AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಹಾಸ ತಂದ ಬ್ಯಾಡಗಿ, ಇಳುವರಿ ಕಮ್ಮಿಯಿದ್ರೂ ರೈತರಿಗೆ ಭರಪೂರ ಆದಾಯ

ಬಳ್ಳಾರಿ: ಕಳೆದ ಕೆಲ ವರ್ಷಗಳಿಂದ ಜಿಲ್ಲೆಯಲ್ಲಿ ರೈತರು ಅತಿವೃಷ್ಟಿ, ಅನಾವೃಷ್ಟಿಯನ್ನ ಎದುರಿಸುತ್ತಲೇ ಇದ್ದಾರೆ. ಬೆಳೆ ಬಂದ್ರೆ ರೇಟ್ ಇರಲ್ಲ. ರೇಟ್ ಇದ್ರೆ ಬೆಳೆ ಬರಲ್ಲ. ಎರಡೂ ಇದ್ರೆ ಪ್ರಕೃತಿ ಮುನಿಸಿಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿರಲ್ಲ. ಆದ್ರೆ ಈ ಬಾರಿ ಬ್ಯಾಡಗಿ ಮೆಣಸಿನಕಾಯಿ ರೈತರ ಮೊಗದಲ್ಲಿ ಸಂತಸ ತಂದಿದೆ. ಗಣಿನಾಡಿನ ಚಿಲ್ಲಿ ಬೆಳಗಾರರಿಗೆ ಒಲೀತು ಬಂಪರ್! ಗಣಿನಾಡು ಬಳ್ಳಾರಿ. ಇಲ್ಲಿನ ರೈತರು ಸದಾ ಒಂದಿಲ್ಲೊಂದು ಸಮಸ್ಯೆಯ ಸುಳಿಗೇ ಸಿಕ್ಕಾಕ್ಕೊಂಡೇ ಇರ್ತಾರೆ. ಜಿಲ್ಲೆಯಲ್ಲಿ ತುಂಗಭದ್ರಾ ನದಿ ಹರಿಯೋ […]

ಮಂದಹಾಸ ತಂದ ಬ್ಯಾಡಗಿ, ಇಳುವರಿ ಕಮ್ಮಿಯಿದ್ರೂ ರೈತರಿಗೆ ಭರಪೂರ ಆದಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 16, 2020 | 5:17 PM

Share

ಬಳ್ಳಾರಿ: ಕಳೆದ ಕೆಲ ವರ್ಷಗಳಿಂದ ಜಿಲ್ಲೆಯಲ್ಲಿ ರೈತರು ಅತಿವೃಷ್ಟಿ, ಅನಾವೃಷ್ಟಿಯನ್ನ ಎದುರಿಸುತ್ತಲೇ ಇದ್ದಾರೆ. ಬೆಳೆ ಬಂದ್ರೆ ರೇಟ್ ಇರಲ್ಲ. ರೇಟ್ ಇದ್ರೆ ಬೆಳೆ ಬರಲ್ಲ. ಎರಡೂ ಇದ್ರೆ ಪ್ರಕೃತಿ ಮುನಿಸಿಗೆ ಕೈಗೆ ಬಂದ ತುತ್ತು ಬಾಯಿಗೆ ಬಂದಿರಲ್ಲ. ಆದ್ರೆ ಈ ಬಾರಿ ಬ್ಯಾಡಗಿ ಮೆಣಸಿನಕಾಯಿ ರೈತರ ಮೊಗದಲ್ಲಿ ಸಂತಸ ತಂದಿದೆ.

ಗಣಿನಾಡಿನ ಚಿಲ್ಲಿ ಬೆಳಗಾರರಿಗೆ ಒಲೀತು ಬಂಪರ್! ಗಣಿನಾಡು ಬಳ್ಳಾರಿ. ಇಲ್ಲಿನ ರೈತರು ಸದಾ ಒಂದಿಲ್ಲೊಂದು ಸಮಸ್ಯೆಯ ಸುಳಿಗೇ ಸಿಕ್ಕಾಕ್ಕೊಂಡೇ ಇರ್ತಾರೆ. ಜಿಲ್ಲೆಯಲ್ಲಿ ತುಂಗಭದ್ರಾ ನದಿ ಹರಿಯೋ ಕಡೆ ಒಂದ್ ಸಮಸ್ಯೆಯಾದ್ರೆ, ನೀರಿಲ್ಲದ ಕಡೆ ಮತ್ತೊಂದು ಸಮಸ್ಯೆ. ಅದ್ರಲ್ಲೂ ಈ ಬಾರಿ ಅತಿವೃಷ್ಟಿ ರೈತರನ್ನ ಹಿಂಡಿ ಹಿಪ್ಪೆ ಮಾಡಿತ್ತು. ಕಳೆದ ಮೂರ್ನಾಲ್ಕು ವರ್ಷದಲ್ಲಿ ಮೆಣಸಿನಕಾಯಿ ಬೆಳೆಗಾರರು ನಲುಗಿ ಹೋಗಿದ್ರು. ಆದ್ರೆ ಈ ವರ್ಷ ಬ್ಯಾಡಗಿ ಮೆಣಸಿನಕಾಯಿ ದರ 33 ಸಾವಿರ ದಾಟಿದ್ದು, ರೈತರು ಸಂತಸದಲ್ಲಿದ್ದಾರೆ.

ಇನ್ನು ಈ ಬಾರಿ ಅತಿಹೆಚ್ಚು ಮಳೆಯಾಗಿದ್ದರಿಂದ ಭೂಮಿ ತೇವಾಂಶ ಹೆಚ್ಚಾಗಿ ಇಳುವರಿ ಕುಸಿದಿದೆ. ಎಕರೆಗೆ 20 ಕ್ವಿಂಟಾಲ್ ಬರ್ತಿದ್ದ ಬೆಳೆ ಈ ಬಾರಿ 10 ಕ್ವಿಂಟಾಲ್ ಬಂದಿದೆ. ಗುಂಟೂರು ಮೆಣಸಿನಕಾಯಿ ರೇಟ್ 16ರಿಂದ 17 ಸಾವಿರ ಮಾರಾಟವಾಗ್ತಿದ್ರೆ, ಬ್ಯಾಡಗಿ ಮಾತ್ರ ಗುಂಟೂರ್ ಮೆಣಸಿನಕಾಯಿಯ ದುಪ್ಪಟ್ಟು ರೇಟ್​ಗೆ ಮಾರಾಟವಾಗ್ತಿದೆ.

ಕಳೆದ ಮೂರು ವರ್ಷಗಳಿಂದ ನಷ್ಟದಲ್ಲಿದ್ದ ರೈತರು ಈ ಬಾರಿ ಮೆಣಸಿನಕಾಯಿ ಬೆಳೆಯೋದನ್ನ ನಿಲ್ಲಿಸೋ ನಿರ್ಧಾರಕ್ಕೆ ಬಂದಿದ್ರು. ಆದ್ರೆ ಈ ಬಾರಿ ಇಳುವರಿ ಕಮ್ಮಿಯಾದ್ರೂ ರೇಟ್ ಜಾಸ್ತಿ ಇರೋದ್ರಿಂದ ಅನ್ನದಾತರ ಖುಷಿಗೇ ಪಾರವೇ ಇಲ್ಲದಂತಾಗಿದೆ.

Published On - 3:18 pm, Thu, 16 January 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ