AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು
ಸೋನಿಯಾ ಗಾಂಧಿ
TV9 Web
| Edited By: |

Updated on: Nov 19, 2021 | 4:34 PM

Share

ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕಿಟ್ಗಾಗಿ ಪೈಪೋಟಿ ತೀವ್ರಗೊಂಡಿದೆ. ಕೆ.ಸಿ.ಕೊಂಡಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದ್ದು ಮುಂಡರಿಗಿ ನಾಗರಾಜ್ಗೆ ಟಿಕೆಟ್ ನೀಡಲು ಶಾಸಕರ ಒತ್ತಾಯ ಕೇಳಿ ಬಂದಿದೆ.

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ. ಅಲ್ಲದೆ ಸ್ಥಳೀಯ ನಾಯಕರೂ ಕೂಡ ಕೆ.ಸಿ.ಕೊಂಡಯ್ಯಗೆ ಟಿಕಿಟ್ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಮುಖ ಸಮಾಜಗಳಿಗೆ ಆದ್ಯತೆ ನೀಡಲು ಮನವಿ ಮಾಡಿದ್ದಾರೆ. ದಲಿತ ಎಡಗೈ ಸಮಾಜದ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡಲು ಪಟ್ಟು ಹಿಡಿದಿದ್ದಾರೆ. ಆದರೆ ಕೆ.ಸಿ.ಕೊಂಡಯ್ಯ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್ ಬೀಸಿದ್ದಾರೆ.

ಇನ್ನು ಮತ್ತೊಂದೆಡೆ ಎಂಎಲ್ಸಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಕೆ.ಹೆಚ್. ಮುನಿಯಪ್ಪ, ಎಲ್ ಹನುಮಂತಯ್ಯ, ಹೆಚ್ ಆಂಜನೇಯ, ಆರ್.ಬಿ. ತಿಮ್ಮಾಪುರ, ಚಂದ್ರಪ್ಪರಿಂದ ಜಂಟಿ ಪತ್ರ ಬರೆಯಲಾಗಿದೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಅನ್ನ ಮುಂಡರಗಿ ನಾಗರಾಜ್ಗೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಮುಂಡರಗಿ ನಾಗರಾಜ್, 1999 ರ ಚುನಾವಣೆಯಲ್ಲಿ ಸೋನಿಯಾ ಪರ ಕೆಲಸ ಮಾಡಿದ್ದರು. ಆ ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ಮಾಡಿದ್ದರು. ಪಕ್ಷ ಕೂಡ ಈ ಹಿಂದೆ ಅವರಿಗೆ ಸೂಕ್ತ ಭರವಸೆ ನೀಡಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ದಲಿತರಿಗೆ ಸ್ಥಾನಮಾನ‌ ನೀಡಬೇಕಿದೆ. ಎಲ್ಲಾ ಅಂಶಗಳನ್ನ ಪರಿಗಣಿಸಿ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಈಗಾಗಲೇ ಕೆ.ಸಿ. ಕೊಂಡಯ್ಯಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ನಿಜವಾದ ರೈತರಿಗೆ ದೀರ್ಘಕಾಲೀನ ನಷ್ಟವನ್ನು ಉಂಟು ಮಾಡಿದೆ; ಕೃಷಿ ಕಾನೂನು ವಾಪಸ್ ಪಡೆದ ಬಗ್ಗೆ ಭಾರತೀಯ ಕಿಸಾನ್ ಸಂಘ ಪ್ರತಿಕ್ರಿಯೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್