AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು
ಸೋನಿಯಾ ಗಾಂಧಿ
TV9 Web
| Edited By: |

Updated on: Nov 19, 2021 | 4:34 PM

Share

ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕಿಟ್ಗಾಗಿ ಪೈಪೋಟಿ ತೀವ್ರಗೊಂಡಿದೆ. ಕೆ.ಸಿ.ಕೊಂಡಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದ್ದು ಮುಂಡರಿಗಿ ನಾಗರಾಜ್ಗೆ ಟಿಕೆಟ್ ನೀಡಲು ಶಾಸಕರ ಒತ್ತಾಯ ಕೇಳಿ ಬಂದಿದೆ.

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ. ಅಲ್ಲದೆ ಸ್ಥಳೀಯ ನಾಯಕರೂ ಕೂಡ ಕೆ.ಸಿ.ಕೊಂಡಯ್ಯಗೆ ಟಿಕಿಟ್ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಮುಖ ಸಮಾಜಗಳಿಗೆ ಆದ್ಯತೆ ನೀಡಲು ಮನವಿ ಮಾಡಿದ್ದಾರೆ. ದಲಿತ ಎಡಗೈ ಸಮಾಜದ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡಲು ಪಟ್ಟು ಹಿಡಿದಿದ್ದಾರೆ. ಆದರೆ ಕೆ.ಸಿ.ಕೊಂಡಯ್ಯ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್ ಬೀಸಿದ್ದಾರೆ.

ಇನ್ನು ಮತ್ತೊಂದೆಡೆ ಎಂಎಲ್ಸಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಕೆ.ಹೆಚ್. ಮುನಿಯಪ್ಪ, ಎಲ್ ಹನುಮಂತಯ್ಯ, ಹೆಚ್ ಆಂಜನೇಯ, ಆರ್.ಬಿ. ತಿಮ್ಮಾಪುರ, ಚಂದ್ರಪ್ಪರಿಂದ ಜಂಟಿ ಪತ್ರ ಬರೆಯಲಾಗಿದೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಅನ್ನ ಮುಂಡರಗಿ ನಾಗರಾಜ್ಗೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಮುಂಡರಗಿ ನಾಗರಾಜ್, 1999 ರ ಚುನಾವಣೆಯಲ್ಲಿ ಸೋನಿಯಾ ಪರ ಕೆಲಸ ಮಾಡಿದ್ದರು. ಆ ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ಮಾಡಿದ್ದರು. ಪಕ್ಷ ಕೂಡ ಈ ಹಿಂದೆ ಅವರಿಗೆ ಸೂಕ್ತ ಭರವಸೆ ನೀಡಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ದಲಿತರಿಗೆ ಸ್ಥಾನಮಾನ‌ ನೀಡಬೇಕಿದೆ. ಎಲ್ಲಾ ಅಂಶಗಳನ್ನ ಪರಿಗಣಿಸಿ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಈಗಾಗಲೇ ಕೆ.ಸಿ. ಕೊಂಡಯ್ಯಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ನಿಜವಾದ ರೈತರಿಗೆ ದೀರ್ಘಕಾಲೀನ ನಷ್ಟವನ್ನು ಉಂಟು ಮಾಡಿದೆ; ಕೃಷಿ ಕಾನೂನು ವಾಪಸ್ ಪಡೆದ ಬಗ್ಗೆ ಭಾರತೀಯ ಕಿಸಾನ್ ಸಂಘ ಪ್ರತಿಕ್ರಿಯೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?