AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಚಿಲ್ಲಿ ದರ ದಿಢೀರ್ ಕುಸಿತ; ಸಂಕಷ್ಟಕ್ಕೆ ಸಿಲುಕಿದ ಮೆಣಸಿನಕಾಯಿ ಬೆಳೆದ ರೈತರು

ಕಳೆದ ಕೆಲ ದಿನಗಳ ಹಿಂದೆ ಅಷ್ಟೇ ಮೆಣಸಿನಕಾಯಿ ದರ ಪ್ರತಿ ಕೆಜಿಗೆ 20 ರೂಪಾಯಿ ಇತ್ತು. ಆದರೆ ನಿನ್ನೆಯಿಂದ ಹಸಿ ಮೆಣಸಿನಕಾಯಿ ದರ 5 ರೂಪಾಯಿಗೆ ಕುಸಿದಿದೆ.

ಬಳ್ಳಾರಿ: ಚಿಲ್ಲಿ ದರ ದಿಢೀರ್ ಕುಸಿತ; ಸಂಕಷ್ಟಕ್ಕೆ ಸಿಲುಕಿದ ಮೆಣಸಿನಕಾಯಿ ಬೆಳೆದ ರೈತರು
ಚಿಲ್ಲಿ ದರ ದಿಢೀರ್ ಕುಸಿತ
TV9 Web
| Edited By: |

Updated on: Aug 29, 2021 | 2:35 PM

Share

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷ ಮೆಣಸಿನಕಾಯಿ ಬೀಜಕ್ಕಾಗಿ ರೈತರು ಪರದಾಟ ನಡೆಸಿದ್ದರು. ಮೆಣಸಿನಕಾಯಿ ಬೀಜಕ್ಕೆ ಕೃತಕ ಅಭಾವ ಸೃಷ್ಟಿ ಆಗಿದ್ದರಿಂದ ದುಪ್ಪಟ್ಟು ದರಕ್ಕೆ ರೈತರು ಮೆಣಸಿನಕಾಯಿ ಬೀಜ ಖರೀದಿ ಮಾಡಬೇಕಾಯಿತು. ಬೀಜಕ್ಕಾಗಿ ನಿತ್ಯ ತೋಟಗಾರಿಕೆ ಇಲಾಖೆ ಕಚೇರಿ ಕಾಯಬೇಕಾದ ಪರಿಸ್ಥಿತಿ ಕೂಡ ನಿರ್ಮಾಣವಾಗಿತ್ತು. ಇದೆಲ್ಲವನ್ನು ಸಹಿಸಿದ ರೈತರು ಫಸಲು ಉತ್ತಮವಾಗಿ ಬಂದು ಲಾಭ ಗಳಿಸಬಹುದು ಇದರಿಂದ ನಮ್ಮ ಕಷ್ಟ ದೂರವಾಗುತ್ತದೆ ಎಂದು ತಿಳಿದಿದ್ದರು. ಆದರೆ ಮೆಣಸಿನಕಾಯಿ ರೈತರ ಕಣ್ಣಲ್ಲಿ ನೀರು ತರಿಸಿದೆ. ಇದಕ್ಕೆ ಕಾರಣ ಹಸಿ ಮೆಣಸಿನಕಾಯಿ ದರ ದಿಢೀರ್ ಕುಸಿತ ಕಂಡಿದೆ.

ಬಳ್ಳಾರಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಹಸಿ ಮೆಣಸಿನಕಾಯಿ ದರ ದಿಢೀರ್ ಕುಸಿತ ಕಂಡಿರುವುದು ಮೆಣಸಿನಕಾಯಿ ಬೆಳೆದ ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದಷ್ಟೇ ಮೆಣಸಿನಕಾಯಿ ದರ ಪ್ರತಿ ಕೆಜಿಗೆ 20 ರೂಪಾಯಿ ಇತ್ತು. ಆದರೆ ನಿನ್ನೆಯಿಂದ ಹಸಿ ಮೆಣಸಿನಕಾಯಿ ದರ 5 ರೂಪಾಯಿಗೆ ಕುಸಿದಿದೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಪ್ರತಿ ಕೆಜಿ ಮೆಣಸಿನಕಾಯಿಯನ್ನು 5 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಈ ಅವಧಿಯಲ್ಲಿ ಮೆಣಸಿನಕಾಯಿಗೆ 30-40 ರೂ. ಬೆಲೆ ಇತ್ತು. ಕಾರಣ ಫಸಲು ಆಷ್ಟೊಂದು ಇರಲಿಲ್ಲ. ಇದೇ ಕಾರಣಕ್ಕೆ ಈ ಬಾರಿ ಲಾಭ ಬರುತ್ತದೆಂದು ರೈತರು ಹೆಚ್ಚಿನ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಳೆದಿದ್ದು, ನಷ್ಟ ಎದುರಿಸುವಂತಾಗಿದೆ.

ವ್ಯಾಪಾರಿಗಳೇ 5 ರೂ. ಗೆ ಕೆಜಿ ಮೆಣಸಿನಕಾಯಿ ಮಾರಾಟ ಮಾಡುವಾಗ ಇನ್ನೂ ಎಪಿಎಂಸಿಗೆ ಮೆಣಸಿನಕಾಯಿ ಮಾರಾಟ ಮಾಡಲು ಬಂದ ರೈತರಿಗೆ ಪ್ರತಿ ಕೆಜಿಗೆ ಸಿಗುವುದು 2-3 ರೂ. ಮಾತ್ರ. ಇದರಿಂದಾಗಿ ತುಂಬಾ ನಷ್ಟ ಆಗುತ್ತಿದೆ ಎಂದು ಮೆಣಸಿನಕಾಯಿ ಬೆಳೆದ ರೈತ ಖಾಜಾ ಹುಸೇನ್ ಹೇಳಿದ್ದಾರೆ.

ಮಾರುಕಟ್ಟೆಯಲ್ಲಿ ಈ ದರಕ್ಕೆ ಮಾರಾಟವಾದರೆ ಮೆಣಸಿನಕಾಯಿಯನ್ನು ಕಿತ್ತ ಕೂಲಿ ಸಹ ರೈತನಿಗೆ ಸಿಗಲ್ಲ. ಕೂಲಿಕಾರರಿಗೆ 300 ರೂ. ನೀಡಬೇಕಿದೆ. ಕೂಲಿ ಕೊಟ್ಟು, ಚೀಲದಲ್ಲಿ ತುಂಬಿ, ಮಾರುಕಟ್ಟೆಗೆ ತಂದು, ಕಮೀಷನ್ ನೀಡಿದರೆ ರೈತ ಬರೀ ಕೈಯಿಂದ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಪ್ರತಿ ಎಕರೆ ಮೆಣಸಿನಕಾಯಿ ಬೆಳೆಯಲು ರೈತರು ಒಂದು ಲಕ್ಷ ಖರ್ಚು ಮಾಡಿದ್ದಾರೆ. ಆದರೆ ದರ ದಿಢೀರ್ ಕುಸಿತವಾಗಿದ್ದರಿಂದ ಹಾಕಿದ ಬಂಡವಾಳ ಕೂಡ ರೈತರಿಗೆ ಸಿಗದಂತಾಗಿದೆ. ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚು ಮೆಣಸಿನಕಾಯಿ ಬೆಳೆ ಬೆಳೆಯಲಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಹಸಿ ಮೆಣಸಿನಕಾಯಿ ಬಂದಿರುವ ಕಾರಣ ದರ ಕೂಡ ದಿಢೀರ್ ಅಂತಾ ಕುಸಿತವಾಗಿದೆ. ಇದರಿಂದಾಗಿ ತುಂಬಾ ನಷ್ಟವಾಗುತ್ತಿದೆ ಎಂದು ಮೆಣಸಿನಕಾಯಿ ವ್ಯಾಪಾರಸ್ಥರಾದ ರಾಮಾಂಜನೇಯ ತಿಳಿಸಿದ್ದಾರೆ.

ಈ ವರ್ಷ ಜಿಲ್ಲೆಯಲ್ಲಿ ಹತ್ತಿ ಬದಲಾಗಿ ಹೆಚ್ಚಿನ ಪ್ರಮಾಣದಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯಲಾಗಿದೆ. ಜತೆಗೆ ನೆರೆಯ ಆಂಧ್ರದ ಗಡಿಭಾಗಗಳಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಹಸಿ ಮೆಣಸಿನಕಾಯಿ ಬಳ್ಳಾರಿ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಬರುತ್ತಿದೆ. ಈ ಕಾರಣದಿಂದಾಗಿ ದರದಲ್ಲಿ ದಿಢೀರ್ ಕುಸಿತವಾಗಿ ಮೆಣಸಿನಕಾಯಿ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ವರದಿ: ಬಸವರಾಜ ಹರನಹಳ್ಳಿ

ಇದನ್ನೂ ಓದಿ: ಯಾದಗಿರಿ ರೈತರಲ್ಲಿ ಹೆಚ್ಚಿದ ಆತಂಕ; ಗೋಡೌನ್​ನಲ್ಲಿ ಇಟ್ಟ ಸಾವಿರಾರು ಕ್ವಿಂಟಲ್ ಬ್ಯಾಡಗಿ ಮೆಣಸಿನಕಾಯಿ ಹಾಳು

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ