Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದಿಂದ ತತ್ತರಿಸಿದ ಬಳ್ಳಾರಿ ರೈತರಿಗೆ ಮತ್ತೊಂದು ಸಂಕಷ್ಟ; ಮೆಣಸಿನಕಾಯಿಗೆ ರೋಗ, ಅನ್ನದಾತ ಕಂಗಾಲು

ಬಳ್ಳಾರಿಯಲ್ಲಿ ಅನೇಕ ರೈತರು ಮೆಣಸಿನಕಾಯಿ ರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟೇ ರಾಸಾಯನಿಕ ಸಿಂಪಡಣೆ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಲಕ್ಷಾಂತರ ರೂ ಖರ್ಚು ಮಾಡಿ ಬೆಳೆದ ಬೆಳೆ ಕೈಗೊಡುತ್ತಿದ್ದು ರೈತರು ಕಣ್ಣೀರಿನಲ್ಲಿ ಕೈ ತೊಳೆಯುವ ಪರಿಸ್ಥಿತಿ ಇದೆ.

ಬರದಿಂದ ತತ್ತರಿಸಿದ ಬಳ್ಳಾರಿ ರೈತರಿಗೆ ಮತ್ತೊಂದು ಸಂಕಷ್ಟ; ಮೆಣಸಿನಕಾಯಿಗೆ ರೋಗ, ಅನ್ನದಾತ ಕಂಗಾಲು
ಮೆಣಸಿನಕಾಯಿ ಬೆಳೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು

Updated on: Nov 23, 2023 | 10:17 AM

ಬಳ್ಳಾರಿ, ನ.23: ಬರದಿಂದ ತತ್ತರಿಸಿದ ಬಳ್ಳಾರಿ ರೈತರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೆಣಸಿನಕಾಯಿ (Chilli Crop) ಬೆಳೆ ಅನ್ನದಾತರಿಗೆ ಗಾಯದ ಮೇಲೆ ಬರೆ ಎಳೆದಿದೆ. ಫಸಲು ಬರುವ ಹಂತದಲ್ಲಿ ಮೆಣಸಿನಕಾಯಿ ಬೆಳೆಗಳಿಗೆ ರೋಗದ ಕಾಟ ಶುರುವಾಗಿದೆ. ಹೀಗಾಗಿ ಬಳ್ಳಾರಿಯಲ್ಲಿ ಅನೇಕ ರೈತರು (Farmers) ಮೆಣಸಿನಕಾಯಿ ರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಎಷ್ಟೇ ರಾಸಾಯನಿಕ ಸಿಂಪಡಣೆ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಲಕ್ಷಾಂತರ ರೂ ಖರ್ಚು ಮಾಡಿ ಬೆಳೆದ ಬೆಳೆ ಕೈಗೊಡುತ್ತಿದ್ದು ರೈತರು ಕಣ್ಣೀರಿನಲ್ಲಿ ಕೈ ತೊಳೆಯುವ ಪರಿಸ್ಥಿತಿ ಇದೆ.

ತಲಾ ಎಕರೆಗೆ 1 ಲಕ್ಷವರಿಗೂ ಖರ್ಚು ಮಾಡಿ ಮೆಣಸಿನಕಾಯಿ ಬೆಳೆಯಲಾಗಿದೆ. ಆದರೆ ಮೆಣಸಿನಕಾಯಿ ಬೆಳೆಗೆ ರಸ ಹಿರುವ ರೋಗ ಕಾಡುತ್ತಿದೆ. ಮೆಣಸಿನಕಾಯಿ ಬೆಳೆಗೆ ಕಪ್ಪು ಥ್ರಿಪ್ಸ್, ನುಸಿ, ಮುಟುರು ರೋಗಗಳು ತಗುಲುತ್ತಿದ್ದು ಮೆಣಸಿನಕಾಯಿ ಕೆಂಪು ಬಣ್ಣಕ್ಕೆ ತಿರುಗುತ್ತಿದೆ. ಒಣಗುವ ಹಂತಕ್ಕೆ ತಲುಪಿವೆ. ಗಿಡದಲ್ಲಿಯೇ ಮೆಣಸಿನಕಾಯಿ ಸತ್ವ ಕಳೆದುಕೊಂಡು ಒಣಗುತ್ತಿದೆ. ಎಲೆಗಳು ಉದರುತ್ತಿವೆ. ಕೀಟ ಬಾಧೆಗೆ ಬಳ್ಳಾರಿ ಜಿಲ್ಲೆ ರೈತರು ಹೈರಾಣಾಗಿದ್ದಾರೆ. ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು ತಾಲೂಕಿನ‌ಲ್ಲಿ ಎಷ್ಟೇ ಕೀಟ ನಾಶಕ ರಾಸಾಯನಿಕ ಬಳಕೆ ಮಾಡಿದರೂ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ಬಳ್ಳಾರಿ ಜಿಲ್ಲೆಯಾದ್ಯಂತ 37 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಫಸಲು ಕಳೆದುಕೊಳ್ಳುವ ಭೀತಿಯಲ್ಲಿ ಅನ್ನದಾತರಿದ್ದಾರೆ.

ಇದನ್ನೂ ಓದಿ: Green Chilli Benefits: ಹಸಿ ಮೆಣಸಿನಕಾಯಿ ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ

ಮೇಣಸಿನಕಾಯಿಗೆ ರೋಗ ತಗುಲದಿರಲು ನಿರ್ವಾಹಣೆ ಹೀಗಿರಲಿ

ಬಿತ್ತಿದ 8 ರಿಂದ 12 ದಿನದೊಳಗೆ ಸಸಿ ಕಾಂಡ ಕೊಳೆ ರೋಗ ಕಂಡು ಬಂದರೆ 2 ಗ್ರಾಂ ರಿಡೋಮಿಲ್ ಎಂ ಝಢ್. ಅಥವಾ 2 ಗ್ರಾಂ ಥೈರಾಮ್ ಅಥವಾ 2 ಗ್ರಾಂ ಕ್ಯಾಪ್ಟಾನನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಶಿಲೀಂದ್ರನಾಶಕ ದ್ರಾವಣವನ್ನು ಸಸಿ ಮಡಿಗಳಲ್ಲಿ ಹಾಕಬೇಕು. ಮೆಣಸಿನ ಸಸಿಗಳ ನಾಟಿಗೆ ಐದ ದಿನ ಮುಂಚೆ ಸಸಿ ಮಡಿಗಳಲ್ಲಿಯೇ ಚಿವುಟಿ ಹಾರೆ ನಂತರ ನಾಟಿ ಮಾಡುವುದರಿಂದ ಮುಟುರುರೋಗದ ಬಾದೆ ಕಡಿಮೆಯಾಗುವುದು ಮತ್ತು ಹೆಚ್ಚಿನ ಇಳುವರಿ ಪಡೆಯಬಹುದು. ಪ್ರತಿ ಅರ್ಧ ಎಕರೆ ಸುತ್ತಲೂ 3 ರಿಂದ 4 ಸಾಲು ಜೋಳ ಅಥವಾ ಗೋವಿನ ಜೋಳ 15 ರಿಂದ 20 ದಿನಗಳ ಮುಂಚೆ ಬಿತ್ತನೆ ಮಾಡಬೇಕು.ಬೆಳೆ ಪರಿವರ್ತನೆಯನ್ನು ಕೈಗೊಳ್ಳಬೇಕು, ಮೆಣಸಿನಕಾಯಿ, ಬದನೆ, ಆಲೂಗಡ್ಡೆ ಹಾಗೂ ಟೊಮ್ಯಾಟೊ ಬೆಳೆಗಳನ್ನು ಬಿಟ್ಟು ಇತರೆ ಬೆಳೆಗಳ ಕಾಲುಗೈ ಅನುಸರಿಸುವುದರಿಂದ ಸೊರಗು ರೋಗ ಹಾಗೂ ಬಾಡುರೋಗವನ್ನು ಹತೋಟಿಯಲ್ಲಿಡಬಹುದು.

ಬಳ್ಳಾರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ