AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಕಾಂಗ್ರೆಸ್ ಅಂತಲ್ಲ, ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ: ಬಳ್ಳಾರಿಯಲ್ಲಿ ಗುಡುಗಿದ ಜನಾರ್ದನ ರೆಡ್ಡಿ

ನಾವು ಯಾವತ್ತೂ ಜನರ ಜೇಬಿಗೆ ಕತ್ತರಿ ಹಾಕಿಲ್ಲ. ಯಾರಿಗೂ ನಾವು ಮೋಸ ಮಾಡಿಲ್ಲ. ಅದೃಷ್ಟದಿಂದ ಮೇಲೆ ಬಂದವರು. ಹೆಲಿಕಾಪ್ಟರ್ ತೆಗೆದುಕೊಂಡಿದ್ದಕ್ಕೆ ಕೆಲವರು ಮಾತನಾಡಿದರು. -ಜನಾರ್ದನ ರೆಡ್ಡಿ

ಬಿಜೆಪಿ-ಕಾಂಗ್ರೆಸ್ ಅಂತಲ್ಲ, ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ: ಬಳ್ಳಾರಿಯಲ್ಲಿ ಗುಡುಗಿದ ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
TV9 Web
| Edited By: |

Updated on:Nov 05, 2022 | 11:24 AM

Share

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಮತ್ತೆ ಗುಡುಗಿದ್ದಾರೆ. ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ. ರಾಜಕೀಯಕ್ಕೆ ಬಿಜೆಪಿ, ಕಾಂಗ್ರೆಸ್ ಯಾವ್ದೋ ಗೊತ್ತಿಲ್ಲ ಎಂದು ಬಳ್ಳಾರಿಯಲ್ಲಿ ನಿನ್ನೆ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಹೇಳಿದರು.

ಬಳ್ಳಾರಿಯಲ್ಲಿ ನವೆಂಬರ್ 4ರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಾವು ಯಾವ ಪಕ್ಷದಿಂದಾದರೂ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುಲಿ ಭೇಟೆಗೆ ನಿಂತ್ರೆ ಭೇಟೆ ಆಡೇ ಆಡುತ್ತೇ. ರಸ್ತೆಯಲಿ ಓರ್ವ ಹುಡುಗ ಹುಲಿ ಫೋಟೋ ತೋರಿಸಿ ನನ್ನನ್ನು ಹುಲಿ ಅಂತಾ ಕರೆದ. ಹುಲಿಗೆ ಹಸಿವಾದಾಗ ಭೇಟೆಗೆ ಬರುತ್ತೇ. ಭೇಟೆ ಹೊಡೆದೆ ಹೊಡಿಯುತ್ತೇ. ರಕ್ತದಲ್ಲಿ ಇರೋದ್ನ ಯಾರು ತಗೆಯಲಿಕ್ಕೆ ಸಾಧ್ಯ ಇಲ್ಲ ಕೆಲವೊಬ್ಬರು ಮತ್ತೆ ನನ್ನ ಬಳ್ಳಾರಿಯಿಂದ ಹೊರ ಹಾಕುತ್ತಿದ್ದಾರೆ. 2-3 ತಿಂಗಳಿನಲ್ಲಿ ಮತ್ತೆ ನಾನು ಬಳ್ಳಾರಿಗೆ ಬರುತ್ತೇನೆ. ನನ್ನ ತಂದೆ ಪೊಲೀಸ್ ಪೇದೆ ಆಗಿ ಕೆಲಸ ಮಾಡಿರಬಹುದು. ಆದ್ರೆ ನನ್ನ ತಾತಂದಿರು ರಾಜರಂತೆ ಬದುಕಿದರು. ಅವರ ರಕ್ತ ನನ್ನಲಿದೆ ಅದ್ನ ಬದಲಾಯಿಸಲಾಗದು. 12 ವರ್ಷ ನಾನು ಸುಮ್ನೆ ಇದ್ದೀನಿ ಅಂದ್ರೆ ನನ್ನ ಕೈಯಲ್ಲಿ ಏನೂ ಆಗೋದಿಲ್ಲ ಅಂತಾ ಅಲ್ಲ. ಒಂದೂವರೆ ವರ್ಷದಿಂದ ಬಳ್ಳಾರಿ ಮನೆಯಿಂದ ಹೊರ ಬಂದಿಲ್ಲ. ಯಾಕಂದ್ರೆ ಆಗುವ ಕೆಲಸ ಆಗುವುದಿಲ್ಲ ಎಂದು ಸುಮ್ಮನಿದ್ದೆ. ನಮ್ಮ ಕುಟುಂಬ ಬಳ್ಳಾರಿ ಅಭಿವೃದ್ಧಿಗೆ ಬದ್ದವಾಗಿದೆ. ಕಾಂಗ್ರೆಸ್ ಬಿಜೆಪಿ ಅಂತಾ ನಾನು ಹೇಳೋದಿಲ್ಲ. ನಮ್ಮ ಕುಟುಂಬದ ಮೇಲೆ ಬಳ್ಳಾರಿ ಜನರ ಆಶೀರ್ವಾದ ಇರಲಿ ಎಂದರು.

ಇದನ್ನೂ ಓದಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮುಜುಗರ ತರುವ ಕೆಲಸ ಯಾರು ಮಾಡಲ್ಲ: ಶ್ರೀರಾಮುಲು

ನಾವು ಯಾವತ್ತೂ ಜನರ ಜೇಬಿಗೆ ಕತ್ತರಿ ಹಾಕಿಲ್ಲ. ಯಾರಿಗೂ ನಾವು ಮೋಸ ಮಾಡಿಲ್ಲ. ಅದೃಷ್ಟದಿಂದ ಮೇಲೆ ಬಂದವರು. ಹೆಲಿಕಾಪ್ಟರ್ ತೆಗೆದುಕೊಂಡಿದ್ದಕ್ಕೆ ಕೆಲವರು ಮಾತನಾಡಿದರು. ಆದ್ರೇ ನಾನು ಸಚಿವನಾಗಿದ್ದಾಗ ರಸ್ತೆ ಮೂಲಕ ಬೆಂಗಳೂರಿಗೆ ಹೋದ್ರೆ ಏಳೆಂಟು ಗಂಟೆಯಾಗುತ್ತಿತ್ತು. ನನಗೆ ಬಳ್ಳಾರಿಯ ಜನರಿಗೆ ಸಮಯ ಕೊಡೋಕೆ ಆಗ್ತಾ ಇರಲಿಲ್ಲ. ಹೀಗಾಗಿ ಹೆಲಿಕಾಪ್ಟರ್ ತೆಗೆದುಕೊಂಡಿದ್ದೆ, ಎರಡು ಗಂಟೆಯಲ್ಲಿ ಬೆಂಗಳೂರಿಗೆ ಹೋಗಿ ಬಂದು ಬಳ್ಳಾರಿ ಜನರ ಜೊತೆ ಸಮಯ ಕಳೆಯುತ್ತಿದ್ದೆ ಎಂದು ಜನಾರ್ದನ‌ ರೆಡ್ಡಿ ಹೇಳಿದರು.

Published On - 11:22 am, Sat, 5 November 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ