ಗಿಫ್ಟ್​ ಪಾಲಿಟಿಕ್ಸ್​: ಬಳ್ಳಾರಿ ಮೇಯರ್​ ಚುನಾವಣೆಯಲ್ಲಿ ಪಾಲಿಕೆ ಸದಸ್ಯರಿಗೆ ಚಿನ್ನ, ಬೆಳ್ಳಿ ಉಡುಗೊರೆ

ಮಾರ್ಚ್​ 28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್​ ಮತ್ತು ಉಪಮೇಯರ್​ ಚುನಾವಣೆ ನಡೆಯಲಿದೆ. ಈ ಸಂಬಂಧ ಮೇಯರ್​ ಮತ್ತು ಉಪಮೇಯರ್ ಸ್ಥಾನಕ್ಕೆ ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್ ಆಕಾಂಕ್ಷಿಗಳಾಗಿದ್ದಾರೆ.

ಗಿಫ್ಟ್​ ಪಾಲಿಟಿಕ್ಸ್​: ಬಳ್ಳಾರಿ ಮೇಯರ್​ ಚುನಾವಣೆಯಲ್ಲಿ ಪಾಲಿಕೆ ಸದಸ್ಯರಿಗೆ ಚಿನ್ನ, ಬೆಳ್ಳಿ ಉಡುಗೊರೆ
ಬೆಳ್ಳಿ, ಬಂಗಾರ ಗಿಫ್ಟ್​​
Follow us
| Updated By: ವಿವೇಕ ಬಿರಾದಾರ

Updated on: Mar 26, 2024 | 11:16 AM

ಬಳ್ಳಾರಿ, ಮಾರ್ಚ್​ 26: ದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election) ಕಾವು ಜೋರಾಗಿದೆ. ಮತದಾರರಿಗೆ ಹಣ-ಹೆಂಡ ಮತ್ತು ಉಡುಗೊರೆಗಳ ಮೂಲಕ ಆಮಿಷ ಒಡ್ಡಲಾಗುತ್ತಿದೆ. ಇದರ ಮೇಲೆ ಚುನಾವಣಾ ಅಧಿಕಾರುಗಳು ಕಣ್ಣಿಟ್ಟಿದ್ದಾರೆ. ಇನ್ನು ಬಳ್ಳಾರಿ (Ballary) ಗಣಿಧಣಿಗಳ ನಾಡು. ಚುನಾವಣೆಯ ಸಮಯದಲ್ಲಿ ಇಲ್ಲಿ ಹಣ ಹೊಳೆಯೇ ಹರಿಯುತ್ತದೆ. ಹಣ ಮತ್ತು ಉಡುಗೊರೆಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತದೆ. ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ (Bellary Municipal Corporation) ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದೆ. ಪಾಲಿಕೆಯ ಗದ್ದುಗೆ ಏರಲು ಆಕಾಂಕ್ಷಿಗಳು ಬರಪೂರ ಉಡುಗೊರೆಗಳನ್ನು ಹಂಚುತ್ತಿದ್ದಾರೆ.

ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌ ಮತ್ತು ಉಪಮೇಯರ್ ಆಕಾಂಕ್ಷಿಗಳಾಗಿದ್ದಾರೆ. ಮೂವರು ಪಾಲೆಕೆ ಸದಸ್ಯರ ಮನೆ – ಮನೆಗೆ ಹೋಗಿ ಊಡೂಗೊರೆ ಕೊಟ್ಟು ಬರುತ್ತಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ

ಮುಲ್ಲಂಗಿ ನಂದೀಶ್ ಪಾಲಿಕೆ ಸದಸ್ಯರಿಗೆ ಬೆಳ್ಳಿ ತಟ್ಟೆ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಬಂಗಾರದ ಚಿಕ್ಕ ಆಭರಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಪಕ್ಷೇತರ ಸದಸ್ಯ ಪ್ರಭಂಜನ್ ರೇಷ್ಮೆ ಪಂಚೆ, ಸೀರೆ ಮತ್ತು ಇನ್ನಿಬ್ಬರುಡ್ರೈಪ್ರೂಟ್ಸ್ ಬಾಕ್ಸ್ ನೀಡಿ ಸನ್ಮಾನ ಮಾಡುತ್ತಿದ್ದಾರೆ.

ಒಟ್ಟು 39 ಸದ್ಯರ ಪೈಕಿ 21 ಕಾಂಗ್ರೆಸ್, 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರಿದ್ದಾರೆ. ಕೆಲವು ಸದಸ್ಯರು ಬಳ್ಳಾರಿ ಶಾಸಕ ಭರತ್ ರೆಡ್ಡಿ ಬೆಂಬಲಿಗರಾಗಿದ್ದರೇ, ಕೆಲವರು ಸಚಿವ ನಾಗೇಂದ್ರ ಬೆಂಬಲಿಗರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು