AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್

ದೀಪಾವಳಿ ಹಿನ್ನೆಲೆ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು ದಾಳಿ ಮಾಡಿದ್ದು, ಪೇದೆಗಳು ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 26, 2022 | 8:34 PM

ವಿಜಯನಗರ: ಈ ದೀಪಾವಳಿ ಹಬ್ಬ ಪೊಲೀಸ್​ ಪೇದಗಳ ಪಾಲಿಗೆ ಮರೆಯಲಾರದಂತ ಹಬ್ಬವಾಗಿದೆ. ಎಲ್ಲಡೆ ಬೆಳಕು ಆವರಿಸಿದರೆ ಇವರ ಜೀವನದಲ್ಲಿ ಕತ್ತಲು ಆವರಿಸಿತು. ದೀಪಾವಳಿ (Deepavali) ಹಿನ್ನೆಲೆ ಇಸ್ಪೀಟ್  (Gambling) ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು (Police Constable) ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಕೆಲ ಜೂಜುಕೋರರು ಓಡಿ ಹೋಗಿದ್ದಾರೆ. ಸಿಕ್ಕಿ ಬಿದ್ದ ಮೂವರು ಜೂಜುಕೋರರ ಬಳಿ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಬಳಿಕ ವೆಂಕಟೇಶ್ ಎಂಬವರು ಸ್ಥಳಿಯರು ಪ್ರಕರಣದ ಕುರಿತು ಮಾಹಿತಿ ಪಡೆಯಲು ಪೊಲೀಸ್​ ಠಾಣೆಗೆ ಬಂದಿದ್ದಾರೆ. ಈ ವೇಳೆ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ನಂತರ ವೆಂಕಟೇಶ್​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೊಲೀಸ್​ ಪೇದೆಗಳಾದ ಮಹೇಶ. ಅಭಿಷೇಕ್. ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯ ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಎಸ್​.ಪಿ ಡಾ. ಕೆ ಅರುಣ್ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:33 pm, Wed, 26 October 22

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್