AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ballari News: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ ಹಿನ್ನಲೆಯಲ್ಲಿ ಜನರೇಟರ್ ಆನ್ ಮಾಡಿದ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಜನರೇಟರ್ ರೂಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಮತ್ತೊಂದು ಕೊಠಡಿಯಲ್ಲೂ ಬೆಂಕಿ ಕಾಣಿಸಿಕೊಂಡಿದೆ.

Ballari News: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ
ಶಾಲೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ವಸ್ತುಗಳು ಭಸ್ಮ
ಆಯೇಷಾ ಬಾನು
|

Updated on: Jun 06, 2023 | 2:11 PM

Share

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ.

ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ ಹಿನ್ನಲೆಯಲ್ಲಿ ಜನರೇಟರ್ ಆನ್ ಮಾಡಿದ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಜನರೇಟರ್ ರೂಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಮತ್ತೊಂದು ಕೊಠಡಿಯಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಶಾಲಾ ಮಕ್ಕಳು ಆತಂಕಗೊಂಡಿದ್ದು ತಕ್ಷಣವೇ ಶಾಲಾ ಸಿಬ್ಬಂದಿ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನ ರಕ್ಷಣೆ ಮಾಡಿದ್ದಾರೆ. ಶಾಲೆಯ ಇನ್ನೊಂದು ಬಾಗಿಲಿನಿಂದ ಮಕ್ಕಳನ್ನ ಹೊರಗೆ ಕರೆತಂದಿದ್ದಾರೆ. ಶಾಲೆಯ ಜನರೇಟರ್ ರೂಂ ಹಾಗೂ ಒಂದು ಕೊಠಡಿಯಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಿಂದ ಭಾರಿ ಅವಘಡ ತಪ್ಪಿದೆ.

ಇದನ್ನೂ ಓದಿ: Video: ಹೈದರಾಬಾದ್​ನ ಸೆಕೆಂಡ್ ಹ್ಯಾಂಡ್ ಕಾರು ಶೋರೂಂನಲ್ಲಿ ಅಗ್ನಿ ಅವಘಡ, ಹಲವು ಕಾರುಗಳು ಬೆಂಕಿಗಾಹುತಿ

ಶಾಲೆಯ ಪಕ್ಕದಲ್ಲೆ ವಿಎಎಂ ಫುಡ್ ಬಜಾರಿನಲ್ಲಿ ಸುಮಾರು ಎರಡು ಕೋಟಿ ಅಂದಾಜು ಮೌಲ್ಯದ ದಾಸ್ತಾನು ಇತ್ತು. ಅಗ್ನಿಶಾಮಕ ಸಿಬ್ಬಂದಿ ಬರುವುದು ಸ್ವಲ್ಪ ತಡವಾಗಿದ್ದರೂ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಸಿರಗುಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಬೆಂಕಿ ನಂದಿಸಿದ್ದು ಯಾವುದೇ ಗಾಯ ಅಥವಾ ಅಹಿತಕರ ಘಟನೆ ಬಗ್ಗೆ ತಿಳಿದುಬಂದಿಲ್ಲ.

ಒಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ