AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ರೈಲಿನಿಂದ ಬಿದ್ದು ಯುವಕ-ಯುವತಿ ಸಾವು ಪ್ರಕರಣಕ್ಕೆ ತಿರುವು; ಮೃತರು ಅಜ್ಮೀರ್ ಮೂಲದ ದಂಪತಿ

Bellari Railway: 50 ಅಡಿ ದೂರದಲ್ಲಿ ಯುವತಿ ಹಾಗೂ ಯುವಕನ ಶವ ಪತ್ತೆಯಾಗಿದೆ. ಶವದ ಬಳಿ ಮೊಬೈಲ್ ಪತ್ತೆಯಾಗಿದ್ದು, ನಜ್ಜುಗುಜ್ಜಾಗಿರೋ ಮೊಬೈಲ್ ಅನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಲಿಸುವ ರೈಲಿನಿಂದ ಬಿದ್ದು ಯುವಕ-ಯುವತಿ ಸಾವು ಪ್ರಕರಣಕ್ಕೆ ತಿರುವು; ಮೃತರು ಅಜ್ಮೀರ್ ಮೂಲದ ದಂಪತಿ
ಹೊಸಪೇಟೆ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Mar 12, 2022 | 10:05 PM

Share

ವಿಜಯನಗರ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿತ್ತು. ಇವರಿಬ್ಬರೂ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಬಿದ್ದಿರೋ ಶಂಕೆ ವ್ಯಕ್ತವಾಗಿತ್ತು. 50 ಅಡಿ ದೂರದಲ್ಲಿ ಯುವತಿ ಹಾಗೂ ಯುವಕನ ಶವ ಪತ್ತೆಯಾಗಿತ್ತು. ಮೃತರಿಬ್ಬರೂ ಗಂಡ-ಹೆಂಡತಿಯಾಗಿದ್ದು, ಮುಕೇಶ (30) ಮತ್ತು ಭಗವತಿ (25 ವರ್ಷ) ಎಂದು ಗುರುತಿಸಲಾಗಿದೆ. ಮುಕೇಶ, ಟೈಲ್ಸ್ ಕೆಲಸ ಮಾಡುತ್ತಿದ್ದ ಕಾರ್ಮಿಕ. ಮೃತರಿಬ್ಬರು ಅಜ್ಮೀರ್ ದ ನಿವಾಸಿಗಳು. ದಂಪತಿ ಟೈಲ್ಸ್ ಕೆಲಸಕ್ಕಾಗಿ ಅಜ್ಮೀರದಿಂದ ಬೆಂಗಳೂರಿಗೆ, ಹುಬ್ಬಳ್ಳಿ ಮಾರ್ಗವಾಗಿ ತೆರಳುಚವ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮೃತ ಯುವಕನ ಸಹೋದರ ತಿಳಿಸಿದ್ದಾರೆ. ಬಾಗಿಲು ಬಳಿ ಕುಳಿತಿದ್ದ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಬಳ್ಳಾರಿಯ ರೈಲ್ವೆ ಪೊಲೀಸರು (Bellari Railway Police) ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಮನನೊಂದು ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು ಬಳ್ಳಾರಿ: ಮನನೊಂದು ವಿಚಾರಣಾಧೀನ ಖೈದಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಕುಡಿತಿನಿ ಗ್ರಾಮದ ಪೀರ್​ ಸಾಬ್ (28) ಆತ್ಮಹತ್ಯೆ ಮಾಡಿಕೊಂಡ ಕೈದಿ. ಜಿಂದಾಲ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪೀರಸಾಬ್ ಪತ್ನಿ ಮೇಲೆ ಹಲ್ಲೆ ಹಾಗೂ ಕಿರುಕುಳ ಆರೋಪದಲ್ಲಿ ಜೈಲು ಸೇರಿದ್ದ ಆರೋಪಿ. ಮೂರು ದಿನದ ಹಿಂದೆ ಪೀರ್​ಸಾಬ್ ಪತ್ನಿಯಿಂದ ಕುಡತಿನಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಪೀರ್​ ಸಾಬ್ ಜೈಲಿನ ಅಡುಗೆ ಕೋಣೆಯಲ್ಲಿ ತಾನು ಹಾಕಿಕೊಳ್ಳುವ ಶರ್ಟ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ನ್ಯಾಯಾಧೀಶರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದಿಂದ ನಿರಂತರ ತಾರತಮ್ಯ ನಡೆಯುತ್ತಿದೆ: ರಾಮಲಿಂಗಾ ರೆಡ್ಡಿ ಗರಂ

ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿಯನ್ನು ಹಿಂದಿಕ್ಕಲು ಆಗಿಲ್ಲವೆಂಬುದು ವಾಸ್ತವ, ಬೊಮ್ಮಾಯಿ ಸರ್ಕಾರ ಚೆನ್ನಾಗಿಯೇ ನಡೆಯುತ್ತಿದೆ -ದೇವೇಗೌಡ

Published On - 3:29 pm, Sat, 12 March 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು