AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ 31 ಲಕ್ಷ ಪತ್ತೆ: ಮಾಹಿತಿ ನೀಡಿದ ಇಡಿ

ಬಳ್ಳಾರಿ ನಗರ ಕಾಂಗ್ರೆಸ್​ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ ದಾಳಿ) ಅಧಿಕಾರಿಗಳು ಫೆಬ್ರವರಿ 10 ರಂದು ದಾಳಿ ನಡೆಸಿದ್ದರು. ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಲಾಗಿತ್ತು. ಈ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪತ್ತೆಯಾದ ಮೊತ್ತದ ಮಾಹಿತಿ ನೀಡಿದೆ.

ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ 31 ಲಕ್ಷ ಪತ್ತೆ: ಮಾಹಿತಿ ನೀಡಿದ ಇಡಿ
ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ 31 ಲಕ್ಷ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ ಇಡಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on: Feb 13, 2024 | 5:57 PM

Share

ಬಳ್ಳಾರಿ, ಫೆ.13: ಬಳ್ಳಾರಿ ನಗರ ಕಾಂಗ್ರೆಸ್​ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದರ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಜಾರಿ ನಿರ್ದೇಶನಾಲಯ (Enforcement Directorate-ED), ಲೆಕ್ಕಕ್ಕೆ ಸಿಗದ 31 ಲಕ್ಷ ರೂಪಾಯಿ ಪತ್ತೆಯಾಗಿರುವುದಾಗಿ ತಿಳಿಸಿದೆ. ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಫೆಬ್ರವರಿ 10 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು.

ಈ ಬಗ್ಗೆ ಟ್ವೀಟ್ ಮಾಡಿದ ಜಾರಿ ನಿರ್ದೇಶನಾಲಯ, ಸೂರ್ಯ ನಾರಾಯಣ ರೆಡ್ಡಿ, ಭರತ್ ರೆಡ್ಡಿ ಮತ್ತು ಇತರರಿಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಅನೇಕ ಸ್ಥಳಗಳಲ್ಲಿ 2002 ರ PMLA ನಿಬಂಧನೆಗಳ ಅಡಿಯಲ್ಲಿ ಇಡಿ 10.02.2024 ರಂದು ಶೋಧಕಾರ್ಯ ನಡೆಸಿದೆ. ಈ ಸಮಯದಲ್ಲಿ, ವಿವಿಧ ದಾಖಲೆಗಳು, ವ್ಯವಹಾರ ದಾಖಲೆಗಳು, ಸ್ಥಿರ ಮತ್ತು ಚರ ಆಸ್ತಿಗಳ ವಿವರಗಳು ಮತ್ತು ಲೆಕ್ಕಕ್ಕೆ ಬಾರದ 31 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ನಗರದ ನೆಹರು ಕಾಲೋನಿಯಲ್ಲಿರುವ ಶಾಸಕ ಭರತ್ ರೆಡ್ಡಿ ಮತ್ತು ಅವರ ಚಿಕ್ಕಪ್ಪ ಪ್ರತಾಪರೆಡ್ಡಿ ಅವರ ಮನೆ ಮೇಲೆ ಹಾಗೂ ಗಾಂಧಿನಗರದಲ್ಲಿರುವ ಶಾಸಕರ ತಂದೆ‌ ಸೂರ್ಯನಾರಾಯಣ ರೆಡ್ಡಿ ಕಚೇರಿ, ಶಾಸಕರ ಆಪ್ತ ರತ್ನಬಾಬು, ಸೋದರ ಸಂಬಂಧಿ ಅನಿಲ್ ಮನೆ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ: ಹೇಮಂತ್‌ ಸೊರೆನ್‌ ಮನೆಯಲ್ಲಿ ಪತ್ತೆಯಾದ ಬಿಎಂಡಬ್ಲ್ಯು ಕಾರು ಕಾಂಗ್ರೆಸ್ ಸಂಸದರದ್ದು: ಇಡಿ

ಬೆಂಗಳೂರಿನಿಂದ ಏಳು ವಾಹನಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಗಳೊಂದಿಗೆ ಆಗಮಿಸಿ ದಾಳಿ ಮಾಡಲಾಗಿತ್ತು. ಶಾಸಕ ಕಚೇರಿಯಲ್ಲಿ ನಿಲ್ಲಿಸಿರುವ ಸ್ಕಾರ್ಫಿಯೋ ವಾಹನದಲ್ಲಿನ ವಸ್ತುಗಳನ್ನು ಪರಿಶೀಲಿಸಲಾಗಿತ್ತು. ದಾಳಿಯ ಸಂದರ್ಭದಲ್ಲಿ‌ ಶಾಸಕರು ಬಳ್ಳಾರಿ ನಗರದಲ್ಲಿಯೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಕುಟುಂಬಕ್ಕೆ ಸಂಬಂಧಿಸಿದಂತೆ ಗ್ರಾನೈಟ್ ವ್ಯವಹಾರ ಇದೆ. ಒಂದು ವರ್ಷದ ಹಿಂದೆ ಶಾಸಕರ ತಂದೆ ಸೂರ್ಯನಾರಾಯಣ ರೆಡ್ಡಿ ಅವರ ಕಚೇರಿಯ ಮೇಲೆ ಆದಾಯ ತೆರಿಗೆ (ಐಟಿ)‌ ಅಧಿಕಾರಿಗಳು‌ ದಾಳಿ ಮಾಡಿದ್ದರು. ನಂತರದಲ್ಲಿ ಈಗ ಇಡಿ ದಾಳಿ‌ ನಡೆಸಿದೆ.

ಶಾಸಕರ ಚಿಕ್ಕಪ್ಪ ನಾರಾ ಪ್ರತಾಪ ರೆಡ್ಡಿ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಅಲ್ಲೂ ಪರಿಶೀಲನೆ ನಡೆಸಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಗಾವರಾಳ ಗ್ರಾಮದಲ್ಲಿ ಬಳ್ಳಾರಿ ಶಾಸಕ ಭರತ್ ರೆಡ್ಡಿ ಅವರಿಗೆ ಸೇರಿದ ಗ್ರಾನೈಟ್ ಕ್ವಾರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಗಾವರಾಳ ಗ್ರಾಮದಲ್ಲಿರುವ ಎಸ್​ಆರ್​ಇ ಗ್ರಾನೈಟ್ ಕ್ವಾರಿಗಳು ಒಟ್ಟು ಮೂರು ಕ್ವಾರಿಗಳ ಮೇಲೆ ದಾಳಿ ನಡಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು.

ದಾಳಿಯ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು ಶಾಸಕರ ಕಚೇರಿಯ ಮುಂದೆ ಧಾವಿಸಿ, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ದಾಳಿಯ ಹಿಂದೆ ಕೇಂದ್ರದ ಕೈವಾಡ ಇದೆ, ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿಯಾಗುತ್ತದೆ. ಯಾಕೆ ಬಿಜೆಪಿ ನಾಯಕರು ಯಾವುದೇ ಬಿಸಿನೆಸ್ ಮಾಡಲ್ವಾ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ