AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರ ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ
ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿ
TV9 Web
| Edited By: ಸಾಧು ಶ್ರೀನಾಥ್​|

Updated on:Dec 16, 2021 | 11:11 AM

Share

ಬಳ್ಳಾರಿ: ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿಯಾಗಿದ್ದಾರೆ. ತಹಶಿಲ್ದಾರ್ ಹೆಚ್​ ಜಿ ರಶ್ಮಿ ಎತ್ತಂಗಡಿ ಜೊತೆಗೆ ಅವರ ಮೇಲಿನ ಆರೋಪದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸಂಡೂರು ಶಾಸಕ ಇ. ತುಕಾರಾಂ (e tukaram) ಅವರು ಕಚೇರಿಗೆ ಹೋದರೆ ತಮಗೆ ಗೌರವ ಕೊಡಲ್ಲ ಎಂದು ಆರೋಪ ಮಾಡಿದ್ದರು. ಶಾಸಕ ತುಕಾರಾಂ ನಿನ್ನೆ ರಶ್ಮಿ ವಿರುದ್ದ ಅಧಿವೇಶನದಲ್ಲಿ ಹಕ್ಕುಚುತಿ (Breach of privilege) ಮಂಡಿಸಿದ್ದರು. ನಿನ್ನೆ ಅಧಿವೇಶನದಲ್ಲಿ ತಹಶೀಲ್ದಾರ್ ರಶ್ಮಿಯವರನ್ನ (sandur tahsildar hg rashmi) ಅಮಾನತ್ತು ಮಾಡುವಂತೆಯೂ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು.

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರು ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ. ವರ್ಗಾವಣೆ ಬಳಿಕ ಸ್ಥಳ ನಿಯೋಜನೆ ಮಾಡದೇ ಬೆಂಗಳೂರಿನಲ್ಲಿರುವ ಬಹುಮಹಡಿ ಕಟ್ಟಡದಲ್ಲಿರುವ ಕಂದಾಯ ಇಲಾಖೆಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಶ್ಮಿ ಸ್ಥಾನಕ್ಕೆ ಪ್ರಭಾರಿ ತಹಶಿಲ್ದಾರ್ ಆಗಿ ವಿಶ್ವಜೀತ್ ಮೆಹತಾ ಅವರನ್ನು ನೇಮಕ ಮಾಡಲಾಗಿದೆ. ತಹಶಿಲ್ದಾರ್ ರಶ್ಮಿ ಮೇಲೆ ಸಂಡೂರು ಶಾಸಕ ತುಕಾರಾಂ ಮಾಡಿದ ಆರೋಪಗಳ ತನಿಖೆ ನಡೆದಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರನ್ನ ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಮಾಡಲಾಗಿದೆ. ಕಲಬುರ್ಗಿ ಪ್ರಾದೇಶಿಕ ಆಯುಕ್ತರಿಗೆ ಸಮಗ್ರ ತನಿಖೆ ಮಾಡಿ ವರದಿ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

Published On - 8:35 am, Thu, 16 December 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ