AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರ ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ
ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿ
TV9 Web
| Updated By: ಸಾಧು ಶ್ರೀನಾಥ್​|

Updated on:Dec 16, 2021 | 11:11 AM

Share

ಬಳ್ಳಾರಿ: ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿಯಾಗಿದ್ದಾರೆ. ತಹಶಿಲ್ದಾರ್ ಹೆಚ್​ ಜಿ ರಶ್ಮಿ ಎತ್ತಂಗಡಿ ಜೊತೆಗೆ ಅವರ ಮೇಲಿನ ಆರೋಪದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸಂಡೂರು ಶಾಸಕ ಇ. ತುಕಾರಾಂ (e tukaram) ಅವರು ಕಚೇರಿಗೆ ಹೋದರೆ ತಮಗೆ ಗೌರವ ಕೊಡಲ್ಲ ಎಂದು ಆರೋಪ ಮಾಡಿದ್ದರು. ಶಾಸಕ ತುಕಾರಾಂ ನಿನ್ನೆ ರಶ್ಮಿ ವಿರುದ್ದ ಅಧಿವೇಶನದಲ್ಲಿ ಹಕ್ಕುಚುತಿ (Breach of privilege) ಮಂಡಿಸಿದ್ದರು. ನಿನ್ನೆ ಅಧಿವೇಶನದಲ್ಲಿ ತಹಶೀಲ್ದಾರ್ ರಶ್ಮಿಯವರನ್ನ (sandur tahsildar hg rashmi) ಅಮಾನತ್ತು ಮಾಡುವಂತೆಯೂ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು.

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರು ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ. ವರ್ಗಾವಣೆ ಬಳಿಕ ಸ್ಥಳ ನಿಯೋಜನೆ ಮಾಡದೇ ಬೆಂಗಳೂರಿನಲ್ಲಿರುವ ಬಹುಮಹಡಿ ಕಟ್ಟಡದಲ್ಲಿರುವ ಕಂದಾಯ ಇಲಾಖೆಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಶ್ಮಿ ಸ್ಥಾನಕ್ಕೆ ಪ್ರಭಾರಿ ತಹಶಿಲ್ದಾರ್ ಆಗಿ ವಿಶ್ವಜೀತ್ ಮೆಹತಾ ಅವರನ್ನು ನೇಮಕ ಮಾಡಲಾಗಿದೆ. ತಹಶಿಲ್ದಾರ್ ರಶ್ಮಿ ಮೇಲೆ ಸಂಡೂರು ಶಾಸಕ ತುಕಾರಾಂ ಮಾಡಿದ ಆರೋಪಗಳ ತನಿಖೆ ನಡೆದಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರನ್ನ ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಮಾಡಲಾಗಿದೆ. ಕಲಬುರ್ಗಿ ಪ್ರಾದೇಶಿಕ ಆಯುಕ್ತರಿಗೆ ಸಮಗ್ರ ತನಿಖೆ ಮಾಡಿ ವರದಿ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

Published On - 8:35 am, Thu, 16 December 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ