AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಇತ್ತೀಚಿಗೆ ಮನೆಗಳಿಗೆ ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಅದರಂತೆ ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕನಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ
ವಿದ್ಯುತ್​ ಬಿಲ್​​
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ|

Updated on:Jul 10, 2023 | 12:52 PM

Share

ಬಳ್ಳಾರಿ: ಕರ್ನಾಟಕ ಸರ್ಕಾರ (Karnataka Gorvernment) ಗೃಹ ಜ್ಯೋತಿ (Gruha Jyoti) ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್​ ಉಚಿತ ವಿದ್ಯುತ್​​ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್​​ ಬಿಲ್​​ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್​​ ಬಿಲ್​ ಬರುತ್ತಿದ್ದು, ಗ್ರಾ​​ಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್​​ ಬಿಲ್​ ನೀಡಿದ್ದಾರೆ.

ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್​ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್​ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್​ ಶನಿವಾರ ಜೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮ ಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್​ ಬಂದಿದೆ ಎಂದು ಗಾಬರಿಯಾಗಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಇನ್ನು ಇಷ್ಟೊಂದು ವಿದ್ಯುತ್​ ಬಿಲ್​ ಕಂಡ ಸಿಬ್ಬಂದಿ ಮನಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್​​ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್​ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್​ಲೈನ್​​ನಲ್ಲೂ ಚೆಕ್​ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ.

ಈ ಬಗ್ಗೆ ಮಹೇಶ್​​ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು (ಜು.10) ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 July 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ