AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ

ಕೊಲೆ ಆರೋಪಿ ನಟ ದರ್ಶನ್​​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಬಳ್ಳಾರಿಯಲ್ಲಿದ್ದವು ಮೂರು ಕಾರಾಗೃಹಗಳು. ಈ ಬಳ್ಳಾರಿ ಕಾರಾಗೃಹಗಳನ್ನು ನಿರ್ಮಿಸಿದವರು ಯಾರು? ಯಾವಾಗ ನಿರ್ಮಿಸಿದರು ಎಂಬ ಮಾಹಿತಿ ಇಲ್ಲಿದೆ.

ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ
ಬಳ್ಳಾರಿ ಕೇಂದ್ರ ಕಾರಾಗೃಹ
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:09 PM

Share

ಬಳ್ಳಾರಿ, ಆಗಸ್ಟ್​ 28: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ರಾಜಾತಿಥ್ಯ ಪಡೆಯುತ್ತಿದ್ದ ಕೊಲೆ ಆರೋಪಿ ನಟ ದರ್ಶನ್​​ನನ್ನು (Darshan) ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ (Ballari Central Jail) ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ದರ್ಶನ್​ ಇಂದು (ಆಗಸ್ಟ್​​.28) ರಾತ್ರಿ ಕಾರಾಗೃಹಕ್ಕೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಈ ಬಳ್ಳಾರಿ ಕಾರಾಗೃಹವನ್ನು ನಿರ್ಮಿಸಿದವರು ಯಾರು? ಯಾವಾಗ ನಿರ್ಮಿಸಿದರು ಎಂಬ ಮಾಹಿತಿ ಇಲ್ಲಿದೆ.

ಬಳ್ಳಾರಿ ಕೇಂದ್ರ ಕಾರಾಗೃಹ ಇತಿಹಾಸವೇ ರೋಚಕ

ಬಳ್ಳಾರಿ ಕೇಂದ್ರ ಕಾರಾಗೃಹ ಸ್ವಾತಂತ್ರ ಹೋರಾಟಗಾರಿಗೂ ಭಯ ಹುಟ್ಟಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1874ರಲ್ಲಿ ಬ್ರಿಟಿಷ್ ಸರ್ಕಾರ ಬಳ್ಳಾರಿ ಕೇಂದ್ರ ಕಾರಾಗೃಹ ನಿರ್ಮಾಣ ಮಾಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಾಯಕರನ್ನು ಬಳ್ಳಾರಿ ಜೈಲಿನಲ್ಲಿ ಇರಿಸಲಾಗುತ್ತಿತ್ತು. ಮದ್ರಾಸ್ ಪ್ರಾಂತ್ಯದ ನಾಲ್ಕು ಜಿಲ್ಲೆ ಹೋರಾಟಗಾರನನ್ನು ಬಳ್ಳಾರಿ ಜೈಲಿನಲ್ಲಿ ಬ್ರಿಟೀಷರು ಬಂಧಿಸಿ ಇಡುತ್ತಿದ್ದರು.

ಇದನ್ನೂ ಓದಿ: ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ಬಳ್ಳಾರಿಯಲ್ಲಿ ಒಟ್ಟು 3 ಕಾರಾಗೃಹ

ಸ್ವಾತಂತ್ರ್ಯ ಹೋರಾಟದ ವೇಳೆ ಬಳ್ಳಾರಿಯಲ್ಲಿ ಮೂರು ಕಾರಾಗೃಹಗಳನ್ನು ಬ್ರಿಟೀಶ್​ರು ನಿರ್ಮಾಣ ಮಾಡಿದ್ದರು. ಎರಡನೇ ಮಹಾಯುದ್ಧಕ್ಕೂ ಮುನ್ನ ಬಳ್ಳಾರಿ ಕೇಂದ್ರ ಕಾರಾಗೃಹವನ್ನು ನಿರ್ಮಾಣ ಮಾಡಲಾಯಿತಿ. ನಂತರ ಅಲ್ಲಿಪುರ ಜೈಲನ್ನು ನಿರ್ಮಾಣ ಮಾಡಲಾಯಿತು. ಸ್ವಾತಂತ್ರ್ಯ ಸಂಗ್ರಾಮದ ವೇಳೆ ಕ್ಷಯ ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿಯ ಟಿಬಿ ಸ್ಹಾನಿಟೋರಿಯಂ ಪ್ರದೇಶದಲ್ಲಿ ಬ್ರಿಟೀಷ ಅಧಿಕಾರಿ ವೆಲ್ಲೆಸ್ಲಿ ಮತ್ತೊಂದು ಜೈಲು ನಿರ್ಮಿಸಿನು. ಕ್ಷಯರೋಗಕ್ಕೆ ತುತ್ತಾದ ಆರೋಪಿಗಳನ್ನು ಇಲ್ಲಿ ಇರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತು.

ಮದ್ರಾಸ್ ಪ್ರಾಂತ್ಯದ ಕಡಪ, ಕರ್ನೂಲ್, ಅನಂತಪುರ ಹಾಗೆ ಬಳ್ಳಾರಿ ಜಿಲ್ಲೆ ಹೋರಾಟಗಾರನ್ನು ಬಂಧಿಸಿ, ಇರಿಸಲು ಈ ಮೂರು ಜೈಲುಗಳನ್ನು ನಿರ್ಮಾಣ ಮಾಡಲಾಗಿತ್ತು. ಸದ್ಯ ಟಿಬಿ ಸ್ಹಾನಿಟೋರಿಯಂ ಮತ್ತು ಅಲ್ಲಿಪುರ ಜೈಲುಗಳು ಬಂದ್​ ಆಗಿವೆ. ಬಳ್ಳಾರಿ ಕೇಂದ್ರ ಕಾರಾಗೃಹ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸದ್ಯ 385 ಖೈದಿಗಳು ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Wed, 28 August 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ