AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಇತ್ತೀಚಿಗೆ ಮನೆಗಳಿಗೆ ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಅದರಂತೆ ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕನಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ
ವಿದ್ಯುತ್​ ಬಿಲ್​​
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ|

Updated on:Jul 10, 2023 | 12:52 PM

Share

ಬಳ್ಳಾರಿ: ಕರ್ನಾಟಕ ಸರ್ಕಾರ (Karnataka Gorvernment) ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್​ ಉಚಿತ ವಿದ್ಯುತ್​​ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್​​ ಬಿಲ್​​ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್​ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್​ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್​ ಶನಿವಾರ ಜೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮ ಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್​ ಬಂದಿದೆ ಎಂದು ಗಾಬರಿಯಾಗಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಇನ್ನು ಇಷ್ಟೊಂದು ವಿದ್ಯುತ್​ ಬಿಲ್​ ಕಂಡ ಸಿಬ್ಬಂದಿ ಮನಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್​​ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್​ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್​ಲೈನ್​​ನಲ್ಲೂ ಚೆಕ್​ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ.

ಈ ಬಗ್ಗೆ ಮಹೇಶ್​​ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು (ಜು.10) ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 July 23

ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ