AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಗುತ್ತಿದ್ದ ಫ್ಯಾನ್ ನಲ್ಲಿ ಕೈಯಿಟ್ಟ ಬಾಲಕ, ತೋರುಬೆರಳು ಕಟ್! ಮರು ಜೋಡಿಸಿ ಜೀವ ನೀಡಿದ ವೈದ್ಯರು!

ತುಂಡಾದ ಬೆರಳನ್ನು 3-4 ತಾಸಿನಲ್ಲಿ ಮರುಜೋಡಣೆ ಮಾಡಬಹುದು. ಅದಕ್ಕೂ ಮೊದಲು ತುಂಡಾದ ಬೆರಳನ್ನು ಫ್ರಿಡ್ಜ್ ನಲ್ಲಿಟ್ಟು ಜೀವಕೋಶ ತುಂಬಿಸಿ ಅದನ್ನು ಮರುಜೋಡಿಸಬಹುದು ಮೂಳೆ ತಜ್ಞರಾದ ಡಾ ಅಚ್ಯುತ್ ನಾಯಕ ಭರವಸೆ ನೀಡಿದ್ದಾರೆ.

ತಿರುಗುತ್ತಿದ್ದ ಫ್ಯಾನ್ ನಲ್ಲಿ ಕೈಯಿಟ್ಟ ಬಾಲಕ, ತೋರುಬೆರಳು ಕಟ್! ಮರು ಜೋಡಿಸಿ ಜೀವ ನೀಡಿದ ವೈದ್ಯರು!
ತಿರುಗುತ್ತಿದ್ದ ಫ್ಯಾನ್ ನಲ್ಲಿ ಕೈಯಿಟ್ಟ ಬಾಲಕ, ತೋರುಬೆರಳು ಕಟ್! ಮರು ಜೋಡಿಸಿ ಜೀವ ನೀಡಿದ ವೈದ್ಯರು!
TV9 Web
| Edited By: |

Updated on: Oct 22, 2022 | 12:50 PM

Share

ವಿಜಯನಗರ: ತಿರುಗುತ್ತಿದ್ದ ಫ್ಯಾನ್ ನಲ್ಲಿ ಆಕಸ್ಮಿಕವಾಗಿ ಕೈಯಿಟ್ಟು ತೋರುಬೆರಳು ತುಂಡರಿಸಿಕೊಂಡಿದ್ದ ಬಾಲಕನ ತುಂಡಾದ ಬೆರಳನ್ನು ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಮರುಜೋಡಿಸಿ ಅದಕ್ಕೆ ಮರು ಜೀವ ನೀಡಿದ ಅಪರೂಪದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ. ಕೂಡ್ಲಿಗಿ ಆಸ್ಪತ್ರೆಯ ಮೂಳೆತಜ್ಞ ಡಾ ಅಚ್ಯುತ್ (surgeon Achyut Naik) ಅವರು ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿಯ ಗ್ರಾಮದ ಪಾಂಡುರಂಗಪ್ಪ (13) ಎಂಬ ಯುವಕನ ಬೆರಳಿಗೆ ಶಸ್ತ್ರಚಿಕಿತ್ಸೆ ಮೂಲಕ ಮರು ಜೀವ ನೀಡಿದ್ದಾರೆ.

ಪಾಂಡುರಂಗ ಎನ್ನುವ ಬಾಲಕ ಗುರುವಾರ ರಾತ್ರಿ ಮನೆಯಲ್ಲಿದ್ದ ಫ್ಯಾನ್ ನಲ್ಲಿ ಆಕಸ್ಮಿಕ ಕೈ ಇಟ್ಟಿದ್ದರಿಂದ ತೋರುಬೆರಳಿನ ಉಗುರು ಇರುವ ಭಾಗ ತುಂಡಾಗಿ ಕೆಳಗೆ ಬಿದ್ದಿದ್ದು ಅದನ್ನು ಕವರ್ ನಲ್ಲಿಟ್ಟುಕೊಂಡು ಕೊಟ್ಟೂರು ಸಾರ್ವಜನಿಕ ಆಸ್ಪತ್ರೆಗೆ ಹೋಗಿದ್ದು ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ್ದಾರೆ.

ಬಾಲಕನ ಅದೃಷ್ಟವೆಂಬಂತೆ ಕೂಡ್ಲಿಗಿ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯ ನಿರತರಾಗಿದ್ದ ಮೂಳೆ ತಜ್ಞ ವೈದ್ಯರಾದ ಡಾ. ಅಚ್ಯುತ್ ನಾಯಕ ಎಂಬುವರು ಬಾಲಕನ ತುಂಡಾದ ಬೆರಳನ್ನು ತೆಗೆದುಕೊಂಡು ಆ ಬೆರಳನ್ನು ಫ್ರಿಡ್ಜಲ್ಲಿಟ್ಟು, ಸಹಾಯಕರಾಗಿ ರಾತ್ರಿ ಕರ್ತವ್ಯದಲ್ಲಿದ್ದ ಸ್ಟಾಫ್ ನರ್ಸ್ ಮೈಲಾರಪ್ಪರನ್ನು ಕರೆದುಕೊಂಡು ಬೆರಳನ್ನು ಜೋಡಿಸುವ ಶಸ್ತ್ರಕ್ರಿಯೆಯಲ್ಲಿ ತೊಡಗಿ ಬೆರಳನ್ನು ಜೋಡಿಸಿ ಹೊಲಿಗೆ ಹಾಕುವ ಮೂಲಕ ಮರುಜೀವ ತುಂಬಿದ್ದಾರೆ!

ವೈದ್ಯರ ಅಮೂಲ್ಯ ಅನಿಸಿಕೆ ಇಲ್ಲಿದೆ:

ತುಂಡಾದ ಬೆರಳನ್ನು 3-4 ತಾಸಿನಲ್ಲಿ ಮರುಜೋಡಣೆ ಮಾಡಬಹುದು. ಅದಕ್ಕೂ ಮೊದಲು ತುಂಡಾದ ಬೆರಳನ್ನು ಫ್ರಿಡ್ಜ್ ನಲ್ಲಿಟ್ಟು ಜೀವಕೋಶ ತುಂಬಿಸಿ ಅದನ್ನು ಮರುಜೋಡಿಸಬಹುದು ಎನ್ನುತ್ತಾರೆ. ಪ್ಲಾಸ್ಟಿಕ್ ಚೀಲದಲ್ಲಿ ಪಾಂಡುರಂಗಪ್ಪನ ತುಂಡಾದ ಬೆರಳನ್ನು ತಂದಿದ್ದರಿಂದ ಅದನ್ನು ಫ್ರಿಡ್ಜ್ ನಲ್ಲಿರಿಸಿ ಪ್ರಥಮ ಚಿಕಿತ್ಸೆ ನಡೆಸಿ ನಂತರ ಬೆರಳನ್ನು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೋಡಣೆ ಮಾಡಿ ಹೊಲಿಗೆ ಹಾಕಲಾಗಿದ್ದು ಬಾಲಕನ ಬೆರಳಿಗೆ ಕೆಲ ದಿನಗಳ ನಂತರ ಮತ್ತೆ ಜೀವ ಬರಲಿದೆ ಎಂದು ಮೂಳೆ ತಜ್ಞರಾದ ಡಾ ಅಚ್ಯುತ್ ನಾಯಕ ಭರವಸೆ ನೀಡಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!