AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಬ್ಯಾಗ್ ಮರೆತುಹೋದ ಚೆನ್ನೈ ಮಹಿಳೆ.. ಆಟೋ ಪತ್ತೆ ಹಚ್ಚಿ, ಚಿನ್ನಾಭರಣದ ಬ್ಯಾಗ್ ಮಾಲೀಕರಿಗೆ ಹಸ್ತಾಂತರಿಸಿದ ಬ್ರೂಸ್​​ಪೇಟೆ ಪೊಲೀಸರು

ಬ್ರೂಸ್​​ಪೇಟೆ ಇನ್‌ಸ್ಪೆಕ್ಟರ್ ಸಿಂಧೂರ ತಂಡ ಜಿಲ್ಲಾ ಕಂಟ್ರೋಲ್ ರೂಂನ ಸಿಸಿ ಕ್ಯಾಮೆರಾಗಳ ಸಹಾಯದಿಂದ ಬಳ್ಳಾರಿ ತಾಲ್ಲೂಕಿನ ಗೋಟೂರು ಗ್ರಾಮದ ಮಲ್ಲಿಕಾರ್ಜುನಗೆ ಆಟೋ ಸೇರಿದ್ದು ಎಂದು ಪತ್ತೆ ಹಚ್ಚಿದರು. ಚಾಲಕನಿಂದ ಚಿನ್ನಾಭರಣ ಬ್ಯಾಗ್ ವಶಪಡಿಸಿಕೊಂಡು ಅಖಿಲಾಗೆ ಮರಳಿಸಿದ್ದಾರೆ.

ಆಟೋದಲ್ಲಿ ಬ್ಯಾಗ್ ಮರೆತುಹೋದ ಚೆನ್ನೈ ಮಹಿಳೆ.. ಆಟೋ ಪತ್ತೆ ಹಚ್ಚಿ, ಚಿನ್ನಾಭರಣದ ಬ್ಯಾಗ್ ಮಾಲೀಕರಿಗೆ ಹಸ್ತಾಂತರಿಸಿದ ಬ್ರೂಸ್​​ಪೇಟೆ ಪೊಲೀಸರು
ಆಟೋದಲ್ಲಿ ಬ್ಯಾಗ್ ಮರೆತುಹೋದ ಚೆನ್ನೈ ಮಹಿಳೆ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: ಸಾಧು ಶ್ರೀನಾಥ್​|

Updated on:Jul 10, 2023 | 11:13 AM

Share

ಬಳ್ಳಾರಿ: ಆಟೋದಲ್ಲಿ ಮಹಿಳೆಯೊಬ್ಬರು ಮರೆತುಹೋಗಿದ್ದ ನಗದು, ಚಿನ್ನಾಭರಣವಿದ್ದ (Gold Jewellery) ಬ್ಯಾಗನ್ನು ಪತ್ತೆ ಹಚ್ಚಿ ಮರಳಿ ಮಾಲೀಕರಿಗೆ ಕೊಡಿಸುವಲ್ಲಿ ಬಳ್ಳಾರಿ ಪೊಲೀಸರು (Bellary Police) ಯಶಸ್ವಿಯಾಗಿದ್ದಾರೆ. ಸಂಬಂಧಿಕರ ಮದುವೆಗೆ ಬಳ್ಳಾರಿಗೆ ಬಂದಿದ್ದ ಚೆನ್ನೈ ಮೂಲದ ಅಖಿಲಾ (Chennai Woman) ಎಂಬುವವರು ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗನ್ನು ಜುಲೈ 8 ರಂದು ಆಟೋ ರಿಕ್ಷಾದಲ್ಲಿ (Auto Rickshaw) ಬಿಟ್ಟು ಹೋಗಿದ್ದರು.

ತಾವು ಉಳಿದುಕೊಂಡಿದ್ದ ವಸತಿ ಗೃಹದಿಂದ ಕೆ.ಅರ್.ಎಸ್ ಫಂಕ್ಷನ್ ಹಾಲ್‌ಗೆ ಜುಲೈ 8 ರಂದು ಸಂಜೆ 7ಕ್ಕೆ ಆಟೋದಲ್ಲಿ ತೆರಳಿದ್ದ ಮಹಿಳೆಯು 200 ಗ್ರಾಂ ತೂಕದ ಬಂಗಾರದ ಆಭರಣಗಳು, ಬೆಳ್ಳಿ ವಸ್ತುಗಳು ಮತ್ತು 15,000 ನಗದು ಇದ್ದ ಬ್ಯಾಗ್‌ನ್ನು ಮರೆತು ಹೋಗಿದ್ದರು.

ಈ ಬ್ಯಾಗ್ ಪತ್ತೆ ಹಚ್ಚಿ ಕೊಡುವಂತೆ ಬ್ರೂಸ್​​ಪೇಟೆ ಪೊಲೀಸ್​​ ಠಾಣೆ ಪೊಲೀಸರ ಮೊರೆ ಹೋಗಿದ್ದರು. ಇನ್‌ಸ್ಪೆಕ್ಟರ್ ಎಂ.ಎನ್. ಸಿಂಧೂರ ನೇತೃತ್ವದ ತಂಡ ಜಿಲ್ಲಾ ಕಂಟ್ರೋಲ್ ರೂಂನ ಸಿಸಿ ಕ್ಯಾಮೆರಾಗಳ ಸಹಾಯದಿಂದ ಆಟೋ ಪತ್ತೆ ಮಾಡಿದರು.

ಬಳ್ಳಾರಿ ತಾಲ್ಲೂಕಿನ ಗೋಟೂರು ಗ್ರಾಮದ ಮಲ್ಲಿಕಾರ್ಜುನ ಅವರಿಗೆ ಆಟೋ ಸೇರಿದ್ದು ಎಂದು ಪತ್ತೆ ಹಚ್ಚಿದರು. ಚಾಲಕನಿಂದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ ವಶಪಡಿಸಿಕೊಂಡು ಅಖಿಲಾ ಅವರಿಗೆ ಮರಳಿ ನೀಡಿದ್ದಾರೆ.

ಸಿಂಧೂರ, ಅಪರಾಧ ವಿಭಾಗದ ಹೆಚ್.ಸಿ. ಉಮೇಶ್ ರೆಡ್ಡಿ, ಪಿ.ಸಿ. ಹೆಚ್. ರಾಮಲಿಂಗ, ಪಿ.ಸಿ. ಶಿವರಾಜ ಕುಮಾರ್, ಪಿ.ಸಿ. ರಾಮಾಂಜಿನಿ ಅವರ ತಂಡವನ್ನು ಎಸ್‌.ಪಿ. ರಂಜಿತ ಕುಮಾರ್‌ ಬಂಡಾರು ಶ್ಲಾಘಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Mon, 10 July 23

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!