Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!

ಹದ್ದು ಜಾತಿಯ (Eagle Fish) ಮತ್ತು 20 ಕೆಜಿ ಭಾರದ ಮೀನು ಗಾಳಕ್ಕೆ ಬಿದ್ದಿದೆ. ಗಾಳಕ್ಕೆ ಬಿದ್ದ ಮೀನನ್ನ ಮಾರುಕಟ್ಟೆಗೆ ತರುತ್ತಿದ್ದಂತೆ 300 ರೂಪಾಯಿಗೆ ಕೆಜಿಯಂತೆ ಮಾರಾಟವಾಗಿದೆ.

ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!
ಮೀನುಗಾರರ ಗಾಳಕ್ಕೆ ಬಿದ್ದ 20 ಕೆಜಿ ತೂಕದ ಹದ್ದು ಮೀನು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 23, 2022 | 12:02 PM

ವಿಜಯನಗರ: ಕಂಪ್ಲಿ ತಾಲೂಕಿನ ತುಂಗಭದ್ರಾ ನದಿಯಲ್ಲಿ (Tungabhadra river) ಭಾರಿ ಗಾತ್ರದ ಮೀನೊಂದು ಮೀನುಗಾರರ ಗಾಳದಲ್ಲಿ ಸೆರೆಯಾಗಿದೆ. ಮೀನುಗಾರರ ಗಾಳಕ್ಕೆ ಬಿದ್ದ ಮೀನನ್ನ ಗ್ರಾಹಕರು ಪೈಪೋಟಿಯಲ್ಲಿ ಖರೀದಿ ಮಾಡಿದ ಪರಿಣಾಮ ಮೀನು ಮಾರುಕಟ್ಟೆಗೆ ತರುತ್ತಿದ್ದಂತೆ ಮಾರಾಟವಾಗಿದೆ. ಯುವಕ ಶಂಭು ಎಂಬುವವರು ತುಂಗಭದ್ರಾ ನದಿಯ ಜಾಕ್ ವೆಲ್ ಮೇಲ್ಬಾಗದಲ್ಲಿ ಗಾಳ ಹಾಕಿ ಮೀನು ಸೆರೆ ಹಿಡಿಯುತ್ತಿದ್ದರು. ಈ ವೇಳೆ ಹದ್ದು ಜಾತಿಯ (Eagle Fish) ಮತ್ತು 20 ಕೆಜಿ ಭಾರದ ಮೀನು ಗಾಳಕ್ಕೆ ಬಿದ್ದಿದೆ. ಗಾಳಕ್ಕೆ ಬಿದ್ದ ಮೀನನ್ನ ಮಾರುಕಟ್ಟೆಗೆ ತರುತ್ತಿದ್ದಂತೆ 300 ರೂಪಾಯಿಗೆ ಕೆಜಿಯಂತೆ ಮಾರಾಟವಾಗಿರುವುದು ವಿಶೇಷವಾಗಿದೆ (Vijayanagara).

ಹೊಸಪೇಟೆಯ ಸಕ್ಕರೆ ಕಾರ್ಖಾನೆಯ ಮೊಲಾಸಿಸ್ ತ್ಯಾಜ್ಯ ನದಿಗೆ ಸೇರುವ ಮುನ್ನಾ 50-60 ಕೆಜಿ ತೂಕದ ಮೀನು ಬೇಟೆಯಾಡುತ್ತಿದ್ದೆವು. ನಂತರ ನದಿಗೆ ತ್ಯಾಜ್ಯ ಸೇರಿ ನೀರು ಕಲುಷಿತಗೊಂಡ ನಂತರ 15 ಕೆಜಿ ತೂಕದ ಮೀನುಗಳು ದೊರಕುತ್ತಿದ್ದವು. ಇದೀಗ 20 ಕೆಜಿ ತೂಕದ ಸುಮಾರು ಆರೇಳು ವರ್ಷದ ಮೀನು ಗಾಳಕ್ಕೆ ಬಿದ್ದಿರುವುದು ವಿಶೇಷ ಎಂದು ಕಂಪ್ಲಿಯ ಕೋಟೆ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಎಸ್‌. ಆರ್. ಚಿನ್ನರಾಜು ತಿಳಿಸಿದ್ದಾರೆ.

ಮಂಡ್ಯ ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ IT ದಾಳಿ ಮಂಡ್ಯ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ, ಅಮ್ಜಾ, ಶಹಬಾಜ್, ಶಿರೋಜ್ ನಿವಾಸ, ಕಚೇರಿಗಳಲ್ಲಿ ಐಟಿಯಿಂದ ಶೋಧ ನಡೆಸುತ್ತಿದ್ದಾರೆ. ಉದ್ಯಮ ನಡೆಸುತ್ತಿರುವ ಸಹೋದರರು ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಹಲವು ಆಸ್ತಿ ಹೊಂದಿದ್ದಾರೆ. ನಾಗಮಂಗಲ, ಮೈಸೂರು, ಮಂಡ್ಯ, ಬೆಂಗಳೂರಿನ ಹಲವೆಡೆ ಆಸ್ತಿ ಹೊಂದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳು, 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಆಸ್ತಿ ವಿವರಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳು ರಾಜ್ಯದ ಪ್ರತಿಷ್ಠೆಗೆ ಕೊಳ್ಳಿ ಇಟ್ಟಿವೆ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್

ಇದನ್ನೂ ಓದಿ: CCB Transfers: ಸಿಸಿಬಿ ಅಂಗಳದಲ್ಲಿ ಬೇರು ಬಿಟ್ಟಿದ್ದ ಸಿಬ್ಬಂದಿಗೆ ಸಾಮೂಹಿಕ ಟ್ರಾನ್ಸ್​​ಫರ್​​ ಶಾಕ್!

Published On - 11:00 am, Wed, 23 February 22

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ