AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!

ಹದ್ದು ಜಾತಿಯ (Eagle Fish) ಮತ್ತು 20 ಕೆಜಿ ಭಾರದ ಮೀನು ಗಾಳಕ್ಕೆ ಬಿದ್ದಿದೆ. ಗಾಳಕ್ಕೆ ಬಿದ್ದ ಮೀನನ್ನ ಮಾರುಕಟ್ಟೆಗೆ ತರುತ್ತಿದ್ದಂತೆ 300 ರೂಪಾಯಿಗೆ ಕೆಜಿಯಂತೆ ಮಾರಾಟವಾಗಿದೆ.

ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!
ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!
TV9 Web
| Edited By: |

Updated on:Feb 23, 2022 | 12:02 PM

Share

ವಿಜಯನಗರ: ಕಂಪ್ಲಿ ತಾಲೂಕಿನ ತುಂಗಭದ್ರಾ ನದಿಯಲ್ಲಿ (Tungabhadra river) ಭಾರಿ ಗಾತ್ರದ ಮೀನೊಂದು ಮೀನುಗಾರರ ಗಾಳದಲ್ಲಿ ಸೆರೆಯಾಗಿದೆ. ಮೀನುಗಾರರ ಗಾಳಕ್ಕೆ ಬಿದ್ದ ಮೀನನ್ನ ಗ್ರಾಹಕರು ಪೈಪೋಟಿಯಲ್ಲಿ ಖರೀದಿ ಮಾಡಿದ ಪರಿಣಾಮ ಮೀನು ಮಾರುಕಟ್ಟೆಗೆ ತರುತ್ತಿದ್ದಂತೆ ಮಾರಾಟವಾಗಿದೆ. ಯುವಕ ಶಂಭು ಎಂಬುವವರು ತುಂಗಭದ್ರಾ ನದಿಯ ಜಾಕ್ ವೆಲ್ ಮೇಲ್ಬಾಗದಲ್ಲಿ ಗಾಳ ಹಾಕಿ ಮೀನು ಸೆರೆ ಹಿಡಿಯುತ್ತಿದ್ದರು. ಈ ವೇಳೆ ಹದ್ದು ಜಾತಿಯ (Eagle Fish) ಮತ್ತು 20 ಕೆಜಿ ಭಾರದ ಮೀನು ಗಾಳಕ್ಕೆ ಬಿದ್ದಿದೆ. ಗಾಳಕ್ಕೆ ಬಿದ್ದ ಮೀನನ್ನ ಮಾರುಕಟ್ಟೆಗೆ ತರುತ್ತಿದ್ದಂತೆ 300 ರೂಪಾಯಿಗೆ ಕೆಜಿಯಂತೆ ಮಾರಾಟವಾಗಿರುವುದು ವಿಶೇಷವಾಗಿದೆ (Vijayanagara).

ಹೊಸಪೇಟೆಯ ಸಕ್ಕರೆ ಕಾರ್ಖಾನೆಯ ಮೊಲಾಸಿಸ್ ತ್ಯಾಜ್ಯ ನದಿಗೆ ಸೇರುವ ಮುನ್ನಾ 50-60 ಕೆಜಿ ತೂಕದ ಮೀನು ಬೇಟೆಯಾಡುತ್ತಿದ್ದೆವು. ನಂತರ ನದಿಗೆ ತ್ಯಾಜ್ಯ ಸೇರಿ ನೀರು ಕಲುಷಿತಗೊಂಡ ನಂತರ 15 ಕೆಜಿ ತೂಕದ ಮೀನುಗಳು ದೊರಕುತ್ತಿದ್ದವು. ಇದೀಗ 20 ಕೆಜಿ ತೂಕದ ಸುಮಾರು ಆರೇಳು ವರ್ಷದ ಮೀನು ಗಾಳಕ್ಕೆ ಬಿದ್ದಿರುವುದು ವಿಶೇಷ ಎಂದು ಕಂಪ್ಲಿಯ ಕೋಟೆ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಎಸ್‌. ಆರ್. ಚಿನ್ನರಾಜು ತಿಳಿಸಿದ್ದಾರೆ.

ಮಂಡ್ಯ ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ IT ದಾಳಿ ಮಂಡ್ಯ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ, ಅಮ್ಜಾ, ಶಹಬಾಜ್, ಶಿರೋಜ್ ನಿವಾಸ, ಕಚೇರಿಗಳಲ್ಲಿ ಐಟಿಯಿಂದ ಶೋಧ ನಡೆಸುತ್ತಿದ್ದಾರೆ. ಉದ್ಯಮ ನಡೆಸುತ್ತಿರುವ ಸಹೋದರರು ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಹಲವು ಆಸ್ತಿ ಹೊಂದಿದ್ದಾರೆ. ನಾಗಮಂಗಲ, ಮೈಸೂರು, ಮಂಡ್ಯ, ಬೆಂಗಳೂರಿನ ಹಲವೆಡೆ ಆಸ್ತಿ ಹೊಂದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳು, 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಆಸ್ತಿ ವಿವರಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳು ರಾಜ್ಯದ ಪ್ರತಿಷ್ಠೆಗೆ ಕೊಳ್ಳಿ ಇಟ್ಟಿವೆ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್

ಇದನ್ನೂ ಓದಿ: CCB Transfers: ಸಿಸಿಬಿ ಅಂಗಳದಲ್ಲಿ ಬೇರು ಬಿಟ್ಟಿದ್ದ ಸಿಬ್ಬಂದಿಗೆ ಸಾಮೂಹಿಕ ಟ್ರಾನ್ಸ್​​ಫರ್​​ ಶಾಕ್!

Published On - 11:00 am, Wed, 23 February 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!