AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಗೆ ಭಕ್ತರಿಗೆ ನಿರ್ಬಂಧ ; ಸರಳ ಕಾರ್ಣಿಕ ಆಚರಣೆಗೆ ನಿರ್ಧಾರ

ಮೈಲಾರಲಿಂಗೇಶ್ವರ ಜಾತ್ರೆಗೆ ಬರುವ ಭಕ್ತರಿಗೆ ಜಿಲ್ಲಾಡಳಿತ ನಿರ್ಭಂಧ ವಿಧಿಸಿದೆ. ಐತಿಹಾಸಿಕ ಸುಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಗೆ ಜನರು ಮತ್ತು ಭಕ್ತರಿಗೆ ನಿರ್ಭಂದ ವಿಧಿಸಿ ವಿಜಯನಗರ ಡಿಸಿ ಅನಿರುದ್ಧ್ ಪಿ.ಶ್ರವಣ್ ಆದೇಶ ಹೊರಡಿಸಿದ್ದಾರೆ.

ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಗೆ ಭಕ್ತರಿಗೆ ನಿರ್ಬಂಧ ; ಸರಳ ಕಾರ್ಣಿಕ ಆಚರಣೆಗೆ ನಿರ್ಧಾರ
ಮೈಲಾರಲಿಂಗೇಶ್ವರ
TV9 Web
| Updated By: Pavitra Bhat Jigalemane|

Updated on:Jan 21, 2022 | 5:51 PM

Share

ವಿಜಯನಗರ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೂವಿನ ಹಡಗಲಿಯ ಐತಿಹಾಸಿಕ  ಮೈಲಾರಲಿಂಗೇಶ್ವರ ಜಾತ್ರೆಗೆ ಬರುವ ಭಕ್ತರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಐತಿಹಾಸಿಕ ಸುಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಗೆ ಜನರು ಮತ್ತು ಭಕ್ತರಿಗೆ ನಿರ್ಭಂದ ವಿಧಿಸಿ ವಿಜಯನಗರ ಡಿಸಿ ಅನಿರುದ್ಧ್ ಪಿ.ಶ್ರವಣ್ ಆದೇಶ ಹೊರಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಪ್ರಸಿದ್ಧ ಸುಕ್ಷೇತ್ರ ಮೈಲಾರಲಿಂಗೇಶ್ವರ ಕ್ಷೇತ್ರ. ಇಲ್ಲಿ ಫೆ. 8 ರಿಂದ 19ರವರೆಗೆ 11 ದಿನಗಳ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನರನ್ನು ನಿರ್ಭಂದಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ವಿಜಯನಗರ ಡಿಸಿ ಅನಿರುದ್ಧ್ ಪಿ.ಶ್ರವಣ್  11 ದಿ‌ನಗಳ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಐತಿಹಾಸಿಕ ಪ್ರಸಿದ್ದ ಕಾರ್ಣಿಕವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.  ಪ್ರತಿ ಬಾರಿ ನಡೆಯುವ ಕಾರ್ಣಿಕವನ್ನು ಭವಿಷ್ಯದ ದಿಕ್ಸೂಚಿ ಎಂದು ಕರೆಯಲಾಗುತ್ತದೆ. ಇದನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಆದರೆ ಈ ಬಾರಿ ಕೊರೋನಾ ಇರುವ ಹಿನ್ನೆಲೆಯಲ್ಲಿ ರೋಗ ಹರಡುವ ಭೀತಿ ಇದೆ. ಆದ್ದರಿಂದ ಜನರಿಗೆ ನಿರ್ಭಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ತಿರ್ಮಾನ  ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಳಿತವಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕೆಂಡ್​ ಕರ್ಫ್ಯೂವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚು ಇರುವ ಕಾರಣ 50:50  ನಿಯಮ ಜಾರಿಗೆ ತರಲಾಗಿದ್ದು, ನೈಟ್​ ಕರ್ಫ್ಯೂವನ್ನು ಮುಂದುವರೆಸಲಾಘಿದೆ. ಸಭೆ, ಸಮಾರಂಭಗಳಿಗೆ 200 ಜನರನ್ನು ಮಿತಿಗೊಳಿಸಲಾಗಿದ್ದು, ಆಯಾ ಜಿಲ್ಲೆಗೆ ಬೇಕಾದ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಕಠಿಣ ನಿಯಮ ಜಾರಿಗೆ ನಿರ್ಧಾರ

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ; ಜ.29ರಂದು ಮತ್ತೆ ಸಭೆ- ಶಿಕ್ಷಣ ಸಚಿವ

Published On - 5:41 pm, Fri, 21 January 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?