AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಗೆ ವಿರೋಧ: ಓಡಿ ಹೋಗಿ ಮದುವೆಯಾಗಿ ಬಂದ ದಂಪತಿಗೆ ವಧುವಿನ ಪೋಷಕರಿಂದ ಜೀವ ಬೆದರಿಕೆ

ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವ ಜೋಡಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.

ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ| Edited By: ವಿವೇಕ ಬಿರಾದಾರ|

Updated on: Jan 28, 2024 | 11:03 AM

Share

ಬಳ್ಳಾರಿ, ಜನವರಿ 28: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವ ಜೋಡಿ ರಕ್ಷಣೆ ಕೋರಿ ಬಳ್ಳಾರಿ (Bellary) ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ (SP) ಅವರಿಗೆ ಮನವಿ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ, ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದುಗೊಂಡು, ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು ಪ್ರೀತಿ ಮಾಡಲು ಆರಂಭಿಸಿದ್ದಾರೆ.

9ನೇ ತರಗತಿಯಲ್ಲಿ ಶಿಲ್ಪಾ ಅವರಿಗೆ ಪ್ರೀತಿ ಚಿಗುರಿದೆ. ಯುವಕ ನಾರಾಯಣ್​ ಜಿಲ್ಲಾ ಪಂಚಾಯಿತಿಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರೇಮಿಗಳು ಒಂದೇ ಜಾತಿಯವರಾಗಿದ್ದಾರೆ. ಈ ಪ್ರೀತಿ ವಿಚಾರ ಶಿಲ್ಪಾ ಮನೆಯವರಿಗೆ ತಿಳಿದಿದೆ. ಆಗ ಶಿಲ್ಪಾ ಅಣ್ಣಂದಿರು ಇಬ್ಬರನ್ನು ಬೇರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ನಾರಾಯಾಣ ಪೋಷಕರು ಇವರ ಮದುವೆ ಒಪ್ಪಿಗೆ ನೀಡಿದ್ದಾರೆ. ಇನ್ನು ನಾರಾಯಣನನ್ನು ಮರೆಯುವಂತೆ, ಬೇರೆ ಹುಡುಗನನ್ನು ಮದುವೆಯಾಗುವಂತೆ ಶಿಲ್ಪಾರಿಗೆ ಆಕೆಯ ಅಣ್ಣಂದಿರು ಒತ್ತಡ ಹಾಕಲು ಆರಂಭಿಸಿದ್ದಾರೆ. ಆದರೆ ಶಿಲ್ಪಾ ಇದಕ್ಕೆ ಒಪ್ಪದೆ ಮನೆ ಬಿಟ್ಟು ಬಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಟಮಟ ಮಧ್ಯಾಹ್ನ ಕಾರಿನಲ್ಲೇ ಕಾಮತೃಷೆ ತೀರಿಸಲು ಮುಂದಾದ ಜೋಡಿ, ಆಮೇಲೇನಾಯ್ತು?

ಬಳಿಕ ನಾರಾಯಣ ಮತ್ತು ಶಿಲ್ಪಾ ಓಡಿ ಹೋಗಿ ಆಂಧ್ರ ಪ್ರದೇಶ ನರಸಿಂಹ ದೇವಾಯದಲ್ಲಿ ಇಂದು (ಜ.28) ಮದುವೆಯಾಗಿದ್ದಾರೆ. ಇದೀಗ ನವ ಜೋಡಿ ಮರಳಿ ಬಳ್ಳಾರಿಗೆ ಬಂದಿದ್ದು, ಪೋಷಕರು ಶಿಲ್ಪಾಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ನಾರಾಯಣ ಹತ್ತಿರ ಆಸ್ತಿ ಇಲ್ಲವೆಂದು ಶಿಲ್ಪಾ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಲ್ಪಾ ಪಿಯುಸಿವರೆಗು ಓದಿದ್ದು, ನಾರಾಯಣ್ ಬಿ.ಕಾಂ ಪದವೀಧರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ