AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ಬುಲೆಟ್ ಟ್ರೈನ್ ರೀತಿ ಕೆಲಸ ಮಾಡ್ತಿದ್ದಾರೆ; ಜನಾ ರೆಡ್ಡಿ ಆಗಮನ ಸಂತಸ ತಂದಿದೆ- ಸಾರಿಗೆ ಸಚಿವ ಶ್ರೀರಾಮುಲು

ಬೊಮ್ಮಾಯಿ ಅವರಿಗೆ ಶಾಸಕರು, ಸಚಿವರು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಅವಧಿ ಪೂರ್ಣಗೊಳಿಸುತ್ತೇವೆ. 2023 ರಲ್ಲಿ ಕೂಡ ನಮ್ಮದೇ ಸರ್ಕಾರ ಬರಲಿದೆ ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಬುಲೆಟ್ ಟ್ರೈನ್ ರೀತಿ ಕೆಲಸ ಮಾಡ್ತಿದ್ದಾರೆ; ಜನಾ ರೆಡ್ಡಿ ಆಗಮನ ಸಂತಸ ತಂದಿದೆ- ಸಾರಿಗೆ ಸಚಿವ ಶ್ರೀರಾಮುಲು
ಸಾರಿಗೆ ಸಚಿವ ಬಿ.ಶ್ರೀರಾಮುಲು
TV9 Web
| Edited By: |

Updated on:Aug 21, 2021 | 12:51 PM

Share

ಬಳ್ಳಾರಿ: ಜನಪರ ಆಡಳಿತ ನೀಡುವ ದೃಷ್ಟಿಯಿಂದ ಸರ್ಕಾರ ಕೆಲಸ ಮಾಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಬೊಮ್ಮಾಯಿ ಬುಲೆಟ್ ಟ್ರೈನ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರ ಇಲ್ಲದ ಕಾಂಗ್ರೆಸ್ ಪಕ್ಷ ವಿನಾಕಾರಣ ಟೀಕೆ ಮಾಡುತ್ತಿದೆ. ಬೊಮ್ಮಾಯಿ ಅವರಿಗೆ ಶಾಸಕರು, ಸಚಿವರು ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಅವಧಿ ಪೂರ್ಣಗೊಳಿಸುತ್ತೇವೆ. 2023 ರಲ್ಲಿ ಕೂಡ ನಮ್ಮದೇ ಸರ್ಕಾರ ಬರಲಿದೆ ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಬಳಿಕ ಸಾರಿಗೆ ನೌಕರರ ಸಂಬಳದ ವಿಚಾರವಾಗಿ ಮಾತನಾಡಿದ ಅವರು, ಸಾರಿಗೆ ನೌಕರರ ವೇತನ ಹೆಚ್ಚು ಕಡಿಮೆಯಾಗುತ್ತಿತ್ತು. 2 ತಿಂಗಳ ಬಾಕಿ ವೇತನ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಐರಾವತ್, ಐಷಾರಾಮಿ ಬಸ್​ಗಳು ಬೇರೆ ರಾಜ್ಯಗಳಿಗೆ ಹೋಗುತ್ತಿಲ್ಲ. ರಾತ್ರಿ ವೇಳೆ ಬಸ್​ನಲ್ಲಿ ಇಬ್ಬರು ಪ್ರಯಾಣಿಕರಷ್ಟೇ ಹೋಗುತ್ತಿರುವುದನ್ನು ನೋಡಿದ್ದೇನೆ ಇದನ್ನು ಇಂತಹ ಬಸ್​ಗಳನ್ನು ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 800 ಎಲೆಕ್ಟ್ರಿಕ್ ಬಸ್ ಕೇಂದ್ರ ಸರ್ಕಾರದ ಸಹಕಾರದಿಂದ ಖರೀದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಖಾತೆ ಬದಲಾವಣೆಗಾಗಿ ಆನಂದ್ ಸಿಂಗ್ ಮುನಿಸು ಹಿನ್ನಲೆ ಮಾತನಾಡಿದ ಸಾರಿಗೆ ಸಚಿವ ಶೀರಾಮುಲು, ಆನಂದ್ ಸಿಂಗ್ ಈ ಭಾಗದ ನಾಯಕರು. ಆನಂದ್ ಸಿಂಗ್ ಪಕ್ಷಕ್ಕೆ ಇರಿಸು ಮುರಿಸು ಮಾಡಲ್ಲ ಎಂದು ಹೇಳಿದ್ದಾರೆ. ಆನಂದ್ ಸಿಂಗ್ ನನ್ನ ಸ್ನೇಹಿತರು ಎಂದು ಹೇಳಿದ್ದಾರೆ.

ಬಳ್ಳಾರಿಗೆ ಮಾಜಿ ಸಚಿವ ಜನಾರ್ಧನರೆಡ್ಡಿ ಆಗಮನ ಹಿನ್ನಲೆ ಮಾತನಾಡಿದ ಅವರು ಜನಾರ್ಧನರೆಡ್ಡಿ ನನ್ನ ಅಪ್ತ ಸ್ನೇಹಿತರು ಬಳ್ಳಾರಿ ಬಂದಿರುವುದು ಸಂತಸ ತಂದಿದೆ. ಅವರ ಅಭಿಮಾನಿಗಳಿಗೆ ಖುಷಿಯಾಗಿದೆ. ಬೆಂಗಳೂರಿನಲ್ಲಿ ಜನಾರ್ಧನರೆಡ್ಡಿ ಅವರನ್ನು ಆಗಾಗ ಭೇಟಿ ಮಾಡಿರುವೆ. ಈಗ ಬಳ್ಳಾರಿಗೆ ಬಂದಿದ್ದಾರೆ, ಈಗ ಕೂಡ ಭೇಟಿ ಮಾಡುವೆ. ಅಲ್ಲದೆ ಇವತ್ತು ಉಪರಾಷ್ಟ್ರಪತಿ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

‘ಮಹಾನಾಯಕ ಡಾ. ಬಿ.ಆರ್​. ಅಂಬೇಡ್ಕರ್​’ ಧಾರಾವಾಹಿಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲ; ಹೊಸ ಯುಗ ಶುರು

Published On - 12:39 pm, Sat, 21 August 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ