AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsava 2023: ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

Hampi Utsava 2023: ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 27, 2023 | 9:50 PM

ವಿಜಯನಗರ: ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ವಿಶ್ವ ವಿಖ್ಯಾತ ಹಂಪಿ ಉತ್ಸವ (Hampi Utsava) ವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಬಳಿಕ ಮಾತನಾಡಿ, ಹಂಪಿ ಉತ್ಸವ ಅಂದರೆ ನಮ್ಮ ನಾಡಿನ ಗತವೈಭವದ ಉತ್ಸವ. ಚರಿತ್ರೆಯಲ್ಲಿ ಬದಲಾವಣೆ ತಂದಿದ್ದು ವಿಜಯನಗರ ಸಾಮ್ರಾಜ್ಯ. ಐತಿಹಾಸಿಕ ಹಂಪಿ ಉತ್ಸವ ಎಂ.ಪಿ.ಪ್ರಕಾಶ್​ರಿಂದ ಆರಂಭವಾಗಿದೆ. ಹಂಪಿ ಉತ್ಸವ ರಾಜ್ಯದ ಗತವೈಭವ ಬಿಂಬಿಸುವಲ್ಲಿ ಕಾರಣವಾಗಿದೆ. ಆನಂದ್ ಸಿಂಗ್ ಹೋರಾಟ ಮಾಡಿ ಜಿಲ್ಲೆ ಮಾಡಿಕೊಂಡಿದ್ದಾರೆ. ವಿಜಯನಗರದ ಅಭಿವೃದ್ಧಿಗೆ ಆನಂದ್ ಸಿಂಗ್ ಶ್ರಮಿಸುತ್ತಿದ್ದಾರೆ. ನೈಸರ್ಗಿಕ ಸಂಪತ್ತು ಮತ್ತು ಇತಿಹಾಸ ಬಿಂಬಿಸುವ ಕುರುಹು ಇಲ್ಲಿವೆ. ದೊಡ್ಡ ಪ್ರಮಾಣದಲ್ಲಿ ಹಂಪಿಯನ್ನ ಅಭಿವೃದ್ಧಿ ಮಾಡಬೇಕಾಗಿದೆ ಎಂದು ಹೇಳಿದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 120 ಕೋಟಿ ಅನುದಾನ ಕೊಟ್ಟಿದ್ದೇನೆ. ಇನ್ನೊಂದು 2 ವಾರದಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ. ಸಮಗ್ರ ಕರ್ನಾಟಕ, ನವ ಕರ್ನಾಟಕ ಕಟ್ಟುವ ಸಂಕಲ್ಪ ಮಾಡಬೇಕಿದೆ. ಹಂಪಿ ಅಭಿವೃದ್ಧಿಗೆ ಪ್ರಾಚ್ಯವಸ್ತು ಇಲಾಖೆ ಅನುಮತಿ ಪಡೆಯಬೇಕಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: Hampi Utsav 2023: ಮನ ಸೆಳೆಯುತ್ತಿರುವ ಹಂಪಿ ಉತ್ಸವ: ಜಿಲ್ಲೆಯ ಜೀವ ವೈವಿಧ್ಯತೆ ಅನಾವರಣ

ಕೋವಿಡ್​ನಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ವಿಶ್ವ ವಿಖ್ಯಾತ ಹಂಪಿ ಉತ್ಸವ ಈ ಭಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯುತ್ತಿದೆ. ಹಂಪಿಯ ಗಾಯತ್ರಿ ಪೀಠದ ಬಳಿ ನಿರ್ಮಿಸಿರುವ ಅದ್ದೂರಿಯಾದ ವೇದಿಕೆಯಲ್ಲಿ ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ‌ ಭಾರಿ ಚಾಲನೆ ನೀಡಿದ್ರು. ಸಮಾರಂಭದಲ್ಲಿ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ‌, ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಸೇರಿದಂತೆ ಹಲವು ಗಣ್ಯರು ಉತ್ಸವದಲ್ಲಿ ಭಾಗಿಯಾಗಿದ್ರು.

ವಿವಿಧ ಕಾರ್ಯಕ್ರಮ ಹಾಗೂ ಪ್ರದರ್ಶನ

ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿರುವ ಉತ್ಸವದಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಪ್ರದರ್ಶನಗಳನ್ನ ಆಯೋಜಿಸಲಾಗಿದ್ದು, ಉತ್ಸವದಲ್ಲಿ ಓಡಿಸ್ಸಾದ ಕಲಾವಿದರು ಮರಳಿನಲ್ಲಿ ಅಪರೂಪದ ಮರಳು ಕೃತಿಗಳನ್ನ ರಚಿಸಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಫಲಪುಪ್ಪ ಪ್ರದರ್ಶನ ಆಯೋಜಿಸಿರುವ ಫಲಪುಪ್ಪ ಪ್ರದರ್ಶನದಲ್ಲಿ ಹಂಪಿಯ ವಿವಿದ ಸ್ಮಾರಕಗಳು ಅರಳಿವೆ. ಸಾಲು ಮಂಟಪವನ್ನ ರಚನೆ ಮಾಡಿರುವುದು ಪೇಕ್ಷಕರ ಆಕರ್ಷಣೆಗೆ ಪಾತ್ರವಾಗಿವೆ. ಉತ್ಸವದಲ್ಲಿ ಮೊದಲ ದಿನ ಅರ್ಜುನ ಜನ್ಯ ಸೇರಿದಂತೆ ವಿವಿಧ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳು ನೀಡಲಿದ್ದು, ಸಾಂಸ್ಕೃತಿಕ ಪ್ರೀಯರ ರಂಜನೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:41 pm, Fri, 27 January 23

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್