AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಇತ್ತೀಚಿಗೆ ಮನೆಗಳಿಗೆ ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಅದರಂತೆ ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕನಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ
ವಿದ್ಯುತ್​ ಬಿಲ್​​
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: ವಿವೇಕ ಬಿರಾದಾರ|

Updated on:Jul 10, 2023 | 12:52 PM

Share

ಬಳ್ಳಾರಿ: ಕರ್ನಾಟಕ ಸರ್ಕಾರ (Karnataka Gorvernment) ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್​ ಉಚಿತ ವಿದ್ಯುತ್​​ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್​​ ಬಿಲ್​​ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್​ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್​ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್​ ಶನಿವಾರ ಜೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮ ಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್​ ಬಂದಿದೆ ಎಂದು ಗಾಬರಿಯಾಗಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಇನ್ನು ಇಷ್ಟೊಂದು ವಿದ್ಯುತ್​ ಬಿಲ್​ ಕಂಡ ಸಿಬ್ಬಂದಿ ಮನಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್​​ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್​ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್​ಲೈನ್​​ನಲ್ಲೂ ಚೆಕ್​ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ.

ಈ ಬಗ್ಗೆ ಮಹೇಶ್​​ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು (ಜು.10) ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 July 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?