AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್

ದೀಪಾವಳಿ ಹಿನ್ನೆಲೆ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು ದಾಳಿ ಮಾಡಿದ್ದು, ಪೇದೆಗಳು ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Oct 26, 2022 | 8:34 PM

Share

ವಿಜಯನಗರ: ಈ ದೀಪಾವಳಿ ಹಬ್ಬ ಪೊಲೀಸ್​ ಪೇದಗಳ ಪಾಲಿಗೆ ಮರೆಯಲಾರದಂತ ಹಬ್ಬವಾಗಿದೆ. ಎಲ್ಲಡೆ ಬೆಳಕು ಆವರಿಸಿದರೆ ಇವರ ಜೀವನದಲ್ಲಿ ಕತ್ತಲು ಆವರಿಸಿತು. ದೀಪಾವಳಿ (Deepavali) ಹಿನ್ನೆಲೆ ಇಸ್ಪೀಟ್  (Gambling) ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು (Police Constable) ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಕೆಲ ಜೂಜುಕೋರರು ಓಡಿ ಹೋಗಿದ್ದಾರೆ. ಸಿಕ್ಕಿ ಬಿದ್ದ ಮೂವರು ಜೂಜುಕೋರರ ಬಳಿ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಬಳಿಕ ವೆಂಕಟೇಶ್ ಎಂಬವರು ಸ್ಥಳಿಯರು ಪ್ರಕರಣದ ಕುರಿತು ಮಾಹಿತಿ ಪಡೆಯಲು ಪೊಲೀಸ್​ ಠಾಣೆಗೆ ಬಂದಿದ್ದಾರೆ. ಈ ವೇಳೆ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ನಂತರ ವೆಂಕಟೇಶ್​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೊಲೀಸ್​ ಪೇದೆಗಳಾದ ಮಹೇಶ. ಅಭಿಷೇಕ್. ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯ ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಎಸ್​.ಪಿ ಡಾ. ಕೆ ಅರುಣ್ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:33 pm, Wed, 26 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ