AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು
ಸೋನಿಯಾ ಗಾಂಧಿ
TV9 Web
| Edited By: |

Updated on: Nov 19, 2021 | 4:34 PM

Share

ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕಿಟ್ಗಾಗಿ ಪೈಪೋಟಿ ತೀವ್ರಗೊಂಡಿದೆ. ಕೆ.ಸಿ.ಕೊಂಡಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದ್ದು ಮುಂಡರಿಗಿ ನಾಗರಾಜ್ಗೆ ಟಿಕೆಟ್ ನೀಡಲು ಶಾಸಕರ ಒತ್ತಾಯ ಕೇಳಿ ಬಂದಿದೆ.

ಈಗಾಗಲೇ ಲೋಕಸಭೆ, ರಾಜ್ಯಸಭೆ ವಿಧಾನ ಪರಿಷತ್ ಸೇರಿ 6 ಬಾರಿ ಕೆ.ಸಿ.ಕೊಂಡಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ಈ ಬಾರಿ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡುವಂತೆ ಶಾಸಕರಾದ ಭೀಮಾ ನಾಯಕ್, ನಾಗೇಂದ್ರ, ಜೆ.ಎನ್.ಗಣೇಶ್, ತುಕಾರಾಂ ಹಾಗೂ ಮಾಜಿ ಶಾಸಕ ಅನಿಲ್ ಲಾಡ್ ಆಗ್ರಹಿಸಿದ್ದಾರೆ. ಅಲ್ಲದೆ ಸ್ಥಳೀಯ ನಾಯಕರೂ ಕೂಡ ಕೆ.ಸಿ.ಕೊಂಡಯ್ಯಗೆ ಟಿಕಿಟ್ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಮುಖ ಸಮಾಜಗಳಿಗೆ ಆದ್ಯತೆ ನೀಡಲು ಮನವಿ ಮಾಡಿದ್ದಾರೆ. ದಲಿತ ಎಡಗೈ ಸಮಾಜದ ಮುಂಡರಗಿ ನಾಗರಾಜ್ಗೆ ಟಿಕೆಟ್ ನೀಡಲು ಪಟ್ಟು ಹಿಡಿದಿದ್ದಾರೆ. ಆದರೆ ಕೆ.ಸಿ.ಕೊಂಡಯ್ಯ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್ ಬೀಸಿದ್ದಾರೆ.

ಇನ್ನು ಮತ್ತೊಂದೆಡೆ ಎಂಎಲ್ಸಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಕೆ.ಹೆಚ್. ಮುನಿಯಪ್ಪ, ಎಲ್ ಹನುಮಂತಯ್ಯ, ಹೆಚ್ ಆಂಜನೇಯ, ಆರ್.ಬಿ. ತಿಮ್ಮಾಪುರ, ಚಂದ್ರಪ್ಪರಿಂದ ಜಂಟಿ ಪತ್ರ ಬರೆಯಲಾಗಿದೆ.

ಬಳ್ಳಾರಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಅನ್ನ ಮುಂಡರಗಿ ನಾಗರಾಜ್ಗೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಮುಂಡರಗಿ ನಾಗರಾಜ್, 1999 ರ ಚುನಾವಣೆಯಲ್ಲಿ ಸೋನಿಯಾ ಪರ ಕೆಲಸ ಮಾಡಿದ್ದರು. ಆ ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ಮಾಡಿದ್ದರು. ಪಕ್ಷ ಕೂಡ ಈ ಹಿಂದೆ ಅವರಿಗೆ ಸೂಕ್ತ ಭರವಸೆ ನೀಡಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ದಲಿತರಿಗೆ ಸ್ಥಾನಮಾನ‌ ನೀಡಬೇಕಿದೆ. ಎಲ್ಲಾ ಅಂಶಗಳನ್ನ ಪರಿಗಣಿಸಿ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ದಲಿತ ನಾಯಕರು ಪತ್ರ ಬರೆದಿದ್ದಾರೆ. ಈಗಾಗಲೇ ಕೆ.ಸಿ. ಕೊಂಡಯ್ಯಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ: ನಿಜವಾದ ರೈತರಿಗೆ ದೀರ್ಘಕಾಲೀನ ನಷ್ಟವನ್ನು ಉಂಟು ಮಾಡಿದೆ; ಕೃಷಿ ಕಾನೂನು ವಾಪಸ್ ಪಡೆದ ಬಗ್ಗೆ ಭಾರತೀಯ ಕಿಸಾನ್ ಸಂಘ ಪ್ರತಿಕ್ರಿಯೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ