AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Geetha Shivarajkumar: ಹೊಸಪೇಟೆ – ಅಪ್ಪು ಕನಸಿನ ಶಕ್ತಿಧಾಮದ ಮೂಲಕ ಮತ್ತೊಂದು ಶಾಲೆ ದತ್ತು, ಇಂಗಳಗಿ ಶಾಲೆ ದತ್ತು ಪಡೆದ ಗೀತಾ ಶಿವರಾಜಕುಮಾರ್

Ingalagi school Adoption: ಶಾಲೆಗೆ ಗೀತಾ ಶಿವರಾಜಕುಮಾರ್ ಭೇಟಿ ಮಾಡಿ ದತ್ತು ಪ್ರಕ್ರಿಯೆ ಬಗ್ಗೆ ಮಾತುಕತೆ ನಡೆಸಿ ಶಾಲೆ ದತ್ತು ತಗೆದುಕೊಳ್ಳುವುದಾಗಿ ಘೋಷಿಸಿದ್ದು, ಶ್ರೀಘ್ರದಲ್ಲೆ ಟ್ರಸ್ಟ್ ರಚಿಸಿ ಪದಾಧಿಕಾರಿಗಳನ್ನ ನೇಮಕ ಮಾಡಿ ಶಾಲೆಯ ಅಭಿವೃದ್ದಿ ಮಾಡುವುದಾಗಿ ಘೋಷಿಸಿದ್ದಾರೆ.

Geetha Shivarajkumar: ಹೊಸಪೇಟೆ - ಅಪ್ಪು ಕನಸಿನ ಶಕ್ತಿಧಾಮದ ಮೂಲಕ ಮತ್ತೊಂದು ಶಾಲೆ ದತ್ತು, ಇಂಗಳಗಿ ಶಾಲೆ ದತ್ತು ಪಡೆದ ಗೀತಾ ಶಿವರಾಜಕುಮಾರ್
ಅನುದಾನ ಇಲ್ಲದೇ ಸೊರಗಿದ ಶಾಲೆ ದತ್ತು ಪಡೆದ ದೊಡ್ಮನೆ ಕುಟುಂಬ!
Follow us
ಸಾಧು ಶ್ರೀನಾಥ್​
|

Updated on:May 17, 2023 | 1:33 PM

ದೊಡ್ಮನೆ ಕುಟುಂಬ ಯಾರಿಗೆ ಗೊತ್ತಿಲ್ಲ ಹೇಳಿ. ದೊಡ್ಮನೆ ಅಂದ್ರೆ ಡಾ. ರಾಜಕುಮಾರ್ ಕುಟುಂಬದ ಮನಸ್ಸು ಬಹು ದೊಡ್ಡದು. ಅಭಿಮಾನಿಗಳೇ ನಮ್ಮ ಮನೆ ದೇವರು ಅಂತಿದ್ದ ದೊಡ್ಮನೆ ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದು. ಬಡಮಕ್ಕಳು, ಅನಾಥರು, ಅಬಲೆಯರಿಗಾಗಿ ಆಶ್ರಯ ಶಿಕ್ಷಣ ಕೊಡಿಸಲೆಂದೇ ದೊಡ್ಮನೆ ಶಕ್ತಿಧಾಮ ಸ್ಥಾಪನೆ ಮಾಡಿದೆ. ಈ ಶಕ್ತಿಧಾಮದ ಮೂಲಕ ಇದೀಗ ದೊಡ್ಮನೆ ಕುಟುಂಬಸ್ಥರು ಮತ್ತೊಂದು ಬಡ ಶಾಲೆಯನ್ನ ದತ್ತು ಪಡೆಯುವ ಮೂಲಕ ಬಡಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಿದ್ದಾರೆ. ಮೈಸೂರಿನ ನಂತರ ಕಲ್ಯಾಣ ಕರ್ನಾಟಕದಲ್ಲಿ ಶಕ್ತಿಧಾಮ ಇದೀಗ ಮತ್ತೊಂದು ಶಾಲೆಯ ಜವಾಬ್ದಾರಿ ವಹಿಸಿಕೊಂಡಿದೆ. ಶಕ್ತಿಧಾಮ. ಹೆಸರಿನಲ್ಲೆ ಶಕ್ತಿಯಿದೆ. ದೊಡ್ಮನೆ ಕುಟುಂಬ ಸ್ಥಾಪನೆ ಮಾಡಿದ ಈ ಶಕ್ತಿಧಾಮದಲ್ಲಿ ಸಾವಿರಾರು ಮಕ್ಕಳು ಶಿಕ್ಷಣ ಆಶ್ರಯ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಸ್ಪಾಪನೆಯಾಗಿರುವ ಶಕ್ತಿಧಾಮದಲ್ಲಿ ಸಾವಿರಾರು ಅಬಲೆಯರು. ಅನಾಥ ಮಕ್ಕಳು. ಬಡ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಶಕ್ತಿಧಾಮ ಇದೀಗ ಮತ್ತೊಂದು ಬಡ ಶಾಲೆಯನ್ನ ದತ್ತು ಪಡೆಯುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕಾಗಿ ಮತ್ತಷ್ಟು ಶಕ್ತಿ ತುಂಬಲು ಮುಂದಾಗಿದೆ ನೋಡಿ..

ಅನುದಾನ ಇಲ್ಲದೇ ಸೊರಗಿದ ಶಾಲೆ ದತ್ತು ಪಡೆದ ದೊಡ್ಮನೆ ಕುಟುಂಬ! ದೊಡ್ಮನೆಯ ದೊಡ್ಡ ಮನಸ್ಸಿನಿಂದ ಬಡ ಮಕ್ಕಳ ಬಾಳಲ್ಲಿ ಬೆಳಕು!

ಇದು ಹೊಸಪೇಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿರುವ ಅನ್ನಪೂಣೇಶ್ವರಿ ವಿದ್ಯಾಪೀಠ. 2012ರಲ್ಲಿ ಸ್ಪಾಪನೆಯಾದ ಈ ಉಚಿತ ವಸತಿಯುತ ಪ್ರೌಢಶಾಲೆಯಲ್ಲಿ ನೂರಾರು ಬಡ ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. 8ರಿಂದ 10ನೇ ತರಗತಿಯವರೆಗೂ ಈ ಶಾಲೆಯಲ್ಲಿ ಸದ್ಯ 123 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಆದ್ರೆ ಅನುದಾನವಿಲ್ಲದೇ ಮಕ್ಕಳಿಗೆ ಉತ್ತಮ ಶಿಕ್ಷಣ ಆಶ್ರಯ ಸಿಗದೇ ಈ ಶಾಲೆ ಸೊರಗಿಹೋಗಿತ್ತು.

ಇನ್ನೇನೂ ಈ ಶಾಲೆಗೆ ಬೀಗ ಹಾಕಬೇಕು ಅನ್ನುವಷ್ಟರಲ್ಲಿ ಈ ಶಾಲೆಗೆ ದೊಡ್ಮನೆಯವರ ಆಶ್ರಯ ದೊರೆತಿದೆ. ಶೈಕ್ಷಣಿಕವಾಗಿ ಹಿಂದುಳಿದ ಶಾಲೆಯನ್ನ ದೊಡ್ಮನೆಯವರಾದ ಡಾ. ರಾಜ ಕುಟುಂಬ ದತ್ತು ಪಡೆಯಬೇಕು ಅನ್ನೋ ಆಶಯ ಇದೀಗ ಈಡೇರಿದೆ. ಸಂಡೂರು ತಾಲೂಕಿನ ಜೋಗದ ದಿಗಂಬರ ರಾಜಭಾರತಿ ಸ್ವಾಮೀಜಿ ಬಡ ಮಕ್ಕಳು ಶಿಕ್ಷಣ ಆಶ್ರಯದಿಂದ ವಂಚಿತರಾಗಬಾರದು ಅಂತಾ ಸ್ಥಾಪನೆ ಮಾಡಿದ್ದ ಶಾಲೆಗೆ ಅನುದಾನದ ಕೊರೆತೆಯಿಂದ ಕಷ್ಟಕ್ಕೆ ಸಿಲುಕಿತ್ತು. ಸ್ವಾಮೀಜಿ ಮಾಡಿಕೊಂಡಿದ್ದ ಮನವಿಗೆ ದೊಡ್ಮನೆ ಕುಟುಂಬ ಆಸರೆಯಾಗಿದೆ.

ಕಳೆದ ಡಿಸೆಂಬರ್ ತಿಂಗಳಿನಲ್ಲಿ ವೇದ ಚಿತ್ರದ ಪ್ರಮೋಷನ್ ಗೆ ಹೊಸಪೇಟೆಗೆ ಆಗಮಿಸಿದ್ದ ಡಾ ಶಿವರಾಜಕುಮಾರ ದಂಪತಿಗಳೊಂದಿಗೆ ಶಾಲೆಗೆ ಭೇಟಿ ಮಾಡಿದ್ರು. ಈ ವೇಳೆ ಅನ್ನಪೂಣೇಶ್ವರಿ ವಿದ್ಯಾಪೀಠದ ಮಕ್ಕಳ ಅಳಲು ಆಲಿಸಿದ್ದ ಗೀತಾ ಶಿವರಾಜಕುಮಾರ್ ಶಾಲೆಯನ್ನ ದತ್ತು ಪಡೆಯುವ ಭರವಸೆ ನೀಡಿದ್ರು. ದೊಡ್ಮನೆಯವರು ಕೊಟ್ಟ ಮಾತಿನಂತೆ ಇದೀಗ ಅನ್ನಪೂಣೇಶ್ವರಿ ವಿದ್ಯಾಪೀಠವನ್ನ ದತ್ತು ಪಡೆಯಲು ಮುಂದಾಗಿದ್ದಾರೆ.

ಆ ಹಿನ್ನೆಲೆಯಲ್ಲೆ ಶಾಲೆಗೆ ಗೀತಾ ಶಿವರಾಜಕುಮಾರ್ ಭೇಟಿ ಮಾಡಿ ದತ್ತು ಪ್ರಕ್ರಿಯೆ ಬಗ್ಗೆ ಮಾತುಕತೆ ನಡೆಸಿ ಶಾಲೆ ದತ್ತು ತಗೆದುಕೊಳ್ಳುವುದಾಗಿ ಘೋಷಿಸಿದ್ದು, ಶ್ರೀಘ್ರದಲ್ಲೆ ಟ್ರಸ್ಟ್ ರಚಿಸಿ ಪದಾಧಿಕಾರಿಗಳನ್ನ ನೇಮಕ ಮಾಡಿ ಶಾಲೆಯ ಅಭಿವೃದ್ದಿ ಮಾಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಕನ್ನಡ ಶಾಲೆಯಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಲೈಬ್ರರಿ, ಉತ್ತಮ ಶಿಕ್ಷಣಕ್ಕಾಗಿ ಅಗತ್ಯ ಸೌಕರ್ಯ ಕಲ್ಪಿಸುವ ಭರವಸೆ ದೊಡ್ಮನೆಯವರಿಂದ ದೊರೆತಿದೆ. ಹೀಗಾಗೇ ಈಗಾಗಲೇ ಶಕ್ತಿಧಾಮಕ್ಕೆ ಭೇಟಿ ನೀಡಿ ಅಲ್ಲಿನ ಶಾಲೆಯ ಬಗ್ಗೆ ತಿಳಿದುಕೊಂಡು ಬಂದಿರುವ ಶಿಕ್ಷಕರು ಸಹ ಇದೀಗ ಹರ್ಷಗೊಂಡಿದ್ದು. ಅನ್ನಪೂಣೇಶ್ವರಿ ವಿದ್ಯಾಪೀಠದ ಮಕ್ಕಳಿಗೂ ದೊಡ್ಮನೆ ಕುಟುಂಬ ಉತ್ತಮ ಶಿಕ್ಷಣ ಕೊಡಿಸಲು ಸಾಥ್​​ ನೀಡಿರುವುದು ಶಿಕ್ಷಕರಲ್ಲೂ ಸಂತಸ ಮೂಡಿಸಿದೆ.

ದೊಡ್ಮನೆ ಕುಟುಂಬ ದೊಡ್ಡ ಮನಸ್ಸು ಮಾಡಿ ಹೊಸಪೇಟೆ ತಾಲೂಕಿನ ಅನ್ನಪೂಣೇಶ್ವರಿ ವಿದ್ಯಾಪೀಠವನ್ನ ದತ್ತು ಪಡೆದಿರುವುದು ಮಕ್ಕಳಿಗೂ ಇನ್ನಿಲ್ಲದ ಖುಷಿ ತಂದಿದೆ. ಇದೂವರೆಗೂ ಅಲ್ಪ ಸ್ವಲ್ಪ ಸೌಕರ್ಯಗಳ ಮಧ್ಯೆ ಶಿಕ್ಷಣ ಪಡೆಯುತ್ತಿದ್ದ ಬಡ ಮಕ್ಕಳು ಇದೀಗ ಉತ್ತಮ ಶಿಕ್ಷಕರೊಂದಿಗೆ ಗುಣಮಟ್ಟದ ಶಿಕ್ಷಣ ಸಿಗುವ ಭರವಸೆ ಹೊಂದಿದ್ದಾರೆ. ಶಕ್ತಿಧಾಮದಲ್ಲಿರುವ ಸೌಕರ್ಯಗಳು ನಮ್ಮ ಶಾಲೆಗೂ ಸಿಕ್ರೂ ನಾವೂ ಉತ್ತಮವಾಗಿ ವಿದ್ಯಾಭ್ಯಾಸ ಮಾಡ್ತೇವಿ ಅಂತಿದ್ದಾರೆ. ಅಲ್ಲದೇ ಗೀತಾ ಶಿವರಾಜಕುಮಾರ್ ಶಾಲೆಯನ್ನ ದತ್ತು ಪಡೆದಿರುವುದರಿಂದ ನಮ್ಮಗೆ ದೊಡ್ಮನೆಯ ಆಸರೆ ದೊರೆತಿದೆ ಅಂತಾ ಬಡಮಕ್ಕಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ದಿವಂಗತ ಪಾರ್ವತಮ್ಮ ರಾಜಕುಮಾರ ಮೈಸೂರಿನಲ್ಲಿ ಆರಂಭಿಸಿದ ಶಕ್ತಿಧಾಮದಲ್ಲಿ ಈಗಾಗಲೇ ಸಾವಿರಾರು ಬಡಮಕ್ಕಳು. ಅನಾಥ ಮಕ್ಕಳು. ಅಬಲೆಯರಿಗೆ ಆಶ್ರಮ ದೊರೆತಿದೆ. ಇದೀಗ ದೊಡ್ಮನೆಯವರು ಮತ್ತೊಂದು ಬಡಶಾಲೆಯನ್ನ ದತ್ತು ಪಡೆಯುವ ಮೂಲಕ ಬಡ ಮಕ್ಕಳ ಆಶ್ರಯಕ್ಕೆ ಧಾವಿಸಿದ್ದಾರೆ. ಇದಕ್ಕೆ ಅಲ್ವೇ ದೊಡ್ಮನಯವರದ್ದು ದೊಡ್ಡ ಮನಸ್ಸು ಅನ್ನೋದು.

ವರದಿ: ವೀರೇಶ್​​ ದಾನಿ, ಟಿವಿ9, ಬಳ್ಳಾರಿ

Published On - 12:58 pm, Wed, 17 May 23

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ