AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1ರಿಂದ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೇ ನ್ಯಾಯಾಲಯದಲ್ಲಿ ದಾವೆ ಹೂಡಲು ಮುಂದಾದ ವಕೀಲ

ಚುನಾವಣೆಗೂ ಮುನ್ನ ಕಾಂಗ್ರೆಸ್​ ನಾಯಕರು ಗ್ಯಾರಂಟಿ ಭರವಸೆ ನೀಡಿದ್ರು, ರಾಜ್ಯದ ಜನರು ಸಹ ಕೈ ನಾಯಕರು ನೀಡಿದ ಗ್ಯಾರಂಟಿ ನಂಬಿಕೊಂಡು ಭರ್ಜರಿಯಾಗಿ ಬಹುಮತ ನೀಡಿದ್ದಾರೆ. ಆದ್ರೆ, ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ವಿಳಂಬ ನೀತಿ ಅನುಸರಿಸುತ್ತಿದೆ. ಇದೇ ವಿಚಾರವಾಗಿ ನ್ಯಾಯವಾದಿಯೊಬ್ಬರು ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲು ಮುಂದಾಗಿದ್ದಾರೆ. ವಕೀಲರು ಗ್ಯಾರಂಟಿ ಯೋಜನೆ ವಿಚಾರವಾಗಿ ಕೇಸ್ ಹಾಕ್ತಿರೋದ್ಯಾಕೆ. ಆ ಕುರಿತಾದ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.

ಜೂನ್ 1ರಿಂದ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೇ ನ್ಯಾಯಾಲಯದಲ್ಲಿ ದಾವೆ ಹೂಡಲು ಮುಂದಾದ ವಕೀಲ
ಕಾಂಗ್ರೆಸ್​ ಗ್ಯಾರಂಟಿ ವಿರುದ್ದ ಸಿಡಿದೆದ್ದ ನ್ಯಾಯವಾದಿ
ಕಿರಣ್ ಹನುಮಂತ್​ ಮಾದಾರ್
|

Updated on:May 30, 2023 | 8:26 AM

Share

ಬಳ್ಳಾರಿ: ಮಹಿಳೆಯರಿಗೆ ಬಸ್ ಟಿಕೆಟ್, ಬಡ ಕುಟುಂಬಕ್ಕೆ 10 ಕೆಜಿ ಅಕ್ಕಿ, 200 ಯೂನಿಟ್ ವಿದ್ಯುತ್ ಉಚಿತ, 3 ಸಾವಿರ ರೂಪಾಯಿ ಯುವ ನಿಧಿ. ಹೀಗೆ ಕಾಂಗ್ರೆಸ್(Congress)​ ನಾಯಕರು ಗ್ಯಾರಂಟಿ ಗ್ಯಾರಂಟಿ ಎಂದು ಅಬ್ಬರದ ಪ್ರಚಾರ ಮಾಡಿದ್ರು. ಆದ್ರೆ, ಇದೇ ಗ್ಯಾರಂಟಿ ವಿಚಾರ ಇದೀಗ ಸಾಕಷ್ಟು ಸದ್ದು ಮಾಡ್ತಿದೆ. ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಲು ಸರ್ಕಾರ ವಿಳಂಬ ಮಾಡ್ತಿರೋದಕ್ಕೆ ಮತದಾರರು, ವಿಪಕ್ಷ ನಾಯಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಕೈ ನಾಯಕರು ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷದವರು ಮತದಾರರಿಗೆ ಕರೆ ನೀಡಿದ ಬೆನ್ನಲ್ಲೆ ಇದೀಗ ನ್ಯಾಯವಾದಿಯೊಬ್ಬರು ನ್ಯಾಯಾಲಯದಲ್ಲಿ ದಾವೆ ಹೂಡಲು ಸಜ್ಜಾಗಿದ್ದಾರೆ. ಬಳ್ಳಾರಿಯ ಹಿರಿಯ ನ್ಯಾಯವಾದಿ(Lawyer)ಹೆಚ್ ಚಂದ್ರಶೇಖರ ರೆಡ್ಡಿ ಎನ್ನುವವರು ಸರ್ಕಾರದ ವಿರುದ್ದ ಕೇಸ್​ ದಾಖಲಿಸಲು ಮುಂದಾಗಿದ್ದಾರೆ. ಕೈ ನಾಯಕರು ಮತದಾರರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು. ಇಲ್ಲದಿದ್ದರೇ ಕೇಸ್ ಹಾಕುವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜೂನ್ 1ರಿಂದ ಬಸ್ ಟಿಕೆಟ್, ಉಚಿತ ವಿದ್ಯುತ್ ಎಂದು ಕೈ ನಾಯಕರು ಚುನಾವಣೆ ವೇಳೆ ಭರವಸೆ ನೀಡಿದ್ರು. ಆದ್ರೆ, ಜೂನ್ ಆರಂಭಕ್ಕೆ ಇನ್ನೇರಡು ದಿನಗಳು ಬಾಕಿಯುಳಿದ್ರು ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಮತದಾರರನ್ನ ನಂಬಿಸಿ ಮತ ಪಡೆದಿರುವ ಕಾಂಗ್ರೆಸ ಪಕ್ಷ. ಮತ್ತು ಗ್ಯಾರಂಟಿ ಕಾರ್ಡ್ ಮೇಲೆ ಸಹಿ ಹಾಕಿರುವ ಸಿದ್ದರಾಮಯ್ಯ. ಡಿಸಿಎಂ ಡಿಕೆಶಿವಕುಮಾರ್ ಕೂಡಲೇ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೇ ಎಲ್ಲ ತಾಲೂಕುಗಳ ನ್ಯಾಯಾಲಯದಲ್ಲೂ ಸರ್ಕಾರ ಮತ್ತು ಸಿಎಂ. ಡಿಸಿಎಂ ವಿರುದ್ದ ಕೇಸ್ ದಾಖಲಿಸುವುದಾಗಿ ನ್ಯಾಯವಾದಿ ಚಂದ್ರಶೇಖರರೆಡ್ಡಿ ಗುಡುಗಿದ್ದಾರೆ.

ಇದನ್ನೂ ಓದಿ:5 Guarantees: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ: ರೂಲ್ಸ್​ ಏನೇನು? ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ?

ಗ್ಯಾರಂಟಿ ಯೋಜನೆ ವಿಚಾರವಾಗಿ ಮತದಾರರಿಗೆ ವಿಪಕ್ಷದವರು ಒಂದೆಡೆ ಬಿಲ್ ಕಟ್ಟಬೇಡಿ. ಬಸ್ ಟಿಕೆಟ್​ ತಗೆದುಕೊಳ್ಳಬೇಡಿ ಎಂದು ಪ್ರಚೋದನೆ ಮಾಡ್ತಿದ್ದಾರೆ. ಇನ್ನೊಂದೆಡೆ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡೋ ಬಗ್ಗೆ ಸಭೆಗಳ ಮೇಲೆ ಸಭೆ ಮಾಡ್ತಿದ್ದಾರೆ. ಈ ಮಧ್ಯೆ ನ್ಯಾಯವಾದಿಯೊಬ್ಬರು ಗ್ಯಾರಂಟಿ ವಿಚಾರವಾಗೇ ಕೇಸ್ ದಾಖಲಿಸಲು ಮುಂದಾಗಿರುವುದು ವಿಶೇಷವಾಗಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆ ಬಗ್ಗೆ ಏನು ನಿರ್ಧಾರ ಕೈಗೊಳ್ಳುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 am, Tue, 30 May 23

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ