AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ

ಕೊಲೆ ಆರೋಪಿ ನಟ ದರ್ಶನ್​​ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಬಳ್ಳಾರಿಯಲ್ಲಿದ್ದವು ಮೂರು ಕಾರಾಗೃಹಗಳು. ಈ ಬಳ್ಳಾರಿ ಕಾರಾಗೃಹಗಳನ್ನು ನಿರ್ಮಿಸಿದವರು ಯಾರು? ಯಾವಾಗ ನಿರ್ಮಿಸಿದರು ಎಂಬ ಮಾಹಿತಿ ಇಲ್ಲಿದೆ.

ದರ್ಶನ್​ ಶಿಫ್ಟ್​ ಆಗುವ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸ
ಬಳ್ಳಾರಿ ಕೇಂದ್ರ ಕಾರಾಗೃಹ
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:09 PM

Share

ಬಳ್ಳಾರಿ, ಆಗಸ್ಟ್​ 28: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ರಾಜಾತಿಥ್ಯ ಪಡೆಯುತ್ತಿದ್ದ ಕೊಲೆ ಆರೋಪಿ ನಟ ದರ್ಶನ್​​ನನ್ನು (Darshan) ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ (Ballari Central Jail) ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ. ದರ್ಶನ್​ ಇಂದು (ಆಗಸ್ಟ್​​.28) ರಾತ್ರಿ ಕಾರಾಗೃಹಕ್ಕೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಬಳ್ಳಾರಿ ಕಾರಾಗೃಹಕ್ಕೆ 140 ವರ್ಷಗಳ ಇತಿಹಾಸವಿದೆ. ಈ ಬಳ್ಳಾರಿ ಕಾರಾಗೃಹವನ್ನು ನಿರ್ಮಿಸಿದವರು ಯಾರು? ಯಾವಾಗ ನಿರ್ಮಿಸಿದರು ಎಂಬ ಮಾಹಿತಿ ಇಲ್ಲಿದೆ.

ಬಳ್ಳಾರಿ ಕೇಂದ್ರ ಕಾರಾಗೃಹ ಇತಿಹಾಸವೇ ರೋಚಕ

ಬಳ್ಳಾರಿ ಕೇಂದ್ರ ಕಾರಾಗೃಹ ಸ್ವಾತಂತ್ರ ಹೋರಾಟಗಾರಿಗೂ ಭಯ ಹುಟ್ಟಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1874ರಲ್ಲಿ ಬ್ರಿಟಿಷ್ ಸರ್ಕಾರ ಬಳ್ಳಾರಿ ಕೇಂದ್ರ ಕಾರಾಗೃಹ ನಿರ್ಮಾಣ ಮಾಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಾಯಕರನ್ನು ಬಳ್ಳಾರಿ ಜೈಲಿನಲ್ಲಿ ಇರಿಸಲಾಗುತ್ತಿತ್ತು. ಮದ್ರಾಸ್ ಪ್ರಾಂತ್ಯದ ನಾಲ್ಕು ಜಿಲ್ಲೆ ಹೋರಾಟಗಾರನನ್ನು ಬಳ್ಳಾರಿ ಜೈಲಿನಲ್ಲಿ ಬ್ರಿಟೀಷರು ಬಂಧಿಸಿ ಇಡುತ್ತಿದ್ದರು.

ಇದನ್ನೂ ಓದಿ: ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ಬಳ್ಳಾರಿಯಲ್ಲಿ ಒಟ್ಟು 3 ಕಾರಾಗೃಹ

ಸ್ವಾತಂತ್ರ್ಯ ಹೋರಾಟದ ವೇಳೆ ಬಳ್ಳಾರಿಯಲ್ಲಿ ಮೂರು ಕಾರಾಗೃಹಗಳನ್ನು ಬ್ರಿಟೀಶ್​ರು ನಿರ್ಮಾಣ ಮಾಡಿದ್ದರು. ಎರಡನೇ ಮಹಾಯುದ್ಧಕ್ಕೂ ಮುನ್ನ ಬಳ್ಳಾರಿ ಕೇಂದ್ರ ಕಾರಾಗೃಹವನ್ನು ನಿರ್ಮಾಣ ಮಾಡಲಾಯಿತಿ. ನಂತರ ಅಲ್ಲಿಪುರ ಜೈಲನ್ನು ನಿರ್ಮಾಣ ಮಾಡಲಾಯಿತು. ಸ್ವಾತಂತ್ರ್ಯ ಸಂಗ್ರಾಮದ ವೇಳೆ ಕ್ಷಯ ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿಯ ಟಿಬಿ ಸ್ಹಾನಿಟೋರಿಯಂ ಪ್ರದೇಶದಲ್ಲಿ ಬ್ರಿಟೀಷ ಅಧಿಕಾರಿ ವೆಲ್ಲೆಸ್ಲಿ ಮತ್ತೊಂದು ಜೈಲು ನಿರ್ಮಿಸಿನು. ಕ್ಷಯರೋಗಕ್ಕೆ ತುತ್ತಾದ ಆರೋಪಿಗಳನ್ನು ಇಲ್ಲಿ ಇರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತು.

ಮದ್ರಾಸ್ ಪ್ರಾಂತ್ಯದ ಕಡಪ, ಕರ್ನೂಲ್, ಅನಂತಪುರ ಹಾಗೆ ಬಳ್ಳಾರಿ ಜಿಲ್ಲೆ ಹೋರಾಟಗಾರನ್ನು ಬಂಧಿಸಿ, ಇರಿಸಲು ಈ ಮೂರು ಜೈಲುಗಳನ್ನು ನಿರ್ಮಾಣ ಮಾಡಲಾಗಿತ್ತು. ಸದ್ಯ ಟಿಬಿ ಸ್ಹಾನಿಟೋರಿಯಂ ಮತ್ತು ಅಲ್ಲಿಪುರ ಜೈಲುಗಳು ಬಂದ್​ ಆಗಿವೆ. ಬಳ್ಳಾರಿ ಕೇಂದ್ರ ಕಾರಾಗೃಹ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸದ್ಯ 385 ಖೈದಿಗಳು ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Wed, 28 August 24

Follow Us
Vinayak Badiger
Vinayak Badiger
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ