AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಇತ್ತೀಚಿಗೆ ಮನೆಗಳಿಗೆ ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಅದರಂತೆ ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕನಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ
ವಿದ್ಯುತ್​ ಬಿಲ್​​
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Jul 10, 2023 | 12:52 PM

Share

ಬಳ್ಳಾರಿ: ಕರ್ನಾಟಕ ಸರ್ಕಾರ (Karnataka Gorvernment) ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್​ ಉಚಿತ ವಿದ್ಯುತ್​​ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್​​ ಬಿಲ್​​ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್​ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್​ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್​ ಶನಿವಾರ ಜೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮ ಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್​ ಬಂದಿದೆ ಎಂದು ಗಾಬರಿಯಾಗಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಇನ್ನು ಇಷ್ಟೊಂದು ವಿದ್ಯುತ್​ ಬಿಲ್​ ಕಂಡ ಸಿಬ್ಬಂದಿ ಮನಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್​​ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್​ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್​ಲೈನ್​​ನಲ್ಲೂ ಚೆಕ್​ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ.

ಈ ಬಗ್ಗೆ ಮಹೇಶ್​​ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು (ಜು.10) ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 July 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ