AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಪಾಲಿಕೆ ಚುನಾವಣೆ ನಡೆದು 9 ತಿಂಗಳಾದರೂ ನಡೆಯದ ಮೇಯರ್ ಚುನಾವಣೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಬಳ್ಳಾರಿ ಪಾಲಿಕೆ ಚುನಾವಣೆ ನಡೆದು 9 ತಿಂಗಳಾದರೂ ಮೇಯರ್, ಉಪಮೇಯರ್ ಚುನಾವಣೆ ನಡೆದಿಲ್ಲ. ಕಾಂಗ್ರೆಸ್​ಗೆ ಬಹುಮತವಿರುವ ಕಾರಣ ಚುನಾವಣೆ ನಡೆಸಲಾಗುತ್ತಿಲ್ಲ ಬಿಜೆಪಿ ಸದಸ್ಯರನ್ನು ಖರೀದಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬಳ್ಳಾರಿ: ಪಾಲಿಕೆ ಚುನಾವಣೆ ನಡೆದು 9 ತಿಂಗಳಾದರೂ ನಡೆಯದ ಮೇಯರ್ ಚುನಾವಣೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ಬಳ್ಳಾರಿ ನಗರ ಪಾಲಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Feb 21, 2022 | 5:30 AM

Share

ಬಳ್ಳಾರಿ: ವಾರದೊಳಗೆ ಮೇಯರ್​ ಚುನಾವಣೆ ನಡೆಸದಿದ್ದರೆ ಹೋರಾಟ ಮಾಡಲಾಗುವುದು ಎಂದು ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ (Syed Naseer Hussain) ಎಚ್ಚರಿಕೆ ನೀಡಿದ್ದಾರೆ. ಪಾಲಿಕೆ (Ballari City Corporation) ಚುನಾವಣೆ ನಡೆದು 9 ತಿಂಗಳಾದರೂ ಮೇಯರ್, ಉಪಮೇಯರ್ ಚುನಾವಣೆ ನಡೆಯದ ಕುರಿತು ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೇಯರ್ ಚುನಾವಣೆ ನಡೆಸುವಂತೆ ಸಚಿವರು, ಅಧಿಕಾರಿಗಳ ಜತೆ ಚರ್ಚಿಸಿದ್ದೇವೆ. ಪಾಲಿಕೆ ಚುನಾವಣೆ ನಡೆದು 9 ತಿಂಗಳಾದರೂ ಪ್ರಾದೇಶಿಕ ಆಯುಕ್ತರು, ಡಿಸಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಹೊಸಪೇಟೆ ನಗರಸಭೆ ಚುನಾವಣೆ ನಡೆದ 15 ದಿನದಲ್ಲೇ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಎಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿಲ್ಲವೋ ಅಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಬಳ್ಳಾರಿ ನಗರ ಪಾಲಿಕೆಯಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಸಿಕ್ಕಿದೆ. 26 ಕಾರ್ಪೊರೇಟರ್​, ಮೂವರು ಚುನಾಯಿತ ಪ್ರತಿನಿಧಿಗಳಿದ್ದಾರೆ. ಬಳ್ಳಾರಿ ಪಾಲಿಕೆಯಲ್ಲಿ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ನಮ್ಮ​ ಸದಸ್ಯರಿಗೆ ಕೋಟಿ ಕೋಟಿ ಹಣದ ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಸದಸ್ಯರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ನಾಸಿರ್ ಹುಸೇನ್ ಗಂಭೀರ ಆರೋಪ ಮಾಡಿದ್ದಾರೆ.

‘ಕೈ’ ಸದಸ್ಯರ ಮನೆಗಳಿಗೆ ಹೋಗಿ ಅಲಿಖಾನ್​ ಮಾತಾಡುತ್ತಿದ್ದಾರೆ. ನಮ್ಮ ಬಾಸ್ ಕಳಿಸಿದ್ದಾರೆಂದು ಸದಸ್ಯರಿಗೆ ಆಮಿಷವೊಡ್ಡುತ್ತಿದ್ದಾರೆ. ಕೋಟಿ ಕೋಟಿ ಹಣ, ಕಾರು ನೀಡುವುದಾಗಿ ಸದಸ್ಯರಿಗೆ ಆಮಿಷ ನೀಡಲಾಗುತ್ತಿದೆ. ಅಲಿಖಾನ್ ಯಾರೆಂದು ಬಳ್ಳಾರಿ ಜಿಲ್ಲೆ ಜನರಿಗೆ ಚೆನ್ನಾಗಿ ಗೊತ್ತಿದೆ ಎಂದು ನಾಸೀರ್​ ಹುಸೇನ್ ಹೇಳಿದ್ದಾರೆ.

ವಾರದೊಳಗೆ ಮೇಯರ್ ಉಪಮೇಯರ್ ಚುನಾವಣೆ ನಡೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಜನರ ತೀರ್ಮಾನಕ್ಕೆ ತಲೆಬಾಗಿ ಮೇಯರ್ ಉಪಮೇಯರ್ ಚುನಾವಣೆ ನಡೆಸಬೇಕು. ಹಿಂದೆ ನಡೆದ ರೀತಿ ರಿಪಬ್ಲಿಕ್ ಬಳ್ಳಾರಿ ಮಾಡಲು ಬಿಡಲ್ಲ. ನಮ್ಮ 7 ಸದಸ್ಯರು, 5 ಸದಸ್ಯರು ಈಗಾಗಲೇ ಒಪ್ಪಿಕೊಂಡಿದ್ದಾರೆ‌. ನೀವೂ ಬನ್ನಿ ಎಂದು ಸದಸ್ಯರನ್ನು ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ಸದಸ್ಯರು ಅವರ ಬಳಿ ಹೋಗದಿದ್ದರೂ, ಅವರೇ ನಮ್ಮ ಸದಸ್ಯರ ಮನೆಗೆ ಬಂದೂ ಆಫರ್ ಮಾಡುತ್ತಿದ್ದಾರೆ ಎಂದು ಹುಸೇನ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಉಪಸ್ಥಿತರಿದ್ದರು.

ಇದನ್ನೂ ಓದಿ:

ಆಹೋರಾತ್ರಿ ಧರಣಿಗೆ ಸರ್ಕಾರದ ಊಟ ಬೇಡ ಎಂದ ಕಾಂಗ್ರೆಸ್: ಅಶೋಕ್ ಟೀಕೆಗೆ ಕಾಂಗ್ರೆಸ್ ಸೆಡ್ಡು

ಯಾವುದೇ ಶಾಲಾ-ಕಾಲೇಜಿನಲ್ಲಿ ಕುಂಕುಮ, ಬಳೆ ವಿವಾದ ಉದ್ಭವಿಸಿಲ್ಲ: ಬಿಸಿ ನಾಗೇಶ್

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ