AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್: ತಂದೆ ಕಳೆದುಕೊಂಡು ಅನಾಥರಾದ್ರು ಮೂವರು ಹೆಣ್ಣು ಮಕ್ಕಳು!

ಬಳ್ಳಾರಿ: ಪಶ್ಚಿಮ ಬಂಗಾಳದ ಆ ಕುಟುಂಬ ಕಳೆದ ಹದಿನೈದು ವರ್ಷಗಳಿಂದಲೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಕೂಲಿ ಕೆಲ್ಸ ಮಾಡಿಕೊಂಡು ಜೀವನ ನಡೆಸುತ್ತಿತ್ತು. ಕಳೆದ ಹದಿನೈದು ವರ್ಷಗಳಿಂದಲೂ ಈ ಗ್ರಾಮದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿರುವ ಈ ಕುಟುಂಬದಲ್ಲಿ ಈಗ ಮೂವರು ಮಕ್ಕಳು ಅನಾಥರಾಗಿದ್ದಾರೆ. ಮಹಾಮಾರಿ ಕೊರೊನಾ ಅನ್ನೋ ಹೆಮ್ಮಾರಿ ಮೂರು ಮಕ್ಕಳನ್ನ ತಬ್ಬಲಿಗಳನ್ನಾಗಿ ಮಾಡಿದೆ. ಹೌದು ಪಶ್ಚಿಮ ಬಂಗಾಳದ ಮಧುಪುರ ಗುಲ್ಡ್ ಬಾ ಗ್ರಾಮದ ಅಬ್ದುಲ್ ಅಲೀಂ ಹಾಗೂ ಪತ್ನಿ ಪರ್ಷಿಯಾ ಕಳೆದ […]

ಲಾಕ್​ಡೌನ್ ಎಫೆಕ್ಟ್: ತಂದೆ ಕಳೆದುಕೊಂಡು ಅನಾಥರಾದ್ರು ಮೂವರು ಹೆಣ್ಣು ಮಕ್ಕಳು!
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 1:07 PM

Share

ಬಳ್ಳಾರಿ: ಪಶ್ಚಿಮ ಬಂಗಾಳದ ಆ ಕುಟುಂಬ ಕಳೆದ ಹದಿನೈದು ವರ್ಷಗಳಿಂದಲೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಕೂಲಿ ಕೆಲ್ಸ ಮಾಡಿಕೊಂಡು ಜೀವನ ನಡೆಸುತ್ತಿತ್ತು. ಕಳೆದ ಹದಿನೈದು ವರ್ಷಗಳಿಂದಲೂ ಈ ಗ್ರಾಮದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿರುವ ಈ ಕುಟುಂಬದಲ್ಲಿ ಈಗ ಮೂವರು ಮಕ್ಕಳು ಅನಾಥರಾಗಿದ್ದಾರೆ. ಮಹಾಮಾರಿ ಕೊರೊನಾ ಅನ್ನೋ ಹೆಮ್ಮಾರಿ ಮೂರು ಮಕ್ಕಳನ್ನ ತಬ್ಬಲಿಗಳನ್ನಾಗಿ ಮಾಡಿದೆ. ಹೌದು ಪಶ್ಚಿಮ ಬಂಗಾಳದ ಮಧುಪುರ ಗುಲ್ಡ್ ಬಾ ಗ್ರಾಮದ ಅಬ್ದುಲ್ ಅಲೀಂ ಹಾಗೂ ಪತ್ನಿ ಪರ್ಷಿಯಾ ಕಳೆದ ಹದಿನೈದು ವರ್ಷಗಳಿಂದೆ ತಾಯಕನಹಳ್ಳಿ ಗ್ರಾಮದಲ್ಲಿ ಬಂದಿದ್ದರು. ಗ್ರಾಮದಲ್ಲಿ ಗಾರೆ ಕೆಲ್ಸ ಮಾಡಿಕೊಂಡು ಈ ಕುಟುಂಬ ನೆಮ್ಮದಿಯಾಗಿ ಜೀವನ ಸಾಗಿಸುತ್ತಿದ್ರು.

ಕಳೆದ ಫೆಬ್ರವರಿ ತಿಂಗಳಲ್ಲಿ ತಾಯಕನಹಳ್ಳಿ ಗ್ರಾಮದಲ್ಲಿ ಮೂರು ಮಕ್ಕಳನ್ನ ಬಿಟ್ಟು ತನ್ನ ತಾಯಿಯನ್ನ ನೋಡಲು ಪತ್ನಿಯೊಂದಿಗೆ ಅಬ್ದುಲ್ ಅಲೀಂ ಪಶ್ಚಿಮ ಬಂಗಾಳಕ್ಕೆ ತೆರಳಿದ್ರು. ಆದ್ರೆ ಮಾರ್ಚ್ ತಿಂಗಳಲ್ಲಿ ಕೊರೊನಾ ಹೆಮ್ಮಾರಿ ತಡೆಯಲು ಕೇಂದ್ರ ಸರ್ಕಾರ ಕೈಗೊಂಡ ಲಾಕ್​ಡೌನ್​ನಿಂದಾಗಿ ವಾಪಾಸ್ ಬರಲು ಈ ಅಬ್ದುಲ್ ಅಲೀಂ ಗೆ ಸಾಧ್ಯವಾಗಿಲ್ಲ.

ಮಕ್ಕಳನ್ನು ನೋಡುವ ಮುನ್ನವೇ ಇಹಲೋಕ ತ್ಯಜಿಸಿದ ತಂದೆ: ಲಾಕ್​ಡೌನ್ ಸಡಿಲಿಕೆ ಬಳಿಕ ವಾಪಾಸ್ ಮಕ್ಕಳಿರುವ ತಾಯಕನಹಳ್ಳಿ ಗ್ರಾಮಕ್ಕೆ ಹೋಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದ ಅಬ್ದುಲ್ ಅಲೀಂ ಹೃದಯಘಾತವಾಗಿ ಬಾರದ ಲೋಕಕ್ಕೆ ಹೋಗಿದ್ದಾರೆ. ಫೆಬ್ರುವರಿಯಲ್ಲಿ ಪಶ್ಚಿಮ ಬಂಗಾಳಕ್ಕೆ ಹೋಗಿದ್ದ ಈ ದಂಪತಿ ಮೂರು ತಿಂಗಳು ಕಳೆದ್ರೂ ವಾಪಾಸ್ ಕರ್ನಾಟಕಕ್ಕೆ ಬರಲು ಸಾಧ್ಯವಾಗಲಿಲ್ಲ.

ಇತ್ತ ತಂದೆಯ ಸಾವಿನ ಸುದ್ದಿ ತಿಳಿದು ಮೂವರು ಮಕ್ಕಳು ಕಣ್ಣೀರು ಹಾಕಿದ್ದಾರೆ. ಅಲ್ಲದೇ ತಂದೆಯ ಅಂತ್ಯಸಂಸ್ಕಾರಕ್ಕೂ ಹೋಗದ ಪರಿಸ್ಥಿತಿ ಇವರದ್ದು. ಮೊಬೈಲ್ ವಾಟ್ಸಾಪ್ ಮೂಲಕವೇ ತಂದೆಯ ಅಂತ್ಯಸಂಸ್ಕಾರವನ್ನ ವೀಕ್ಷಿಸಿದ್ದಾರೆ. ಮಕ್ಕಳನ್ನ ನೋಡುವುದಕ್ಕಿಂತ ಮುಂಚೆಯೇ ಅಬ್ದುಲ್ ಅಲೀಂ ಇಹಲೋಕ ತ್ಯಜಿಸಿದ್ದಾರೆ. ಈತ್ತ ನಿತ್ಯ ತಂದೆಯನ್ನ ನೆನೆದು ಮೂವರು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ.

ತಂದೆಯನ್ನ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಅನಾಥವಾಗಿದ್ದ ಮೂವರು ಮಕ್ಕಳನ್ನ ಗ್ರಾಮದ ಮುಖಂಡ ಗನಿಸಾಬ್ ತಮ್ಮ ತೋಟದ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಮೂರು ಮಕ್ಕಳ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. 18 ವರ್ಷದ ಜನಾತುನ್ ಪಿರ್ದೋಜ್, 17 ವರ್ಷದ ಹಕ್ಲೀಮಾ ಬಳ್ಳಾರಿಯ ಮದ್ರಾಸಾ ದಲ್ಲಿ ಅಭ್ಯಾಸ ಮಾಡುತ್ತಿದ್ದು ಇನ್ನೊರ್ವ ಮಗಳು 14 ವರ್ಷದ ರಹಿಮಾ ಬಿಸ್ವಾಸ್ ಇದೇ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾಳೆ. ಈ ಮೂವರ ಮಕ್ಕಳ ತಾಯಿ ಪಶ್ಚಿಮ ಬಂಗಾಳದಿಂದ ಬರುವವರೆಗೂ ಇವರನ್ನ ಗ್ರಾಮದ ಗನಿಸಾಬ್ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಲಾಕ್​ಡೌನ್ ಎಫೆಕ್ಟ್​ನಿಂದಾಗಿ ಮೂವರು ಮಕ್ಕಳು ಅನಾಥರಾಗಿದ್ದಾರೆ. ತಂದೆಯನ್ನ ಕಳೆದುಕೊಂಡು ಪ್ರತಿನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಈತ್ತ ಅನಾಥರಾಗಿರುವ ಮೂವರು ಮಕ್ಕಳು ಪಶ್ಚಿಯ ಬಂಗಾಳದಿಂದ ತಾಯಿಯ ಬರುವಿಕೆಗಾಗಿ ಎದುರು ನೋಡುತ್ತಿದ್ದಾರೆ.

Published On - 1:56 pm, Wed, 20 May 20

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು