AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಇತ್ತೀಚಿಗೆ ಮನೆಗಳಿಗೆ ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಅದರಂತೆ ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕನಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ
ವಿದ್ಯುತ್​ ಬಿಲ್​​
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Jul 10, 2023 | 12:52 PM

Share

ಬಳ್ಳಾರಿ: ಕರ್ನಾಟಕ ಸರ್ಕಾರ (Karnataka Gorvernment) ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್​ ಉಚಿತ ವಿದ್ಯುತ್​​ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್​​ ಬಿಲ್​​ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್​ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್​ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್​ ಶನಿವಾರ ಜೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮ ಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್​ ಬಂದಿದೆ ಎಂದು ಗಾಬರಿಯಾಗಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಇನ್ನು ಇಷ್ಟೊಂದು ವಿದ್ಯುತ್​ ಬಿಲ್​ ಕಂಡ ಸಿಬ್ಬಂದಿ ಮನಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್​​ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್​ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್​ಲೈನ್​​ನಲ್ಲೂ ಚೆಕ್​ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ.

ಈ ಬಗ್ಗೆ ಮಹೇಶ್​​ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು (ಜು.10) ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 July 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ