳ್ಳಾರಿ ತಾಲೂಕಿನ ಜೋಳದರಾಶಿಯ ಮನೋಜ್ ಮೃತ ಯುವಕ. ಮನೋಜ್ ಗೆ ಚೇಳು ಕಡಿದ ಪರಿಣಾಮ 6 ರಂದು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ನಿನ್ನೆ ಮೆಡಿಸಿನ್ ವಿಭಾಗದ ಐಸಿಯು ವಾರ್ಡ್ ನಲ್ಲಿ ಮನೋಜ್ ಮೃತಪಟ್ಟಿದ್ದಾರೆ. ಮನೋಜ್ ಸಾವಿಗೆ ವಿದ್ಯುತ್ ಸಂಪರ್ಕ ಕಡಿತವೇ ಕಾರಣ ಎಂದು ಮನೋಜ್ ಸಹೋದರರಿಂದ ವಿಮ್ಸ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಮನೋಜ್ ಸಾವಿನಪ್ಪಿದ ನಂತರವೂ ವೈದ್ಯರು ಸಾವಿನ ವಿಚಾರ ತಿಳಿಸಿಲ್ಲ. ರಾತ್ರಿ ವೇಳೆಗೆ ನಮ್ಮ ಮನೋಜ್ ಸಾವಿನ ಸುದ್ದಿ ತಿಳಿಸಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Thu, 15 September 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ