Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಕೋಟಾದಡಿ ರಾಜ್ಯಸಭೆ ಪ್ರವೇಶಿಸಲು ಶ್ರೀರಾಮುಲು ಪ್ಲಾನ್: ರೆಡ್ಡಿ ಜತೆಗಿನ ಮುನಿಸನ್ನೇ ಲಾಭವಾಗಿಸಿಕೊಳ್ಳಲು ತಂತ್ರ

ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದ್ದು, ಶ್ರೀರಾಮುಲು ಹಾಗೂ ಶಾಸಕ ಜನಾರ್ದನ ರೆಡ್ಡಿ ಮುನಿಸಿನಿಂದ ಪಕ್ಷಕ್ಕೆ ಆಗಬಹುದಾದ ಹಾನಿ ತಪ್ಪಿಸಲು ವರಿಷ್ಠರು ಇಬ್ಬರಿಗೂ ಬುಲಾವ್ ನೀಡಿದ್ದಾರೆ. ಆದರೆ, ಇದನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ರಾಮುಲು, ಆಂಧ್ರ ಕೋಟಾದಿಂದ ರಾಜ್ಯಸಭೆ ಸ್ಥಾನ ಕೇಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಆಂಧ್ರ ಕೋಟಾದಡಿ ರಾಜ್ಯಸಭೆ ಪ್ರವೇಶಿಸಲು ಶ್ರೀರಾಮುಲು ಪ್ಲಾನ್: ರೆಡ್ಡಿ ಜತೆಗಿನ ಮುನಿಸನ್ನೇ ಲಾಭವಾಗಿಸಿಕೊಳ್ಳಲು ತಂತ್ರ
ಶ್ರೀರಾಮುಲು
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Ganapathi Sharma

Updated on: Jan 31, 2025 | 11:46 AM

ಬಳ್ಳಾರಿ, ಜನವರಿ 31: ಶಾಸಕ ಜನಾರ್ದನ ರೆಡ್ಡಿನ ಜತೆಗಿನ ಮುನಿಸಿನಿಂದ ಸದ್ಯ ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ಹೆಚ್ಚು ಚರ್ಚಿತರಾಗಿರುವ ಶ್ರೀರಾಮುಲು ಇದನ್ನೇ ಮುಂದಿಟ್ಟುಕೊಂಡು ರಾಜ್ಯಸಭೆ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಮುಲುಗೆ ಸದ್ಯ ಬಿಜೆಪಿಯಲ್ಲಿ ಯಾವುದೇ ಹುದ್ದೆ ಇಲ್ಲದೆ ಖಾಲಿ ಇದ್ದಾರೆ. ಇದೇ ಸಂದರ್ಭದಲ್ಲಿ ಹೈಕಮಾಂಡ್​ನಿಂದ ಭೇಟಿಗೆ ಕರೆ ಬಂದಿದ್ದು, ರಾಜ್ಯಸಭೆ ಸ್ಥಾನದ ಬಗ್ಗೆ ವರಿಷ್ಠರ ಭೇಟಿ ವೇಳೆ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಈಗಾಗಲೇ ಜನಾರ್ದ ರೆಡ್ಡಿ ಹಾಗೂ ಶ್ರೀರಾಮುಲು ಮುನಿಸನ್ನು ತಣ್ಣಗಾಗಿಸಲು ಹೈಕಮಾಂಡ್​​ನಿಂದ ಇಬ್ಬರಿಗೂ ಬುಲಾವ್ ಬಂದಿದೆ. ದೆಹಲಿ ಚುನಾವಣೆ ಮುಗಿದ ಬಳಿಕ ದೆಹಲಿಗೆ ಬರುವಂತೆ ಶ್ರೀರಾಮುಲುಗೆ ವರಿಷ್ಠರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರೆಡ್ಡಿ ಜತೆಗಿನ ಮುನಿಸನ್ನೇ ತಮಗೆ ಲಾಭ ಆಗುವ ರೀತಿ ಬಳಕೆ ಮಾಡಿಕೊಳ್ಳಲು ರಾಮುಲು ಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆ ಸದಸ್ಯನಾಗಿ ಅಯ್ಕೆ ಮಾಡುವಂತೆ ಶ್ರೀರಾಮುಲು ಹೈಕಮಾಂಡ್ ಭೇಟಿ ವೇಳೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮತ್ತೊಮ್ಮೆ ಸಕ್ರಿಯರಾಗಿ ಪಕ್ಷ ಕಟ್ಟಲು ತಮ್ಮನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಬೇಕು ಎಂದು ಅವರು ವರಿಷ್ಠರ ಬಳಿ ಅಹವಾಲು ತೋಡಿಕೊಳ್ಳುವ ನಿರೀಕ್ಷೆ ಇದೆ.

ಆಂಧ್ರ ಪ್ರದೇಶ ಕೋಟಾದಿಂದ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ವೈಎಸ್​​ಆರ್​​ಪಿ ವಿಜಯ ಸಾಯಿರೆಡ್ಡಿ ಕೆಲವು ದಿನಗಳ ಹಿಂದೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಆ ಸ್ಥಾನ ತೆರವಾಗಿದೆ. ಅವರ ಅವಧಿ ಇನ್ನೂ ನಾಲ್ಕು ವರ್ಷ ಬಾಕಿ ಇದೆ. ಹೀಗಾಗಿ ಆಂಧ್ರ ಕೋಟಾದಡಿ ರಾಜ್ಯಸಭೆಗೆ ಆಯ್ಕೆ ಮಾಡುವಂತೆ ರಾಮುಲು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಳ್ಳಾರಿ ಬಿಜೆಪಿಯಲ್ಲಿ ಬಣಬಡಿದಾಟ ಶುರು: ಕುತೂಹಲ ಮೂಡಿಸಿದ ಶ್ರೀರಾಮುಲು ರಾಜಕೀಯ ನಡೆ

ಈ ಬಗ್ಗೆ ಈಗಾಗಲೇ ರಾಮುಲು ಸೂಕ್ಷ್ಮವಾಗಿ ರಾಜ್ಯ ಮುಖಂಡ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ, ರಾಮುಲು ದೆಹಲಿ ಭೇಟಿ ವೇಳೆ ಮಹತ್ವದ ಬೇಡಿಕೆ ಇಡುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು