AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: 121.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ

ಬಳ್ಳಾರಿ ಜಿಲ್ಲೆಯ ತಾಳೂರು ರಸ್ತೆಯಲ್ಲಿ 121.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು ಲೋಕಾರ್ಪಣೆಗೊಳಿಸಿದರು.

ಬಳ್ಳಾರಿ: 121.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ
ಬಳ್ಳಾರಿ ನೂತನ ನ್ಯಾಯಾಲಯ ಉದ್ಘಾಟನೆImage Credit source: Etv Bharth
TV9 Web
| Edited By: |

Updated on: Jun 26, 2022 | 5:46 PM

Share

ಬಳ್ಳಾರಿ: ಜಿಲ್ಲೆಯ ತಾಳೂರು ರಸ್ತೆಯಲ್ಲಿ 121.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು (District Court)  ಹೈಕೋರ್ಟ್ (High Court) ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ (Chief justice  Ritu Raj Awasthi) ಯವರು ಲೋಕಾರ್ಪಣೆಗೊಳಿಸಿದರು. ನ್ಯಾಯಾಲಯವು ಕೇಂದ್ರೀಕೃತ ಹವಾ ನಿಯಂತ್ರಿತ, 19 ಕೋರ್ಟ್ ಹಾಲ್‍ಗಳು, ಸುಸಜ್ಜಿತ ಕಾನ್ಫರೆನ್ಸ್ ಹಾಲ್ ಹೊಂದಿದೆ. ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾ.ಕೆ.ನಟರಾಜನ್,‌ ಜಿಲ್ಲಾ ನ್ಯಾಯಾಲಯದ ಮುಖ್ಯ ನ್ಯಾಯಾಧೀಶೆ ಎಸ್.ಹೆಚ್.ಪುಷ್ಪಾಂಜಲಿದೇವಿ ಸೇರಿದಂತೆ ವಿವಿಧ ನ್ಯಾಯಾಧೀಶರು ಭಾಗಿಯಾಗಿದ್ದರು.

ಹುಬ್ಬಳ್ಳಿಯಲ್ಲಿ ಸ್ಮಾರ್ಟ್​ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ

ಧಾರವಾಡ: ಇಂದು (ಜೂನ್ 26) ಹುಬ್ಬಳ್ಳಿಯಲ್ಲಿ ಸ್ಮಾರ್ಟ್​ ಸಿಟಿ ಯೋಜನೆಯಡಿ  ವಿವಿಧ ಕಾಮಗಾರಿಗಳಿಗೆ  ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಅಂದಾಜು 35 ಕೋಟಿ ವೆಚ್ಚದ  ವಿವಿಧ ರಸ್ತೆ ಕಾಮಗಾರಿ, ವಿದ್ಯುತ್​ ಚಿತಾಗಾರ ಮತ್ತು ವಿವಿಧ ಕಾಮಗಾರಿಗಳ‌ನ್ನು ಲೋರ್ಕಾಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಹಾಲಪ್ಪ ಆಚಾರ್, ಭೈರತಿ ಬಸವರಾಜ್ ಭಾಗಿಯಾಗಿದ್ದರು.

ಇದನ್ನು ಓದಿ: ಭಾರತದ ಮಾಧ್ಯಮ, ಮನರಂಜನಾ ಉದ್ಯಮ 2025ರ ವೇಳೆಗೆ 4 ಲಕ್ಷ ಕೋಟಿ ತಲುಪುವ ನಿರೀಕ್ಷೆ: ಅನುರಾಗ್ ಠಾಕೂರ್

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ ಸ್ಮಾಟ್೯ ಸಿಟಿ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಅನೇಕ ಕಾರ್ಯಕ್ರಮ ನಡಿತಿದೆ. ಕುಡಿಯುವ ನೀರಿನ ಯೋಜನೆಗೆ ಅತೀ ಹೆಚ್ಚು ದುಡ್ಡು ನೀಡುತ್ತಿದ್ದೇವೆ. ಭಾರತ ಸರ್ಕಾರ ಮೂಲಭೂತ ಸೌಕರ್ಯ ಹೆಚ್ಚಿಸೋ ಕೆಲಸ ಮಾಡುತ್ತಿದೆ. ಬೊಮ್ಮಾಯವರು ರೈಲ್ವೇ ಡಬ್ಲಿಂಗ್ ಕಾಳಜಿ ವಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಆಹಾರ ಭದ್ರತೆ ನೀಡಿದ ಏಕೈಕ ದೇಶ ನಮ್ಮದು ಎಂದು ಹೇಳಿದರು.

ಸ್ಮಾರ್ಟ್​ಸಿಟಿ ಯೋಜನೆ 2 ವರ್ಷಗಳ ಹಿಂದೆಯೇ ಮುಗಿಯಬೇಕಿತ್ತು. ಕೆಲವು ಪಾಲಿಕೆಗಳು ಹಿಂದೇಟು ಹಾಕಿದ್ದರಿಂದ ಕಾಮಗಾರಿ ಮುಗಿದಿಲ್ಲ. ಒಂದು ವರ್ಷದೊಳಗೆ ಎಲ್ಲಾ ಕಾಮಗಾರಿ ಮುಗಿಸಬೇಕು. ಕಾರಣದ ಹೇಳದೆ ಮಾರ್ಚ್​ ತಿಂಗಳೊಳಗೆ ಕಾಮಗಾರಿ ಮುಗಿಸಿಬೇಕು. ಗುಣಮಟ್ಟ ಕಾಪಾಡದ ಕಂಟ್ರ್ಯಾಕ್ಟರ್​ಗಳ ಮೇಲೆ ಕ್ರಮ ಕೈಗೊಳ್ಳುವಂತೆ  ಸ್ಮಾರ್ಟ್​ಸಿಟಿ ಯೋಜನೆ ಎಂಡಿ ಶಕೀಲ್ ಅಹ್ಮದ್​ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್​ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಒಂದು ಏರಿಯಾದಲ್ಲಿ ಮಾತ್ರ ರಸ್ತೆಯ ಡಾಂಬರು ಹಾಳಾಗಿದೆ; ತುರ್ತಾಗಿ ಕಾಮಗಾರಿ ಮಾಡಿದ್ದರಿಂದ ರಸ್ತೆ ಹಾಳಾಗಿದೆ, ಅದು ತಪ್ಪಾ? -ಕೆ.ಎಸ್. ಈಶ್ವರಪ್ಪ

ಈ ಭಾಗದ ಕಾಂಗ್ರೆಸ್ ಶಾಸಕ ಅಬ್ಬಯ್ಯನದು ನಂದು ದೊಸ್ತಿ ಇದೆ. ಅದಕ್ಕಾಗಿ ನಾನು ಅನುದಾನ ನೀಡಿದ್ದೆನೆ. ನಾನು ವಿಪಕ್ಷದಲ್ಲಿದ್ದಾಗ ನಿಮ್ಮ ಸರ್ಕಾರ ನಯಾ ಪೈಸೆ ಕೊಟ್ಟಿಲ್ಲ. ಆದರೆ ಹುಬ್ಬಳ್ಳಿಗೆ ಅನೂಕುಲ ಆಗುತ್ತೆ ಅಂದರೆ ನಾನು ಕೊಡುತ್ತೇನೆ. ಹುಬ್ಬಳ್ಳಿ- ಬೆಳಗಾವಿ ರೈಲ್ವೆ ಯೋಜನೆಗೆ 800 ಕೋಟಿಗೂ ನೀಡಿದ್ದೆನೆ ಎಂದರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ