AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರ ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ
ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 16, 2021 | 11:11 AM

ಬಳ್ಳಾರಿ: ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿಯಾಗಿದ್ದಾರೆ. ತಹಶಿಲ್ದಾರ್ ಹೆಚ್​ ಜಿ ರಶ್ಮಿ ಎತ್ತಂಗಡಿ ಜೊತೆಗೆ ಅವರ ಮೇಲಿನ ಆರೋಪದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸಂಡೂರು ಶಾಸಕ ಇ. ತುಕಾರಾಂ (e tukaram) ಅವರು ಕಚೇರಿಗೆ ಹೋದರೆ ತಮಗೆ ಗೌರವ ಕೊಡಲ್ಲ ಎಂದು ಆರೋಪ ಮಾಡಿದ್ದರು. ಶಾಸಕ ತುಕಾರಾಂ ನಿನ್ನೆ ರಶ್ಮಿ ವಿರುದ್ದ ಅಧಿವೇಶನದಲ್ಲಿ ಹಕ್ಕುಚುತಿ (Breach of privilege) ಮಂಡಿಸಿದ್ದರು. ನಿನ್ನೆ ಅಧಿವೇಶನದಲ್ಲಿ ತಹಶೀಲ್ದಾರ್ ರಶ್ಮಿಯವರನ್ನ (sandur tahsildar hg rashmi) ಅಮಾನತ್ತು ಮಾಡುವಂತೆಯೂ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು.

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರು ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ. ವರ್ಗಾವಣೆ ಬಳಿಕ ಸ್ಥಳ ನಿಯೋಜನೆ ಮಾಡದೇ ಬೆಂಗಳೂರಿನಲ್ಲಿರುವ ಬಹುಮಹಡಿ ಕಟ್ಟಡದಲ್ಲಿರುವ ಕಂದಾಯ ಇಲಾಖೆಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಶ್ಮಿ ಸ್ಥಾನಕ್ಕೆ ಪ್ರಭಾರಿ ತಹಶಿಲ್ದಾರ್ ಆಗಿ ವಿಶ್ವಜೀತ್ ಮೆಹತಾ ಅವರನ್ನು ನೇಮಕ ಮಾಡಲಾಗಿದೆ. ತಹಶಿಲ್ದಾರ್ ರಶ್ಮಿ ಮೇಲೆ ಸಂಡೂರು ಶಾಸಕ ತುಕಾರಾಂ ಮಾಡಿದ ಆರೋಪಗಳ ತನಿಖೆ ನಡೆದಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರನ್ನ ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಮಾಡಲಾಗಿದೆ. ಕಲಬುರ್ಗಿ ಪ್ರಾದೇಶಿಕ ಆಯುಕ್ತರಿಗೆ ಸಮಗ್ರ ತನಿಖೆ ಮಾಡಿ ವರದಿ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

Published On - 8:35 am, Thu, 16 December 21

ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್