AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಹಾನಿ ಸಂಬಂಧ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ: ವಸ್ತುಸ್ಥಿತಿ ಆಧರಿಸಿ, ಪರಿಹಾರ ಒದಗಿಸಲು ಡಿಸಿಗಳಿಗೆ ಸೂಚನೆ

ಅಕ್ಟೋಬರ್​​ ತಿಂಗಳಿನ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ನೀಡಲು ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಮಳೆ ಹಾನಿ ಸಂಬಂಧ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ: ವಸ್ತುಸ್ಥಿತಿ ಆಧರಿಸಿ, ಪರಿಹಾರ ಒದಗಿಸಲು ಡಿಸಿಗಳಿಗೆ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ಆಯೇಷಾ ಬಾನು|

Updated on: Oct 13, 2022 | 1:00 PM

Share

ಬಳ್ಳಾರಿ: ಮಳೆ ಹಾನಿ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಹೊಸಪೇಟೆಯಲ್ಲಿ ಡಿಸಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ. 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಮಾಲೋಚನೆ ಮಾಡಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪ ಆಗಬಾರದು. ಮನೆ ಹಾನಿ ಕುರಿತ ದಾಖಲಾತಿಯಲ್ಲಿ ಲೋಪ ಸಲ್ಲದು. ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಒದಗಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಡಿಸಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Udupi: ಉಡುಪಿಯ ಕಾರ್ಕಳದಲ್ಲಿ 14ನೇ ಶತಮಾನದ ನಾಗಭೈರವನ ಅಪರೂಪದ ಶಿಲ್ಪ ಪತ್ತೆ

ಅಕ್ಟೋಬರ್​​ ತಿಂಗಳಿನ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ನೀಡಲು ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಸೇತುವೆಗಳ ನಿರ್ಮಾಣ, ದುರಸ್ತಿ, ಮರು ನಿರ್ಮಾಣ ಕಾರ್ಯ, ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿಗೆ ಸೂಚಿಸಲಾಗಿದೆ. ಟ್ರಾನ್ಸ್​ಫಾರ್ಮರ್ ಹಾಳಾಗಿದ್ದರೆ 24 ಗಂಟೆಯೊಳಗೆ ವಿತರಣೆ ಮಾಡುವಂತೆ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶ ಪ್ರತಿ ನೋಡಿ ಮಾತಾಡುವೆ

ಹಿಜಾಬ್​​ ಬಗ್ಗೆ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಸಂಬಂಧ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಇದು ನ್ಯಾಯಾಂಗ ವಿಚಾರವಾಗಿರೋದ್ರಿಂದ ನಾನು ಇನ್ನೂ ಆದೇಶ ಪ್ರತಿ ನೋಡಿಲ್ಲ. ಆದೇಶ ಪ್ರತಿ ನೋಡಿಕೊಂಡು ರಿಯಾಕ್ಷನ್ ಕೊಡುವೆ. ಇದು ದೇಶದ ವಿಚಾರವಾಗಿದೆ. ವಿದ್ಯಾರ್ಥಿಗಳ ಬೇಡಿಕೆ, ನಮ್ಮ ವಿಚಾರಗಳು ಸೇರಿದಂತೆ ಹತ್ತು ಹಲವು ವಿಚಾರಗಳಿವೆ. ಲಿಖಿತವಾಗಿ ಜಡ್ಜ್ ಗಳು ಕೊಟ್ಟಿದ್ದನ್ನು ನೋಡಿ ರಿಯಾಕ್ಷನ್ ಕೊಡುವೆ. ಇಬ್ಬರು ಜಡ್ಜ್ ಗಳ ಕಾಪಿ ನನ್ನ ಕೈಗೆ ಬಂದಿಲ್ಲಾ ಎಂದರು. ಹಾಗೂ ಇದೇ ವೇಳೆ ಹಾವೇರಿಯಲ್ಲಿ RSS ನವರ ಮೇಲೆ ಹಲ್ಲೆ ಮಾಡಿದ್ದು, ಶಾಂತಿ ಸುವ್ಯವಸ್ಥೆ ಕದಡೋ ಕೆಲಸ ಮಾಡಿದ್ದ ಬಗ್ಗೆ ಮಾತನಾಡಿದ ಸಿಎಂ, ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಅವರನ್ನ ಬಗ್ಗುಬಡಿಯೋ ಕೆಲಸ ಮಾಡಿದ್ದೇವೆ. ಈಗಾಗಲೇ ದುಷ್ಕಮಿಗಳನ್ನ ಬಂಧಿಸಲಾಗಿದೆ. ಶಾಂತಿ ಕದಡುವ ಯತ್ನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?